ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ; ಬಂಗಾರದ ಉಂಗುರ ಕದ್ದು ಪರಾರಿಯಾದ ನಕಲಿ ನಾಗಾಸಾಧು

Date:

ನಾಗಾಸಾಧುವಿನ ಸೋಗಿನಲ್ಲಿ ಬಂದ ಖತರ್ನಾಕ್‌ ವ್ಯಕ್ತಿಯೊಬ್ಬ ಕಾರುಚಾಲಕನಿಗೆ ಮಂಕುಬೂದಿ ಎರಚಿ, ಚಿನ್ನದ ಉಂಗುರ ಪೀಕಿ ಪರಾರಿಯಾಗಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವೈಯಾಲಿ ಕಾವಲ್ ನಿವಾಸಿ ಕಾರು ಚಾಲಕ ವೆಂಕಟಕೃಷ್ಣಯ್ಯ ಎಂಬುವವರು ಇತ್ತೀಚೆಗೆ ರಸ್ತೆ ಬದಿಯಲ್ಲಿ ನಿಂತಿದ್ದಾಗ ನಕಲಿ ನಾಗಾಸಾಧುವೊಬ್ಬ ಬಂದಿದ್ದಾನೆ. ಚಾಲಕನನ್ನು ಕಂಡು 5 ನಿಮಿಷ ವಿಶ್ರಾಂತಿ ಪಡೆದುಕೊಳ್ಳಬೇಕು ಎಂದಿದ್ದಾನೆ. ಬಳಿಕ 5 ರುದ್ರಾಕ್ಷಿ ಕೊಟ್ಟು ಒಂದನ್ನು ವಾಪಸ್ ಕೊಡುವಂತೆ ಹೇಳಿದ್ದಾನೆ. ವಾಪಸ್‌ ಕೊಟ್ಟ ರುದ್ರಾಕ್ಷಿಯನ್ನು ಪೇಪರ್‌ನಲ್ಲಿ ಮಡಚಿ ಮತ್ತೆ ತೆಗೆದಿದ್ದಾನೆ. ಈ ವೇಳೆ ರುದ್ರಾಕ್ಷಿ ಹೂ ಆಗಿ ಬದಲಾಗಿತ್ತು. ನೋಡು ಇದು ಶುಭ ಸೂಚಕ ನಿನಗೆ ಒಳ್ಳೆಯದಾಗುತ್ತೆ ಅಂತ ಕಣ್ಕಟ್ ಮಾಡಿದ್ದಾನೆ.

ಬಳಿಕ ಚಿನ್ನದ ಉಂಗುರ ಬಿಚ್ಚಿ ಕೊಡಲು ಹೇಳಿದ್ದಾನೆ. ಉಂಗುರ ಸಿಕ್ಕಿದ್ದೇ ತಡ ಚಾಲಕನ ಹಣೆಗೆ ಬೂದಿ ಹಚ್ಚಿ ಮಂಕುಬಡಿಸಿದ್ದಾನೆ. ಚಾಲಕ ತಿರುಗಿ ನೋಡುವಷ್ಟರಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಬಳಿಕ ಮನೆಯವರಿಗೆ ವಿಚಾರ ತಿಳಿಸಿದ ವೆಂಕಟಕೃಷ್ಣಯ್ಯ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಡೋಂಗಿ ನಾಗಾಸಾಧುಗಾಗಿ ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರ್ಮಿಕತೆ ಮತ್ತು ಭಕ್ತಿ ಹೆಸರಿನಲ್ಲಿ ಮೋಸ ಮಾಡುವ ನಕಲಿ ನಾಗಾಸಾಧುಗಳು, ಬಾಬಾಗಳು ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಹೆಚ್ಚಾಗಿದೆ. ಆಶೀರ್ವಾದ ನೀಡುವ ನೆಪದಲ್ಲಿ ಅಥವಾ ಮಂತ್ರದಿಂದ ಸಮಸ್ಯೆ ಪರಿಹಾರ ಮಾಡುತ್ತೇನೆ ಎಂದು ಹೇಳಿಕೊಂಡು ಸುಲಭವಾಗಿ ನಂಬಿಸಿ ಅಮಾಯಕರ ಹಣ, ಚಿನ್ನಾಭರಣ ದೋಚಿ ವಂಚಿಸುತ್ತಿದ್ದಾರೆ. ಯಾವುದೇ ಧಾರ್ಮಿಕ ವ್ಯಕ್ತಿ ಮಾತುಗಳ ಮೂಲಕ ಬೆದರಿಕೆ ಅಥವಾ ಭಯ ಹುಟ್ಟಿಸುವ ಪ್ರಯತ್ನ ಮಾಡಿದರೆ, ಅದನ್ನು ತಕ್ಷಣವಲ್ಲದಿದ್ದರೂ ಶಂಕಿತವಾಗಿ ಪರಿಗಣಿಸಿ, ಅಗತ್ಯವಿದ್ದರೆ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಅವಶ್ಯಕ. ಹಾಗೇ ಬೂದಿ, ರುದ್ರಾಕ್ಷಿಯಂತಹ ವಸ್ತುಗಳನ್ನ ಇಟ್ಟುಕೊಂಡು ಬರುವ ಡೋಂಗಿ ಬಾಬಾಗಳಿಂದ ದೂರವಿರುವುದು ಒಳಿತು.

ಇದನ್ನೂ ಓದಿ: ಬೆಂಗಳೂರು | 400 ಮರಗಳ ಮಾರಣಹೋಮಕ್ಕೆ ರೈಲ್ವೆ ಸಿದ್ಧತೆ; ಪರಿಸರವಾದಿಗಳ ಆಕ್ರೋಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...