ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿ ಹಾಡಿದ ಹೊಸ ಪರೀಕ್ಷಾ ವಿಧಾನ: ಸಿಎಂ ಸಿದ್ದರಾಮಯ್ಯ

Date:

  • ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2ರಲ್ಲಿ 41,961 ವಿದ್ಯಾರ್ಥಿಗಳು ಉತ್ತೀರ್ಣ’
  • ‘ಮತ್ತೊಂದು ವರ್ಷ ಕಾಯಲಾಗದೆ ಶಿಕ್ಷಣ ಮೊಟಕುಗೊಳಿಸುತ್ತಿದ್ದ ವಿದ್ಯಾರ್ಥಿಗಳಿಗೆ ವರ’

ನಮ್ಮ ಸರ್ಕಾರದ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದಾಗಿ ಕಳೆದ ಆಗಸ್ಟ್ – ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2 ರಲ್ಲಿ ಒಟ್ಟು 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ಶಿಕ್ಷಣ ಮುಂದುವರೆಸುವ ಅರ್ಹತೆ ಗಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನಾಡಿನ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಿಮುಖನಾಗದೆ ಗರಿಷ್ಠ ಹಂತದವರೆಗೆ ಶಿಕ್ಷಣ ಪಡೆದು, ದೇಶದ ಆಸ್ತಿಯಾಗಬೇಕೆಂಬ ನಮ್ಮ ಉದ್ದೇಶಕ್ಕೆ ದೊರೆತಿರುವ ಈ ಆರಂಭಿಕ ಯಶಸ್ಸು ಮುಂದಿನ ದಿನಗಳಲ್ಲಿ ಮತ್ತಷ್ಟು ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈವರೆಗೆ ವರ್ಷಕ್ಕೊಮ್ಮೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆ ನಡೆಸಲಾಗುತ್ತಿತ್ತು. ಇದು ವಿದ್ಯಾರ್ಥಿಗಳ ಮೇಲೆ ಪರೀಕ್ಷಾ ಒತ್ತಡವನ್ನು ಹೆಚ್ಚಿಸಿ, ಅವರ ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಪ್ರಗತಿಯನ್ನು ಕುಂಠಿತಗೊಳಿಸುತ್ತಿತ್ತು ಜೊತೆಗೆ ವಾರ್ಷಿಕ ಮತ್ತು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಮತ್ತೊಂದು ವರ್ಷ ಕಾಯಲಾಗದೆ ಶಿಕ್ಷಣ ಮೊಟಕುಗೊಳಿಸುತ್ತಿದ್ದ ಉದಾಹರಣೆಗಳು ಸಾಕಷ್ಟಿದ್ದವು. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ನಮ್ಮ ಸರ್ಕಾರವು ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸುವ ವಿನೂತನ ಪದ್ಧತಿ ಜಾರಿ ಮಾಡಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ

ಏನಿದು ಹೊಸ ನಿಯಮ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಹೊಸ ಬದಲಾವಣೆಗಳನ್ನು 2023-24 ನೇ ಶೈಕ್ಷಣಿಕ ಸಾಲಿನಿಂದ ತರಲಾಗಿದೆ.

ಹಾಲಿ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪದ್ದತಿಯ ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಹಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿತ್ತು. ಇದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ, ಅರ್ಥಪೂರ್ಣ ಕಲಿಕೆ, ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿತ್ತು.

ಸರ್ಕಾರದ ಹೊಸ ನಿಯಮದ ಪ್ರಕಾರ ‘ಪೂರಕಪರೀಕ್ಷೆ’ ಎಂಬ ಹೆಸರಿನ ಬದಲಿಗೆ ‘ವಾರ್ಷಿಕ ಪರೀಕ್ಷೆ 1, 2, ಮತ್ತು 3’ ಎಂದು ಹೆಸರಿಸುವುದರೊಂದಿಗೆ ಮೂರು ಅವಕಾಶಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಯ ಒಟ್ಟಾರೆ
ಕಾರ್ಯಕ್ಷಮತೆಯನ್ನು ಮತ್ತು ಸಕಾರಾತ್ಮಕ ಮನೋಭಾವವನ್ನು ಉತ್ತೇಜಿಸಲು ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಯು ಗಳಿಸಿದ ಅಂಕಗಳಿಂದ ತೃಪ್ತರಾಗದಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶವಿದೆ. 1 , 2, ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶವನ್ನು ಒದಗಿಸಲಾಗಿದೆ. ಇದು ವಿದ್ಯಾರ್ಥಿಗಳ ಮುಂದಿನ ವ್ಯಾಸಂಗಕ್ಕೆ ಅಥವಾ ಉದ್ಯೋಗಕ್ಕೆ ಆಯ್ಕೆ ಪ್ರಕ್ರಿಯೆಗಳಲ್ಲಿ ಉತ್ತಮ ಅವಕಾಶಗಳನ್ನು ಒದಗಿಸಿದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...