ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

Date:

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ವಕೀಲ ಕೆ ಎನ್ ಜಗದೀಶ್ ಅವರಿಗೆ ಬೆಂಗಳೂರಿನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಈ ಬಗ್ಗೆ ಸ್ವತಃ ತನ್ನ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ವಕೀಲ ಜಗದೀಶ್‌, “ಕೊಡಿಗೇಹಳ್ಳಿ ಪೊಲೀಸರು ನನ್ನ ಮೇಲೆ ಸುಳ್ಳು ದೂರು ದಾಖಲಿಸಿ, ಪೊಲೀಸರು ನನ್ನನ್ನು ವಶಕ್ಕೆ ಪಡೆದಿದ್ದರು. ನನ್ನ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ 7 ವರ್ಷಕ್ಕಿಂತಲೂ ಕಡಿಮೆ ಶಿಕ್ಷೆ ಇದೆ. ಹಾಗಾಗಿ, ನನಗೆ ನ್ಯಾಯಾಲಯವು ನನಗೆ ಜಾಮೀನು ಮಂಜೂರು ಮಾಡಿದೆ” ಎಂದು ತಿಳಿಸಿದ್ದಾರೆ.

ಎರಡು ಭಿನ್ನ ಸಮುದಾಯಗಳ ನಡುವೆ ದ್ವೇಷ ಉಂಟು ಮಾಡಲು ಪ್ರಯತ್ನಿಸಿದ ಆರೋಪದ ಮೇರೆಗೆ ವಕೀಲ ಜಗದೀಶ್ ವಿರುದ್ಧ ಮಂಜುನಾಥ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೊಡಿಗೇಹಳ್ಳಿ ಪೊಲೀಸರು ವಕೀಲ ಜಗದೀಶ್ ಅವರನ್ನು ಶುಕ್ರವಾರ ಮನೆಯಿಂದಲೇ ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

“ಧರ್ಮಸ್ಥಳ ಹತ್ಯಾಕಾಂಡದ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ನನ್ನ ಮೇಲೆ ಸುಳ್ಳು ದೂರು ದಾಖಲಿಸಿ, ಪೊಲೀಸರು ನನ್ನನ್ನು ವಶಕ್ಕೆ ಪಡೆದಿದ್ದರು. ಆದರೆ, ನಮ್ಮ ದೇಶದ ಸಂವಿಧಾನ ಇನ್ನೂ ಬದುಕಿದೆ. ನಮ್ಮ ಹೋರಾಟಗಾರರಿಗೆ ಸಂವಿಧಾನವೇ ರಕ್ಷಣೆ. ನ್ಯಾಯಕ್ಕೆ ಜಯ ಇದೆ. ಇಂದು ನನಗೆ ಬೆಲ್ ಸಿಕ್ಕಿದೆ. ನನ್ನ ಹೋರಾಟ ಸತ್ಯದ ಪರ. ನನ್ನ ಹೋರಾಟ ನ್ಯಾಯದ ಪರ. ನನ್ನ ಹೋರಾಟ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯುತ್ತದೆ. ಸತ್ಯದ ಗೆಲುವು ಖಚಿತ” ಎಂದು ಜಗದೀಶ್ ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ.

“ಉಪಮುಖ್ಯಮಂತ್ರಿಗಳು ನಿನ್ನೆ ತಿಮರೋಡಿಯವರನ್ನು ಬಂಧಿಸಿದ್ದಕ್ಕೆ ಒದ್ದು ಒಳಗೆ ಹಾಕಿದ್ದೇವೆ ಎಂದು ಹೇಳಿಕೆ ನೀಡಿದ್ದರು. ನನ್ನ ಮೇಲೂ ಕೂಡ ಸುಳ್ಳು ಮೊಕದ್ದಮೆ ಹಾಕಿ, ಬಂಧಿಸಿದ್ದರು. ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂಬುದನ್ನು ಅಧಿಕಾರದಲ್ಲಿದ್ದವರು ತಿಳಿದುಕೊಳ್ಳಬೇಕು. ಪೊಲೀಸರಲ್ಲಿ ಕೇಳಿದರೆ, ಮೇಲಿನವರ ಒತ್ತಡ ಎಂದು ತಿಳಿಸುತ್ತಾರೆ. ಸರಿಯಾಗಿ ನೋಟಿಸ್ ನೀಡಿ 24 ಗಂಟೆ ಆಗಿಲ್ಲದಿದ್ದರೂ ಕಾನೂನುಬಾಹಿರವಾಗಿ ಬಂಧಿಸಿದ್ದಾರೆ. ಈ ಎಲ್ಲ ವಿಚಾರವನ್ನು ನಮ್ಮ ವಕೀಲರ ತಂಡ ನ್ಯಾಯಾಲಯದ ಗಮನಕ್ಕೆ ತಂದಿದ್ದರಿಂದ ಜಾಮೀನು ಸಿಕ್ಕಿದೆ. ಜಾಮೀನಿಗೆ ಶ್ರಮಿಸಿದ ವಕೀಲರಿಗೆ ಧನ್ಯವಾದ ಸಲ್ಲಿಸುತ್ತೇನೆ. ಸಮಾಜದಲ್ಲಿ ತಪ್ಪು ನಡೆದಾಗ ಧ್ವನಿ ಎತ್ತುವುದು ನಮ್ಮ ಸಾಂವಿಧಾನಿಕ ಹಕ್ಕು. ನ್ಯಾಯಕ್ಕಾಗಿ ಹೋರಾಡುವುದು ಅಪರಾಧವಲ್ಲ” ಎಂದು ವಕೀಲ ಕೆ ಎನ್‌ ಜಗದೀಶ್‌ ಕಾರಿನಲ್ಲಿ ಕುಳಿತುಕೊಂಡು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...