ಕಲಬುರಗಿ | ಮೂರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

Date:

ಗಂಡ ಹೆಂಡತಿ ಮಧ್ಯೆ ಸಣ್ಣ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಸ್ವತಃ ತಾಯಿ ತನ್ನ ಮೂವರು ಮಕ್ಕಳಿಗೆ ಸ್ಟೈಟ್ ಬಾಟಲಿಯಲ್ಲಿ ವಿಷ ಬೆರೆಸಿ ಕುಡಿಸಿ, ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಂಚೋಳಿ ತಾಲ್ಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ನಡೆದಿದೆ.

ಗೀತಾಬಾಯಿ ಸಂತೋಷ್ ರಾಠೋಡ್ (30) ಎಂಬ ಮಹಿಳೆ ಗಂಡನ ಮೇಲಿನ ಸಿಟ್ಟಿಗೆ ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಸೇವಿಸಿ ಮಕ್ಕಳಾದ ಚೈತನ್ಯ (4) ಧನುಷ್ (3) ಲಕ್ಷ್ಮಿ ಗೆ (ಒಂದುವರೆ ತಿಂಗಳು) ಕುಡಿಸಿದ್ದಾಳೆ. ಈ ಪೈಕಿ ಹಸುಗೂಸು ಲಕ್ಷ್ಮಿ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಗಳಿಗೆ ಗಂಡ-ಹೆಂಡತಿ ಮಧ್ಯೆ ಆಗಾಗ ಮಾತಿನ ಚಕಮಕಿ ನಡೆಯುತ್ತಿತ್ತು ಎನ್ನಲಾಗಿದೆ. ಪತ್ನಿ ಗೀತಾ ಮಕ್ಕಳಿಗೆ ಹೊಡೆದಾಗಲೆಲ್ಲಾ ಆತ ಪತ್ನಿಯನ್ನು ದಬಾಯಿಸುತ್ತಿದ್ದ, ಭಾನುವಾರ ಸಹ ಇದೇ ರೀತಿ ದಂಪತಿ ಮಧ್ಯೆ ಪರಸ್ಪರ ವಾಗ್ವಾದ ನಡೆದ ಬಳಿಕ ಸಂತೋಷ್ ಹೊರಗಡೆ ತೆರಳಿದ ವೇಳೆ ಗೀತಾ ಗಂಡನ ಮೇಲಿನ ಸಿಟ್ಟಿನಿಂದ ಮನನೊಂದು ಈ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷ ಕುಡಿದ ಬಳಿಕ ತೀವ್ರ ಸ್ವರೂಪದ ಹೊಟ್ಟೆ ನೋವು ಹಾಗೂ ಅಸಹನೀಯ ಸಂಕಟದಿಂದ ಮಕ್ಕಳು ಚೀರಾಟ ನಡೆಸಿರುವುದು ಗಮನಿಸಿದ ನೆರೆಹೊರೆಯವರು ಗೀತಾ ತಾನೂ ವಿಷ ಕುಡಿದು ಮಕ್ಕಳಿಗೂ ವಿಷ ಕುಡಿಸಿರುವುದು ಗೊತ್ತಾಗುತ್ತಿದ್ದಂತೆಯೇ ಆಕೆಯ ಪತಿ ಸಂತೋಷನಿಗೆ ಮಾಹಿತಿ ತಲುಪಿಸಿ ತಕ್ಷಣ ತಾಯಿ-ಮಕ್ಕಳನ್ನು ಚಿಂಚೋಳಿಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼವಚನ ದರ್ಶನʼ ಕೃತಿಯಿಂದ ವಚನ ಸಾಹಿತ್ಯ ನಿರ್ನಾಮಕ್ಕೆ ಯತ್ನ : ಆರ್.ಕೆ.ಹುಡಗಿ

ಚಿಂಚೋಳಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಎಲ್ಲರನ್ನೂ ಬೀದರ್ ಬ್ರಿಮ್ಸ್‌ಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...