ಫೆಬ್ರವರಿ 23 ರಂದು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಸಾರ್ವಜನಿಕ ಸಭೆ

Date:

ಚಿಂತಾಮಣಿ:ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ ಸ್ಪಷ್ಟತೆ ಇಲ್ಲದ ಕಾಯ್ದೆಯನ್ನು ಜಾರಿಗೊಳಿಸಲು ಹೊರಟಿರುವುದನ್ನು ಖಂಡಿಸಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಫೆಬ್ರವರಿ 23 ರಂದು ಚಿಕ್ಕಬಳ್ಳಾಪುರದ ಬೈಪಾಸ್ ರಸ್ತೆಯ ಅಗಲಗುರ್ಕಿ ಬಳಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ, ಕೋಲಾರ ಬೆಂಗಳೂರು ಗ್ರಾಮಾಂತರ ಮೂರು ಜಿಲ್ಲೆಗಳನ್ನು ಒಳಗೊಂಡ ಬೃಹತ್ ಸಾರ್ವಜನಿಕ ಸಭೆಯಾಗಿದೆ ಮೂರು ಜಿಲ್ಲೆಗಳ ಎಲ್ಲ ತಾಲ್ಲೂಕುಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸುತ್ತಾರೆ. ಕೇಂದ್ರ ಸರ್ಕಾರವು ಇಡೀ ದೇಶದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ.2002 ರಲ್ಲಿದ್ದ ಮತದಾರರ ಪಟ್ಟಿಯ ಮ್ಯಾಪಿಂಗ್ ಮಡಲಿದ್ದು ಹೊಸದಾಗಿ ಸೇರ್ಪಡೆಯಾಗಿದ್ದವರನ್ನು ತೆಗೆದುಹಾಕಲಾಗುತ್ತಿದೆ.

ಹಿಂದಿನ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದ ಬೂತ್ ಹಂತದ ಏಜೆಂಟರು ಎಚ್ಚೆತ್ತುಕೊಳ್ಳಬೇಕು ಅರ್ಹ ಮತದಾರರನ್ನು ಕೈಬಿಡದಂತೆ ಜಾಗೃತಿ ವಹಿಸಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ ಸ್ಪಷ್ಟತೆ ಇಲ್ಲದ ವಿಬಿ ರಾಮ್ ಜಿ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದರ ಜನವಿರೋಧಿ ನೀತಿಗಳ ಕುರಿತು ಜನಜಾಗೃತಿ ಮೂಡಿಸಬೇಕಾಗಿದೆ ಅನುದಾನವನ್ನು ಕಡಿತಗೊಳಿಸಲಾಗಿದೆ ವಿವಿಧ ನಿರ್ಭಂಧಗಳನ್ನು ಹೇರಲಾಗಿದೆ ರಾಜ್ಯ ಸರ್ಕಾರಗಳ ಮೇಲೆ ಹೊರೆ ಹಾಕುತ್ತಿದ್ದಾರೆ.

ಇದನ್ನು ಓದಿದ್ದೀರಾ…? ಮಾರ್ಕಂಡೇಶ್ವರ ಜಾತ್ರಾ ಮಹೋತ್ಸವ ಭಕ್ತಾದಿಗಳಿಗೆ ನೀರು ಮಜ್ಜಿಗೆ ವಿತರಣೆಗೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ

ಮನ್ರೇಗಾ ದಲ್ಲಿ ರಾಜ್ಯ ಸರ್ಕಾರದ ಪಾಲಿ ಶೇ.10, ಕೇಂದ್ರದ್ದು ಶೇ.90 ರಷ್ಟಿತ್ತು ರಾಜ್ಯಗಳೊಂದಿಗೆ ಸಮಾಲೋಚಿಸದೆ ಏಕಾಏಕಿ ರಾಜ್ಯಗಳ ಪಾಲು ಶೇ.40 ಕ್ಕೆ ಎರಿಕೆ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಆರ್ಥಿಕ ಹೊರೆ ಎದುರಿಸಬೇಕಾಗುತ್ತದೆ ಎಂದರು.

ಕ್ಷೇತ್ರದ ಕಾಂಗ್ರೆಸ್ ನ ಎಲ್ಲಾ ಮುಖಂಡರುಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...