ಭಾರತ ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ: ಸಿಎಂ ಸಿದ್ದರಾಮಯ್ಯ ಅಭಿಮತ

Date:

  • ಭಾರತ್ ಜೋಡೊ ಐತಿಹಾಸಿಕ ಪಾದಯಾತ್ರೆಗೆ ಒಂದು ವರ್ಷ
  • ಭಾರತೀಯರೆಲ್ಲರ ಕಾರ್ಯಕ್ರಮ ಎಂದು ಬಣ್ಣಿಸಿದ ಸಿದ್ದರಾಮಯ್ಯ

ನಾವೆಲ್ಲ ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಇದಲ್ಲ. ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ, ಸಮಗ್ರತೆಯನ್ನು ಉಳಿಸಲು, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು, ಸಂವಿಧಾನದ ಗೌರವವನ್ನು ಕಾಪಾಡಲು, ನಮ್ಮ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ರಾಹುಲ್ ಗಾಂಧಿಯವರ ಜೊತೆ ಭಾರತ್ ಜೋಡೊ ಎಂಬ ಐತಿಹಾಸಿಕ ಪಾದಯಾತ್ರೆ ಶುರುವಾಗಿ ಇಂದಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, “ರಾಹುಲ್ ಗಾಂಧಿಯವರು ಭಾರತ ಜೋಡೊ ಪಾದಯಾತ್ರೆಯ ನೇತೃತ್ವ ವಹಿಸಿದ್ದರೂ ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ. ಇದು ಭಾರತೀಯರೆಲ್ಲರ ಕಾರ್ಯಕ್ರಮ. ದೇಶದ ಬೇರೆಬೇರೆ ಭಾಗಗಳಿಂದ, ಜಾತಿ, ಧರ್ಮ, ಪಕ್ಷ, ಪಂಥಗಳನ್ನು ಮೀರಿ ಜನ ಬಂದು ಇದರಲ್ಲಿ ಭಾಗವಹಿಸಿದ್ದರು” ಎಂದು ಯಾತ್ರೆಯನ್ನು ಮೆಲುಕು ಹಾಕಿದ್ದಾರೆ.

“ಮೂರು ದಶಕಗಳ ಹಿಂದೆ ಈ ದೇಶದಲ್ಲಿ ರಥಯಾತ್ರೆಯೊಂದು ಹೊರಟಿತ್ತು. ದ್ವೇಷ, ಸುಳ್ಳು, ಅಪನಂಬಿಕೆಗಳನ್ನು ಬಿತ್ತುತ್ತಾ ಸಾಗಿದ ಆ ಯಾತ್ರೆ ಬಹುತ್ವ ಭಾರತದ ಎದೆಯೊಳಗೆ ಮಾಡಿದ ಗಾಯ ಇನ್ನೂ ಮಾಸಿಲ್ಲ. ಆ ಗಾಯಕ್ಕೆ ಪ್ರೀತಿ, ಶಾಂತಿ, ಸಹಬಾಳ್ವೆಯ ಮುಲಾಮು ಹಚ್ಚಿ ಗುಣಪಡಿಸುವ ಸದುದ್ದೇಶದಿಂದ ರಾಹುಲ್ ಗಾಂಧಿಯವರು ಪಾದಯಾತ್ರೆ ಶುರುಮಾಡಿದ್ದರು. ಕಾಂಗ್ರೆಸ್ ಪಕ್ಷದ ನಾಯಕ ಮತ್ತು ದೇಶದ ಭರವಸೆಯ ಆಶಾಕಿರಣ ರಾಹುಲ್ ಗಾಂಧಿಯವರ ಜೊತೆ ಭಾರತ್ ಜೋಡೊ ಎಂಬ ಐತಿಹಾಸಿಕ ಪಾದಯಾತ್ರೆ ಶುರುವಾಗಿ ಇಂದಿಗೆ ಒಂದು ವರ್ಷ. ದ್ವೇಷ ಮಾರಾಟದ ಸಂತೆಯಲ್ಲಿ ಪ್ರೀತಿ ಹಂಚುವ ಅಂಗಡಿ ತೆರೆಯುತ್ತೇನೆ ಎಂಬ ಸಂದೇಶದೊಂದಿಗೆ ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿಯವರು ಶುರುಮಾಡಿದ್ದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಅವಕಾಶ ನನಗೂ ಒದಗಿಬಂದಿರುವುದು ನನ್ನ ಬದುಕಿನ ಭಾಗ್ಯ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ್ ಜೋಡೋ‌ ಫಲವೇ ಗ್ಯಾರಂಟಿ ಯೋಜನೆಗಳು

“ದ್ವೇಷ ಹಂಚುವ ಮೂಲಕ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದ್ದ ಕೋಮುವಾದಿ ಶಕ್ತಿಗಳ ವಿರುದ್ಧ ಸೆಡ್ಡುಹೊಡೆದು ನಾವು ಬಿತ್ತಿದ್ದ ಪ್ರೀತಿಯ ಬೀಜ ವ್ಯರ್ಥವಾಗಲಿಲ್ಲ. ನಾಡಿನ ಸೌಹಾರ್ದ ಮನಸುಗಳನ್ನು ಒಂದಾಗಿಸಿದ ಭಾರತ್ ಜೋಡೊ ಯಾತ್ರೆಯ ಫಲ ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ವ್ಯಕ್ತವಾಗಿದೆ. ರಾಹುಲ್ ಗಾಂಧಿಯವರು ಭಾರತ ಜೋಡೋ ಪಾದಯಾತ್ರೆಯುದ್ದಕ್ಕೂ ಜನತೆಯ ಜೊತೆ ನಡೆಸಿದ್ದ ಚರ್ಚೆ-ಸಂವಾದದ ಮೂಲಕ ಪಡೆದ ಅನುಭವದ ಫಲವೇ ನಮ್ಮ ಗ್ಯಾರಂಟಿ ಯೋಜನೆಗಳು” ಎಂದು ನೆನಪು ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಭಾರತ’ವೆಂಬುದು ಶ್ರೇಷ್ಠವೇ? ‘ಇಂಡಿಯಾ’ ಕನಿಷ್ಠವೇ?

“ಭಾರತದ ಇತಿಹಾಸದಲ್ಲಿ, ಕಾಂಗ್ರೆಸ್ ಪಕ್ಷ ಸ್ಥಾಪನೆಯಾದ 1885ರಿಂದ ಈವರೆಗಿನ ಸುಮಾರು ಒಂದೂಕಾಲು ಶತಮಾನದ ಅವಧಿ ಏನಿದೆ ಅದು ಗುಲಾಮಗಿರಿಯಿಂದ ಪ್ರಜಾಪ್ರಭುತ್ವದೆಡೆಗಿನ, ಅರಸೊತ್ತಿಗೆಯಿಂದ ಜನತಂತ್ರದೆಡೆಗಿನ, ಅಸಮಾನತೆಯಿಂದ ಸಮಾನತೆಯೆಡೆಗಿನ ಚಲನೆಯಾಗಿದೆ. ಭಿನ್ನತೆಯಿಂದ ಬಹುತ್ವದ ಕಸುವನ್ನೂ, ವೈವಿಧ್ಯತೆಯಿಂದ ಏಕತೆಯ ಬಲವನ್ನೂ ಪಡೆಯುವ ಮೂಲಕ ಭಾರತ ಇಂದು ಪ್ರಜಾಪ್ರಭುತ್ವವಾದಿ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿ ನಿಂತಿದೆ. ಭಾರತ ದೇಶದ ಈ ಅಭೂತಪೂರ್ವ ಪಯಣದಲ್ಲಿ ಚಾಲಕಶಕ್ತಿಯಂತೆ ಕಾರ್ಯನಿರ್ವಹಿಸಿರುವುದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ಪ್ರಜೆಯೂ ಹೊರಬೇಕಾಗಿದೆ. ಒಡೆದು ಹೋಗುತ್ತಿರುವ ಭಾರತವನ್ನು ಜೋಡಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಸ್ವಾತಂತ್ರ್ಯಪೂರ್ವ ಭಾರತದಲ್ಲಿ ಉನ್ನತ ಮೌಲ್ಯಗಳನ್ನು ಅನುಸರಿಸಿದಂತೆಯೇ ಸ್ವಾತಂತ್ರ್ಯೋತ್ತರ ಭಾರತದಲ್ಲಿಯೂ ಸಹ ಕಾಂಗ್ರೆಸ್ ಪಕ್ಷವು ಶಾಂತಿ, ಸಾಮರಸ್ಯ, ಧಾರ್ಮಿಕ ಸಹಿಷ್ಣುತೆಯಂಥ ಪ್ರಜಾತಾಂತ್ರಿಕ ಮೌಲ್ಯಗಳನ್ನು, ದೇಶದ ಏಕತೆಯನ್ನು ಎತ್ತಿ ಹಿಡಿಯುತ್ತಲೇ ಇಲ್ಲಿನ ವೈವಿಧ್ಯತೆ, ಬಹುತ್ವವನ್ನು ಸಂಭ್ರಮಿಸುವಲ್ಲಿ ಮುಂಚೂಣಿಯಲ್ಲಿದೆ” ಎಂದಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಭುತ್ವ ಪ್ರಜೆಗಳ ದನಿಗೆ ಕಿವಿಗೊಡಬೇಕು. ಅವರ ಕಷ್ಟ-ಸುಖ, ಸಮಸ್ಯೆ-ಸಂಕಷ್ಟಗಳನ್ನು ಅರಿಯುವ ಕೆಲಸವನ್ನು ಮಾಡಬೇಕು. ಜನ ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಟ್ಟಾಗಿ ಬದುಕುವ ವಾತಾವರಣವನ್ನು ಕಲ್ಪಿಸಬೇಕು. ಆದರೆ ಭಾರತೀಯ ಜನತಾ ಪಕ್ಷ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕಲು ಜನರ ನಡುವೆ ಪರಸ್ಪರ ದ್ವೇಷಾಸೂಯೆಗಳನ್ನು ಬಿತ್ತಿ ಸಮಾಜವನ್ನು ಜಾತಿ-ಧರ್ಮದ ಆಧಾರದಲ್ಲಿ ಒಡೆಯುವ ಕೆಲಸವನ್ನು ಮಾಡುತ್ತಿದೆ. ಅನ್ಯಾಯದ ವಿರುದ್ದ ದನಿ ಎತ್ತುವವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡಲಾಗುತ್ತಿದೆ. ಇದರ ವಿರುದ್ದ ಸಂಘಟಿತವಾದ ಹೋರಾಟ ನಡೆಯಬೇಕಾಗಿದೆ. ಬನ್ನಿ, ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮುನ್ನಡೆಯೋಣ, ಕೈಗೆ ಕೈ ಜೋಡಿಸಿ ಹೋರಾಟಕ್ಕೆ ಬಲತುಂಬೋಣ. ಒಡೆಯುವವರನ್ನು ಹಿಮ್ಮೆಟ್ಟಿಸಿ ಕಟ್ಟುವ ಕಾಯಕದಲ್ಲಿ ತೊಡಗಿಸೋಣ. ನವಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸೋಣ” ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...