ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಮೌಲ್ಯವನ್ನು ಅಕಾಡೆಮಿ ಕಾಪಾಡಬೇಕು: ಕೆ.ವಿ.ಪ್ರಭಾಕರ್

Date:

ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ಬೆಂಗಳೂರಿನ ಮಲ್ಲೇಶ್ವರಂನ ಜೆ.ಎನ್.ಟಾಟಾ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡಿದ್ದ ಕರ್ನಾಟಕ ಮಾಧ್ಯಮ ಅಕಾಡೆಮಿಯ 2023 ಹಾಗೂ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಅವರು ಮಾತನಾಡಿದರು.

ಜನರ, ಸಮಾಜದ ಪ್ರಾಣವಾಯು ಆಗಿರುವ ಪತ್ರಿಕಾ ವೃತ್ತಿಯ ಉಸಿರನ್ನು ಕಾಪಾಡಲು ನಮ್ಮ ಸಂವಿಧಾನ ಇದೆ. ನಮ್ಮ ಸಂವಿಧಾನ ಕತೃ ಆದ ಅಂಬೇಡ್ಕರ್ ಅವರೇ ಹೇಳಿರುವ ರೀತಿ ಪತ್ರಿಕಾ ವೃತ್ತಿ ನಿಜವಾದ ಪ್ರಾಣವಾಯು ಆಗಿ ಉಳಿಯಬೇಕು. ಈ ದಿಕ್ಕಿನಲ್ಲಿ ನಮ್ಮ ಮಾಧ್ಯಮ ಅಕಾಡೆಮಿ ತರಬೇತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಕಕ 3

ಅಚ್ಚುಮೊಳೆ ಅವಧಿಯಿಂದ ಕೃತಕ ಬುದ್ದಿಮತ್ತೆವರೆಗೂ ಪತ್ರಿಕಾ ವೃತ್ತಿ ಬೆಳೆದಿದೆ. ತಂತ್ರಜ್ಞಾನದಲ್ಲಿ ನಮ್ಮ ವೃತ್ತಿ ಎಷ್ಟೇ ಮುಂದುವರೆದಿದ್ದರೂ ಸತ್ಯ ಮತ್ತು ನಿಷ್ಠುರ ಮೌಲ್ಯಗಳು ಮಾತ್ರ ಬದಲಾಗಬಾರದು. ಆದರೆ ಇಂದು ಊಹಾ ಪತ್ರಿಕೋದ್ಯಮ, ಕಾಲ್ಪನಿಕ ಪತ್ರಿಕೋದ್ಯಮ ಮತ್ತು ಸುಳ್ಳು ಸುದ್ದಿಗಳ ಹಾವಳಿ ಇಂದು ಹೆಚ್ಚಾಗಿದೆ. ಈ ವಿಚಾರದಲ್ಲಿ ನ್ಯೂಸ್ ರೂಮ್ ಗಳು ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಅಗತ್ಯವಿದೆ ಎಂದರು.

ಇದನ್ನು ಓದಿದ್ದೀರಾ? ಆದ್ಯತೆಯ ಮೇರೆಗೆ ಪತ್ರಕರ್ತರಿಗೆ ನಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್ ಆಶ್ವಾಸನೆ

ಎರಡು ವರ್ಷಗಳಿಂದ ಪ್ರಶಸ್ತಿಗಳನ್ನು ನೀಡಿರಲಿಲ್ಲ. ನಮ್ಮ ಇಲಾಖೆಯ ನಾನಾ ವಿಭಾಗಗಳ ಪ್ರಶಸ್ತಿಗಳು ಐದು ವರ್ಷಗಳಿಂದ ಬಾಕಿ ಇದ್ದವು. ನಮ್ಮ ಅವಧಿಯಲ್ಲಿ ಎಲ್ಲವನ್ನೂ ವಿತರಿಸುವ ಕೆಲಸ ಮಾಡಿದ್ದೇವೆ ಎಂದರು.

ಪತ್ರಕರ್ತ ಕುಟುಂಬಗಳ ಆರೋಗ್ಯ, ಆರೋಗ್ಯ ವಿಮೆ, ಉಚಿತ ಬಸ್ ಪಾಸ್, ನಿವೃತ್ತಿ ವೇತನ ಹೆಚ್ಚಳ ಸೇರಿದಂತೆ ಹತ್ತಾರು ವರ್ಷಗಳಿಂದ ಬಾಕಿ ಇದ್ದ ನಮ್ಮ ಸಮುದಾಯದ ಬೇಡಿಕೆಗಳೆಲ್ಲವನ್ನೂ ಈಡೇರಿಸುತ್ತಿದ್ದೇವೆ ಎಂದು ವಿವರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...