ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಈಡೇರಿಕೆ ಸಹಾಯಕ್ಕೆ ಆಪ್ ಸಿದ್ಧ: ಬ್ರಿಜೇಶ್ ಕಾಳಪ್ಪ

Date:

ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಮತ್ತು ಗ್ಯಾರಂಟಿಗಳು ಆಮ್ ಆದ್ಮಿ ಪಕ್ಷದ ಶೇ.90ರಷ್ಟು ನಕಲು ಆಗಿದ್ದು, ಇವುಗಳನ್ನು ಕರ್ನಾಟಕದ ಜನತೆಗೆ ಸಂಪೂರ್ಣವಾಗಿ ತಲುಪಿಸಲು ನಾವು ಸದಾ ಸಿದ್ಧರಿದ್ದೇವೆ ಎಂದು ಆಪ್ ರಾಜ್ಯ ಸಂವಹನ ಮುಖ್ಯಸ್ಥ ಬ್ರಿಜೇಶ್‌ ಕಾಳಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಆಪ್ ಈಗಾಗಲೇ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಕಾಂಗ್ರೆಸ್ ಪಕ್ಷವು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರಿಗೆ ಪತ್ರ ಬರೆದರೆ ನಾವುಗಳು ಸಂಪೂರ್ಣವಾಗಿ ನಿಮಗೆ ತಾಂತ್ರಿಕ ಸಹಾಯ ಮಾಡುತ್ತೇವೆ” ಎಂದು ಬ್ರಿಜೇಶ್ ಕಾಳಪ್ಪ ತಿಳಿಸಿದರು.

“ಜನತೆಯಿಂದ ಸಂಪೂರ್ಣ ತಿರಸ್ಕರಿಸಲ್ಪಟ್ಟಿರುವ ಬಿಜೆಪಿ ಇಂದು ರಾಜ್ಯದ ಜನರನ್ನು ಪ್ರಚೋದಿಸಿ ಗಲಾಟೆ ಮಾಡಿ ಎನ್ನುವ ಮೂಲಕ ಅಶಾಂತಿಯನ್ನು ಮೂಡಿಸಲು ಯತ್ನಿಸುತ್ತಿರುವುದು ಹೇಯ ಕೃತ್ಯ ಆಗಿದೆ. ರೈತರ ಆದಾಯ ದ್ವಿಗುಣ, ಸರ್ವರಿಗೂ ವಸತಿ, ವಿದೇಶಗಳಲ್ಲಿನ ಕಪ್ಪು ಹಣದಿಂದ ಪ್ರತಿಯೊಬ್ಬರ ಖಾತೆಗೂ 15ಲಕ್ಷ, ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡಿಕೆ, ಐದು ಟ್ರಿಲಿಯನ್ ಆರ್ಥಿಕತೆ, ಬುಲೆಟ್ ಟ್ರೈನ್, ಪೆಟ್ರೋಲ್ ಡೀಸೆಲ್ ಬೆಲೆ ಇಳಿಸುವಲ್ಲಿ ವೈಫಲ್ಯ, ಬೆಲೆ ಏರಿಕೆಯಂತಹ ಯಾವುದೇ ಆಶ್ವಾಸನೆಗಳನ್ನು ಈವರೆಗೂ ಈಡೇರಿಸದೆ ನೈತಿಕತೆ ಇಲ್ಲದೆ ಬಿಜೆಪಿಯವರು ಏಕಾಏಕಿ ರಾಜ್ಯದ ಶಾಂತಿಗೆ ಭಂಗ ತರುವ ರೀತಿಯಲ್ಲಿ ಅಶಾಂತಿಯನ್ನು ಮೂಡಿಸಲು ಯತ್ನಿಸುತ್ತಿರುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯ ಗೆದ್ದ ಕಾಂಗ್ರೆಸ್‌ಗೆ ಜಿಲ್ಲೆ, ತಾಲ್ಲೂಕು ಗೆಲ್ಲುವ ಸವಾಲು!

“ಎಲ್ಲ ಭರವಸೆಗಳನ್ನು ಈಡೇರಿಸಲು ಆಮ್ ಆದ್ಮಿ ಪಕ್ಷದ ಪ್ರಾಮಾಣಿಕ ಪಾರದರ್ಶಕ ಆಡಳಿತ ಶೈಲಿಯಿಂದ ಮಾತ್ರ ಸಾಧ್ಯ, ಇವುಗಳನ್ನು ರೂಡಿಸಿಕೊಳ್ಳಲು ಕಾಂಗ್ರೆಸ್ ಕಾರ್ಯೋನ್ಮುಖವಾಗಬೇಕು. ಇನ್ನು ಒಂದು ತಿಂಗಳಲ್ಲಿ ತಾನು ನೀಡಿರುವ ಗ್ಯಾರಂಟಿಗಳನ್ನು ಈಡೇರಿಸದಿದ್ದಲ್ಲಿ ಆಮ್ ಆದ್ಮಿ ಪಕ್ಷ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ” ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಾಧ್ಯಮ ಉಸ್ತುವಾರಿ ಜಗದೀಶ್ ವಿ. ಸದಂ, ಕಾರ್ಯಾಧ್ಯಕ್ಷ ಶಿವರಾಯಪ್ಪ ಜೋಗಿನ್ ಉಪಸ್ಥಿತರಿದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...