ಕೋಲಾರದಿಂದ ಟೊಮೆಟೋ ತುಂಬಿಕೊಂಡು ಜೈಪುರಕ್ಕೆ ಹೊರಟಿದ್ದ ಲಾರಿ ನಾಪತ್ತೆ!

Date:

  • ಜು.27ರಂದು ಸುಮಾರು 21 ಲಕ್ಷ ಮೌಲ್ಯದ ಟೊಮೆಟೋ ತುಂಬಿಕೊಂಡು ಜೈಪುರಕ್ಕೆ ಹೊರಟಿದ್ದ ಲಾರಿ
  • ಲಾರಿ ಚಾಲರಿಬ್ಬರ ಮೇಲೆ ಕಳ್ಳತನದ ಅನುಮಾನ; ಮಂಡಿ ವ್ಯಾಪಾರಿಗಳಿಂದ ಕೋಲಾರ ನಗರ ಠಾಣೆಗೆ ದೂರು

ಟೊಮೆಟೋ ಬೆಲೆ ಗಗನಕ್ಕೇರುತ್ತಿರುವ ಮಧ್ಯೆಯೇ ಕಳ್ಳತನದ ವರದಿಗಳೂ ಕೂಡ ಹೆಚ್ಚಾಗುತ್ತಿದೆ. ಈ ನಡುವೆ ಕೋಲಾರದಿಂದ ರಾಜಸ್ಥಾನಕ್ಕೆ ಹೊರಟಿದ್ದ ಟೊಮೆಟೋ ಲಾರಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ಸುಮಾರು 21 ಲಕ್ಷ ಮೌಲ್ಯದ ಟೊಮೆಟೋ ತುಂಬಿದ್ದ ಲಾರಿ ನಾಪತ್ತೆಯಾಗಿರುವುದಾಗಿ ಕೋಲಾರ ಎಪಿಎಂಸಿಯ ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೋ ತುಂಬಿದ್ದ ಲಾರಿ ನಾಪತ್ತೆಯಾಗಿದೆ. ಕೋಲಾರದ ಮೆಹಕ್ ಟ್ರಾನ್ಸ್​​ಪೋರ್ಟ್​ ಸಂಸ್ಥೆಗೆ ಸೇರಿದ ಲಾರಿ ಇದಾಗಿತ್ತು. ಇದರಲ್ಲಿ ಎ.ಜೆ.ಟ್ರೇಡರ್ಸ್ ಸಕ್ಲೇನ್ ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ ಎಂಬುವವರಿಗೆ ಸೇರಿದ್ದ 21 ಲಕ್ಷ ಮೌಲ್ಯದ ಟೊಮೆಟೋಗಳಿದ್ದವು. ಲಾರಿ ಜು.30ರಂದು ಜೈಪುರಕ್ಕೆ ತಲುಪಬೇಕಿತ್ತು. ಚಾಲಕ ನಿನ್ನೆಯಿಂದ(ಜು.29) ಮೊಬೈಲ್​ ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಳ್ಳತನವಾಗಿರುವ ಅನುಮಾನ ವ್ಯಕ್ತಪಡಿಸಿ ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಸ್ಥಾನ ನೋಂದಾಯಿತ RJ 04 GC 3756 ನಂಬರಿನ ಲಾರಿಯಲ್ಲಿ ಇಬ್ಬರು ಚಾಲಕರು ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

tomato lorry

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ಹೆಸರು ಹೇಳಲಿಚ್ಛಿಸದ ಟ್ರಾನ್ಸ್​​ಪೋರ್ಟ್​ ಸಂಸ್ಥೆಯ ವ್ಯಕ್ತಿಯೋರ್ವರು, ‘ಲಾರಿಯಲ್ಲಿ ಇಬ್ಬರು ಚಾಲಕರು ತೆರಳಿದ್ದರು. ರಾಜಸ್ಥಾನದಿಂದ ಬಂದಿದ್ದ ಲಾರಿ ಕೋಲಾರದ ಎಪಿಎಂಸಿಯಿಂದ ಟೊಮೆಟೋ ತುಂಬಿಕೊಂಡು ಜು.27ರಂದು ಹೋಗಿತ್ತು. ನಿಗದಿತ ಸ್ಥಳಕ್ಕೆ 300 ಕಿ.ಮೀ ಇರುವಾಗ ನಮಗೆ ಕೊನೆಯ ಕರೆ ಬಂದಿತ್ತು. ಕೊನೆಯ ಟೋಲ್ ಪ್ಲಾಝಾದಿಂದ ಲಾರಿ ಪಾಸಾಗಿರುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಸಂಸ್ಥೆಯ ಮಾಲೀಕರು ಕೋಲಾರದಿಂದ ಜೈಪುರಕ್ಕೆ ಮಾಹಿತಿ ಪಡೆಯಲು ತೆರಳಿದ್ದಾರೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...