ಮೈಸೂರು | ವೈದ್ಯಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ; ಮೊದಲ ರೋಬೋಟಿಕ್ ಥೈರಾಯ್ಡ್ ಶಸ್ತ್ರಚಿಕಿತ್ಸೆ ಯಶಸ್ವಿ

Date:

ಮೈಸೂರಿನ ಭಾರತ್ ಆಸ್ಪತ್ರೆ ಮತ್ತು ಆಂಕಾಲಜಿ ಹಾಗೂ ರೋಬೋಟಿಕ್ ಸರ್ಜರಿ ಸಂಸ್ಥೆ ವೈದ್ಯಕೀಯ ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ, ಡಾ ವಿಂಚಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಥೈರಾಯ್ಡ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.

ಈ ಸಾಧನೆಯ ಮೂಲಕ, ಬಿಹೆಚ್ಐಓ ಸಂಸ್ಥೆ ತಲೆಯ ಮತ್ತು ಕುತ್ತಿಗೆಯ ಶಸ್ತ್ರಚಿಕಿತ್ಸೆಯಲ್ಲಿ ಮೈಸೂರಿನಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದೆ. ರೋಬೋಟಿಕ್ ವಿಧಾನವು ಸಾಂಪ್ರದಾಯಿಕ ಶಸ್ತ್ರಚಿಕಿತ್ಸೆಗಿಂತ ಹಲವು ಮುಖ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ಗೋಚರಿಸುವ ಗಾಯದ ಗುರುತು ಇಲ್ಲದ ಶಸ್ತ್ರಚಿಕಿತ್ಸೆ, ಕಡಿಮೆ ರಕ್ತಸ್ರಾವ, ಅತಿ ನಿಖರ ದೃಶ್ಯೀಕರಣ, ಶೀಘ್ರ ಚೇತರಿಕೆ, ಕಡಿಮೆ ಅವಧಿಯಲ್ಲೇ ಡಿಸ್ಚಾರ್ಜ್ ಆಗಬಹುದು.

ಶಸ್ತ್ರಚಿಕಿತ್ಸೆಯನ್ನು ಮುನ್ನಡೆಸಿದ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಎಂ. ವಿಜಯ್ ಕುಮಾರ್ ಮಾತನಾಡಿ,” ಇದು ಬಿಹೆಚ್ಐಓ ಗೂ ಮತ್ತು ಮೈಸೂರಿಗೂ ಐತಿಹಾಸಿಕ ಕ್ಷಣ. ರೋಬೋಟಿಕ್ ಥೈರಾಯ್ಡ್ ಶಸ್ತ್ರಚಿಕಿತ್ಸೆಯಿಂದ ನಾವು ಅತಿ ಚಿಕ್ಕ ಕತ್ತರಿಕೆಗಳ ಮೂಲಕ ಜಟಿಲ ಕಾರ್ಯಗಳನ್ನು ನೆರವೇರಿಸಬಹುದು. ಇದರಿಂದ, ರೋಗಿಗಳಿಗೆ ನೋವು ಕಡಿಮೆ ಇರುತ್ತದೆ, ಕಡಿಮೆ ಅವಧಿಯಲ್ಲಿ ಚೇತರಿಕೆ ಕಾಣಬಹುದು ಹಾಗೂ ಶಸ್ತ್ರಚಿಕಿತ್ಸೆಯ ಗುರುತು ಕೂಡಾ ಕಾಣಿಸುವುದಿಲ್ಲ ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹೆಚ್ಐಓ ಕಾರ್ಯಾಧ್ಯಕ್ಷ ಡಾ. ಬಿ. ಎಸ್. ಅಜಯ್ ಕುಮಾರ್ ಮಾತನಾಡಿ “ ಮೈಸೂರಿನ ಜನತೆಗೆ ವಿಶ್ವಮಟ್ಟದ ಚಿಕಿತ್ಸೆ ತಲುಪಿಸುವ ನಮ್ಮ ಸಂಕಲ್ಪವನ್ನು ಈ ಸಾಧನೆ ಮತ್ತಷ್ಟು ಬಲಪಡಿಸಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ನಮ್ಮ ಪ್ರದೇಶದಲ್ಲೇ ಲಭ್ಯವಾಗುವಂತೆ ಮಾಡುವ ಬದ್ಧತೆಯೊಂದಿಗೆ ನಾವು ಮುಂದುವರೆಯುತ್ತೇವೆ.” ಎಂದು ಹೇಳಿದರು.

ಈ ಶಸ್ತ್ರಚಿಕಿತ್ಸೆಗೆ ಒಳಗಾದ ಯುವ ರೋಗಿ, ಥೈರಾಯ್ಡ್ ಕ್ಯಾನ್ಸರ್ ಹೊಂದಿದ್ದು, ಕುತ್ತಿಗೆಯಲ್ಲಿ ಗುರುತು ಬಯಸದ ಕಾರಣದಿಂದ ರೋಬೋಟಿಕ್ ವಿಧಾನ ಆಯ್ಕೆ ಮಾಡಿದರು. ಶಸ್ತ್ರಚಿಕಿತ್ಸೆಯ 48 ಗಂಟೆಗಳೊಳಗೆ ಡಿಸ್ಚಾರ್ಜ್ ಆಗಿ, ಉತ್ತಮವಾಗಿ ಚೇತರಿಕೆ ಕಂಡಿದ್ದಾರೆ. ರೋಬೋಟಿಕ್ ಥೈರಾಯ್ಡೆಕ್ಟಮಿ ವಿಧಾನವು ಸಾಮಾನ್ಯ ಓಪನ್ ಶಸ್ತ್ರಚಿಕಿತ್ಸೆಗಿಂತ ಹಲವಾರು ಲಾಭಗಳನ್ನು ಹೊಂದಿದೆ. ಕುತ್ತಿಗೆಯಲ್ಲಿ ಗೋಚರಿಸುವ ಗಾಯದ ಗುರುತು ಇರುವುದಿಲ್ಲ. ಶಸ್ತ್ರಚಿಕಿತ್ಸಾ ಗಾಯ ಮತ್ತು ರಕ್ತಸ್ರಾವ ಕಡಿಮೆ ಇರುತ್ತದೆ. 3D ದೃಶ್ಯೀಕರಣದಿಂದ ಹೆಚ್ಚಿನ ಶಸ್ತ್ರಚಿಕಿತ್ಸಾ ನಿಖರತೆ, ಕಡಿಮೆ ದಿನಗಳ ಆಸ್ಪತ್ರೆ ವಾಸ ಮತ್ತು ಶೀಘ್ರವಾಗಿ ಸಹಜ ಜೀವನಕ್ಕೆ ಮರಳ ಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಭ್ರಮದ ಜನಸ್ವಾತಂತ್ರ್ಯೋತ್ಸವ; ಸಂವಿಧಾನ ಸಂರಕ್ಷಣಾ ಪಡೆಗೆ ಚಾಲನೆ

ಭಾರತ್ ಆಸ್ಪತ್ರೆ ಮತ್ತು ಆಂಕಾಲಜಿ ಹಾಗೂ ರೋಬೋಟಿಕ್ ಸರ್ಜರಿ ಸಂಸ್ಥೆ ಮೈಸೂರಿನ ಸಮಗ್ರ ಕ್ಯಾನ್ಸರ್ ಚಿಕಿತ್ಸೆ ಮತ್ತು ಅತ್ಯಾಧುನಿಕ ಕನಿಷ್ಠ ಹಾನಿಕರ ಶಸ್ತ್ರಚಿಕಿತ್ಸೆಗಳ ಪ್ರಮುಖ ಕೇಂದ್ರವಾಗಿದೆ. ವಿಶ್ವದರ್ಜೆಯ ಡಾ. ವಿಂಚಿ ರೋಬೋಟಿಕ್ ಶಸ್ತ್ರಚಿಕಿತ್ಸಾ ವ್ಯವಸ್ಥೆ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಬಿಹೆಚ್ಐಓ, ನಿಖರ ವೈದ್ಯಕೀಯ ಸೇವೆ, ರೋಗಿಗಳ ಸುರಕ್ಷತೆ ಮತ್ತು ಉತ್ತಮ ಜೀವನಮಟ್ಟ ಕಾಪಾಡುವುದಕ್ಕೆ ಬದ್ಧವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...