ಬೀದರ್‌ | ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಬೃಹತ್‌ ಪ್ರತಿಭಟನೆ

Date:

ಬೀದರ ಜಿಲ್ಲೆಯಲ್ಲಿ ಶೋಷಿತರ, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆಗಳು ನಡೆಯುತ್ತಿರುವುದನ್ನು ಖಂಡಿಸಿ ಶೋಷಿತರ ಸಂರಕ್ಷಣಾ ಸಮಿತಿಯಿಂದ ಬೀದರ್‌ನಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಡಾ.ಬಿ.ಆರ್.‌ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಎಂ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಸಲ್ಲಿಸಿದರು.

“ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜಿಲ್ಲೆಯಲ್ಲಿ ಶೋಷಿತ, ದಲಿತ, ಹಿಂದುಳಿದ ಅಲ್ಪಸಂಖ್ಯಾತರ ಮೇಲೆ ನಿರಂತರ ಅತ್ಯಾಚಾರ, ದಬ್ಬಾಳಿಕ, ಹಲ್ಲೆಗಳು ನಡೆಯುತ್ತಿವೆ. ಡಾ.ಬಿ. ಆರ್.‌ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡುವುದು, ಅಂಬೇಡ್ಕರ್‌ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಬರೆಯುವ ಕೃತ್ಯಗಳು ನಿರಂತರವಾಗಿ ನಡೆಯುತ್ತಿದೆ. ಇನ್ನೊಂದೆಡೆ ಸಂಸದ ಅನಂತಕುಮಾರ ಹೆಗೆಡೆ ಪುನಃ ಪುನಃ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಆದರೂ ಸರ್ಕಾರ ಇಂತಹ ಕಿಡಿಗೇಡಿಗಳ ಮೇಲೆ ಯಾವುದೇ ಕಾನೂನು ಕ್ರಮಕೈಗೊಳ್ಳುತ್ತಿಲ್ಲ” ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಜಿಲ್ಲೆಯಲ್ಲಿ ಶೋಷಿತ, ದಲಿತರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆದರೆ ಆಯಾ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಆದರೆ ಅದು ಆದೇಶಕಷ್ಟೇ ಸಿಮೀತವಾಗಿದೆ. ಇಲ್ಲಿಯವರೆಗೂ ಡಿಸಿ, ಎಸ್‌ಪಿಗಳು ಯಾವುದೇ ತಪ್ಪಿಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಂಡ ಉದಾಹರಣೆಗಳಿಲ್ಲ. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕುನಿಂದ ಅಧಿಕಾರಿಗಳು ಸಚಿವರ ಕೈಗೊಂಬೆಯಾಗಿದ್ದಾರೆ” ಎಂದು ಆರೋಪಿಸಿದರು.

“ಸುಮಾರು 50ಕ್ಕೂ ಹೆಚ್ಚು ವರ್ಷಗಳಿಂದ ಬಡ ದಲಿತರು ವ್ಯವಸಾಯ ಮಾಡಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. ಆದರೆ, ಅನ್ಯಾಯವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬಡ ರೈತರ ಕೃಷಿ ಭೂಮಿ ವಶಪಡಿಸಿಕೊಂಡು, ಅವರ ಹೆಸರಿನಲ್ಲಿದ್ದ ಪಹಣಿ, ಮ್ಯುಟೇಶನ್, ʼಸಿʼ ಫಾರಂ ಸೇರಿದಂತೆ ಇತರ ದಾಖಲಾತಿಗಳು ರದ್ದುಪಡಿಸುತ್ತಿದ್ದಾರೆ. ಇನ್ನೊಂದೆಡೆ ಬಗರ್‌ ಹುಕುಂ ಸಾಗುವಳಿ ಭೂಮಿಯನ್ನು ಜಾತಿ ಬಲಾಡ್ಯರು ಅಕ್ರಮ ಸಾಗುವಳಿ ಮಾಡಿಕೊಂಡಿದ್ದಾರೆ. ಆದರೆ ಅರಣ್ಯ ಅಧಿಕಾರಿಗಳು ಜಾತಿ ಬಲಾಡ್ಯರಿಂದ ಅಕ್ರಮ ಭೂಮಿ ವಶಪಡಿಸಿಕೊಳ್ಳಲು ಯಾಕೆ ಧೈರ್ಯ ತೋರುತ್ತಿಲ್ಲ” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು

ಪ್ರತಿಭಟನೆಯಲ್ಲಿ ಶೋಷಿತರ ಸಂರಕ್ಷಣಾ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ರಾಜಕುಮಾರ ಮೂಲಭಾರತಿ ಜಿಲ್ಲಾಧ್ಯಕ್ಷ ವಿಷ್ಣುವರ್ಧನ ವಾಲದೊಡ್ಡಿ, ಉಪಾಧ್ಯಕ್ಷ ರಾಜಕುಮಾರ ಶಿಂಧೆ, ಸುರೇಶ ಜೋಜನಾಕರ್, ಸಂಘಟನಾ ಕಾರ್ಯದರ್ಶಿ ಗೌತಮ ಪ್ರಸಾದ ಸೇರಿದಂತೆ ಸಮಿತಿಯ ಪ್ರಕಾಶ ರಾವಣ, ಅಮೃತ ಮುತ್ತಂಗಿಕರ್, ಸಿದ್ದಾರ್ಥ ಪ್ಯಾಗೆ ಸುಭಾಷ ಲಾಧಾ ರಾಜಕುಮಾರ್‌ ಸಿಂಧೆ ಹಾಗೂ ಮಹಿಳೆಯರು ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...