ಬಾಗೇಪಲ್ಲಿ | ಸಾವಯವ ಕೃಷಿಯಿಂದ ಬದುಕು ಕಟ್ಟಿಕೊಂಡ ಪ್ರಗತಿಪರ ರೈತ

Date:

ಸಾವಯವ ಕೃಷಿಯೊಂದಿಗೆ ಪಶುಪಾಲನೆ ಅಳವಡಿಸಿಕೊಂಡಿರುವ ಪ್ರಗತಿಪರ ರೈತ ಪಿ ಈಶ್ವರರೆಡ್ಡಿ ಉತ್ತಮ ಬದುಕು ಕಟ್ಟಿಕೊಂಡು ಜಿಲ್ಲೆಗೆ ಮಾದರಿ ರೈತ ಎನಿಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದ ಪ್ರಗತಿಪರ ರೈತ ಪಿ.ಈಶ್ವರರೆಡ್ಡಿ ತಮ್ಮ 6 ಎಕರೆ ಜಮೀನಿನಲ್ಲಿ ನವಣೆ, ಸಾಮೆ, ರಾಗಿ, ಭತ್ತ, ಮುಸುಕಿನ ಜೋಳ, ನೆಲಗಡಲೆ, ಬೀಟ್‍ರೂಟ್, ಹೂ ಕೋಸು, ಸೇವಂತಿಗೆ, ಚೆಂಡುಹೂವು ಸೇರಿದಂತೆ ವಿವಿಧ ತರಕಾರಿ ಹಾಗೂ ಹೂಗಳನ್ನು ಬೆಳೆಯುತ್ತಿದ್ದು, ಸಮಗ್ರ ಕೃಷಿಗೆ ಉದಾಹರಣೆಯಾಗಿದ್ದಾರೆ.

ರೈತ ಈಶ್ವರರೆಡ್ಡಿ ತಾವು ಬೆಳೆಯುವ ಎಲ್ಲಾ ಬೆಳೆಗಳಿಗೂ ಸಾವಯವ ಗೊಬ್ಬರ ಬಳಕೆ ಮಾಡುತ್ತಿದ್ದಾರೆ. ರಾಸಾಯನಿಕ ಗೊಬ್ಬರ ಬಳಕೆ ಮಾಡದೆ ವಿವಿಧ ತಳಿಯ ಬೆಳೆಗಳು ಹಾಗೂ ತರಕಾರಿ, ಹಣ್ಣು, ಹೂಗಳನ್ನು ಬೆಳೆಯುವ ಮೂಲಕ ಅಕ್ಕಪಕ್ಕದ ರೈತರಿಗೆ ಮಾದರಿಯಾಗಿದ್ದಾರೆ. ಇವರ ಮಾದರಿ ಕೃಷಿಯನ್ನು ತಿಳಿಯುವ ಸಲುವಾಗಿ ತಾಲೂಕಿನ ಯಲ್ಲಂಪಲ್ಲಿ, ಆಚೇಪಲ್ಲಿ, ಮಿಟ್ಟೇಮರಿ, ಗೂಳೂರು ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳ ರೈತರು ಆಗಮಿಸಿ ಕೃಷಿ ಮಾಹಿತಿ ಪಡೆದು ಅನುಕೂಲ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2 ಎಕರೆ ಮುಸುಕಿನ ಜೋಳ, ತಲಾ ಒಂದು ಎಕರೆಯಲ್ಲಿ ಬೀಟ್‌ರೂಟ್, ಹೂಕೋಸು, ನೆಲಗಡಲೆ, ಟೊಮೆಟೊ, ಭತ್ತ, ರಾಗಿ, ಸಾಮೆ, ನವಣೆ, ಸೂರ್ಯಕಾಂತಿ ಸೇರಿದಂತೆ ಇತರೆ ತಳಿಯ ಬೆಳೆಗಳು ಹಾಗೂ ತರಕಾರಿಗಳನ್ನು ಬೆಳೆದಿದ್ದಾರೆ. ಅರ್ಧ ಎಕರೆಯಲ್ಲಿ ಸೇವಂತಿಗೆ ಹಾಗೂ ಚೆಂಡು ಹೂವು ಬೆಳೆದಿದ್ದಾರೆ.

ಕೃಷಿಯೊಂದಿಗೆ ಪಶುಪಾಲನೆ :

ಕೃಷಿಯೊಂದಿಗೆ ಪಶುಪಾಲನೆಯನ್ನು ಅಳವಡಿಸಿಕೊಂಡಿರುವ ಇವರು, ಕುರಿ, ಮೇಕೆ, ಸೀಮೆಹಸು, ನಾಟಿಹಸು ಹಾಗೂ ಹೈಬ್ರಿಡ್ ತಳಿಯ ಮೇಕೆಗಳನ್ನು ಸಾಕಿದ್ದಾರೆ.

ತಮ್ಮ ಜಮೀನಿನಲ್ಲಿ 90 ತೆಂಗಿನ ಮರ, 95 ಹುಣಸೆ ಮರ, 80 ಮಾವಿನ ಮರ, 10 ಹಲಸಿನ ಮರ ಹಾಗೂ 4 ನುಗ್ಗೆ ಗಿಡಗಳನ್ನು ಬೆಳೆಸಿದ್ದಾರೆ. ಇದರೊಂದಿಗೆ ಕೃಷಿ ಶೆಡ್, ಕೃಷಿ ಹೊಂಡ, ಕೊಳವೆಬಾವಿಯನ್ನು ನಿರ್ಮಾಣ ಮಾಡಿದ್ದಾರೆ. ಮಳೆ ನೀರನ್ನು ಸಂಗ್ರಹಿಸುವ ವಿಧಾನಗಳನ್ನು ಅಳವಡಿಸಿಕೊಂಡಿದ್ದಾರೆ. ಹನಿ ಹಾಗೂ ತುಂತುರು ನೀರಾವರಿ ಪದ್ಧತಿಯನ್ನೂ ಅಳವಡಿಸಿಕೊಂಡಿದ್ದಾರೆ.

ಇತರೆ ರಾಜ್ಯಗಳಿಂದ ಕೃಷಿ ಮಾಹಿತಿ :

ಕೃಷಿಯನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವ ಪಿ ಈಶ್ವರ್‌ ರೆಡ್ಡಿ ಪಕ್ಕದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿಗೆ ಭೇಟಿ ನೀಡಿ ಅಲ್ಲಿನ ರೈತರಿಂದ ಸಾವಯವ ಕೃಷಿ ವಿಧಾನಗಳ ಕುರಿತು ಮಾಹಿತಿ ಪಡೆಯುತ್ತಾರೆ. ಕೃಷಿ ತ್ಯಾಜ್ಯವನ್ನು ಸಂಗ್ರಹಿಸಿ ಸಾವಯವ ತಿಪ್ಪೆಗುಂಡಿಯನ್ನು ನಿರ್ಮಿಸಿದ್ದಾರೆ. ಇದರ ಗೊಬ್ಬರವನ್ನೇ ಗಿಡಗಳಿಗೆ ಬಳಕೆ ಮಾಡುತ್ತಿದ್ದಾರೆ.

ಬೆಂಗಳೂರು ಕೃಷಿ ವಿವಿಯಿಂದ ಪ್ರಗತಿಪರ ರೈತ ಪ್ರಶಸ್ತಿ :

ಈಶ್ವರ ರೆಡ್ಡಿಯವರ ಸಮಗ್ರ ಕೃಷಿಯನ್ನು ಗುರುತಿಸಿರುವ ಬೆಂಗಳೂರಿನ ಕೃಷಿ ವಿಶ್ವವಿಶ್ವವಿದ್ಯಾಲಯ 2022ರಲ್ಲಿ ನಡೆದ ಕೃಷಿ ಮೇಳದಲ್ಲಿ ‘ಜಿಲ್ಲಾ ಮಟ್ಟದ ಪ್ರಗತಿಪರ ರೈತ ಪ್ರಶಸ್ತಿ’ ನೀಡಿ ಗೌರವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿಯೂ ಇವರಿಗೆ ಸಂದಿದೆ.

ರೈತ ಪಿ.ಈಶ್ವರರೆಡ್ಡಿಯವರ ಸಾವಯವ ಕೃಷಿ ವಿಧಾನ ನಿಜಕ್ಕೂ ಶ್ಲಾಘನೀಯ. ಇವರು ಸಮಗ್ರ ಕೃಷಿ ವಿಧಾನ ಇತರೆ ರೈತರಿಗೆ ಮಾದರಿಯಾಗಿದೆ ಎನ್ನುತ್ತಾರೆ ಚೊಕ್ಕಂಪಲ್ಲಿಯ ರೈತ ಕಾಮರೆಡ್ಡಿ.

ವಾರ್ಷಿಕ 10 ಲಕ್ಷ ಆದಾಯ :

ಕೃಷಿಯನ್ನೇ ನಂಬಿದ್ದೇನೆ. ಕೃಷಿ ಕೈ ಬಿಟ್ಟಿಲ್ಲ. ಮಿಶ್ರ ಬೆಳೆಗಳಿಂದ ಉತ್ತಮ ಇಳುವರಿ ಬಂದಿದೆ. ವಾರ್ಷಿಕವಾಗಿ ₹8 ರಿಂದ ₹10 ಲಕ್ಷ ಸಂಪಾದನೆ ಆಗುತ್ತದೆ. ₹4 ಲಕ್ಷ ಖರ್ಚಾಗುತ್ತದೆ ಉಳಿದದ್ದು ಲಾಭ ಎನ್ನುತ್ತಾರೆ ಬಾಗೇಪಲ್ಲಿಯ ಪ್ರಗತಿಪರ ರೈತ ಪಿ.ಈಶ್ವರರೆಡ್ಡಿ.

  • ವರದಿ : ರಾ.ನ.ಗೋಪಾಲ ರೆಡ್ಡಿ, ಪತ್ರಕರ್ತ, ಬಾಗೇಪಲ್ಲಿ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...