ಬೀದರ್‌ | ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕಚೇರಿ ಎದುರು ಕಾರಂಜಾ ಸಂತ್ರಸ್ತರಿಂದ ಸಾಂಕೇತಿಕ ಧರಣಿ

Date:

ಕಾರಂಜಾ ಜಲಾಶಯಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತ ರೈತರಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ 2018 ರಿಂದ ಹೋರಾಟ ನಡೆಸಲಾಗುತ್ತಿದ್ದು, ಕಳೆದ 525 ದಿನಗಳಿಂದ ಬೀದರ್‌ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆದರೂ ಯಾರೊಬ್ಬರೂ ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ ಎಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆಯವರ ಕಚೇರಿ ಎದುರು ನಡೆಸಿದ ಸಾಂಕೇತಿಕ ಧರಣಿ ಉದ್ದೇಶಿಸಿ ಮಾತನಾಡಿ, “ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾರಂಜಾ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡುವ ಕುರಿತು ಸದನದಲ್ಲಿ ಚರ್ಚಿಸಿ ಸೂಕ್ತ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ತರುವಂತೆ ಜಿಲ್ಲೆಯ ಎಲ್ಲ ಶಾಸಕರು, ಸಚಿವರ ಕಚೇರಿಯ ಆವರಣದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ” ಎಂದರು.

“ಡಿ.2 ರಂದು ಮುಖ್ಯಮಂತ್ರಿಗಳು ಬೀದರ್‌ ಜಿಲ್ಲೆಗೆ ಆಗಮಿಸಿದ ವೇಳೆ ಕಾರಂಜಾ ಸಂತ್ರಸ್ತ ರೈತರ ಬೇಡಿಕೆ ಕುರಿತು ತಿಳಿಸಿದರು. ಕಾರಂಜಾ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಿದ ಸಿಎಂ, ನಿಯೋಗವನ್ನು ಬೆಂಗಳೂರಿಗೆ ಕರೆಸಿ ಸಮಸ್ಯೆಗಳ ಕುರಿತು ಚರ್ಚಿಸಿ ಬಗೆಹರಿಸಲಾಗುವುದು ಎಂದು ನಿಯೋಗಕ್ಕೆ ಮೌಖಿಕ ಭರವಸೆ ನೀಡಿದ್ದರು. ಅದನ್ನು ಶೀಘ್ರದಲ್ಲಿ ಕಾರ್ಯರೂಪಕ್ಕೆ ತರಬೇಕೆಂದು” ಸಮಿತಿಯ ನಿರ್ದೇಶಕ ವೀರಭ್ರದ್ರಪ್ಪ ಉಪ್ಪಿನ ಸರಕಾರಕ್ಕೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ರಾಜಪ್ಪ ಕಮಾಲಾಪುರೆ ಮಾತನಾಡಿ, “ಕಾರಂಜಾ ಜಲಾಶಯದಲ್ಲಿ ಜಮೀನು ಕಳೆದುಕೊಂಡು ನೂರಾರು  ಹಿರಿಯರು, ವೃದ್ಧರು, ಹಾಗೂ ಮಹಿಳಾ ಸಂತ್ರಸ್ತರು ಒಂದುವರೆ ವರ್ಷದಿಂದ ನಗರದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸರಕಾರವಾಗಲಿ, ಜನಪ್ರತಿನಿಧಿಗಳಾಗಲಿ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸ ರೊಟ್ಟಿಯನು ಹೆಂಚಿಗೆ ಹಾಕಿದ ಮಿಜೋ ಮತದಾರರು

ಈ ಸಂದರ್ಭದಲ್ಲಿ ಸಂತಸ್ತ ರೈತರಾದ ಪ್ರಭಾವತಿ, ಕಮಲಾಬಾಯಿ, ವಿದ್ಯಾವತಿ, ಲಕ್ಷ್ಮಿ ಕೌದಿ, ಸಂಗಮ್ಮ, ಚಂಪಾವತಿ, ಚಂದ್ರಮ್ಮ, ಹೇಮಾವತಿ, ರುಕ್ಮಿಣಿ, ಭಾಗಮ್ಮ, ಲಲಿತಾಬಾಯಿ, ರಾಚಮ್ಮ, ತೇಜಮ್ಮ, ಕಾಂತಮ್ಮ, ಶಂಕ್ರಪ್ಪ, ಮಹೇಶ್, ಈಶ್ವರಯ್ಯ ಸ್ವಾಮಿ, ಶಬ್ಬೀರ್ ಮಿಯ, ಪ್ರೇಮದಾಸ, ಯೂಸುಫ್, ರಾಮಕೃಷ್ಣ ಜಮಾದಾರ್, ಮೋಹನರಾವ್ ಬಿರಾದಾರ್, ಮಾದಪ್ಪ ಕೌದಿ, ಲೋಕೇಶ್ ಕನೆರಿ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...