ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಸಾಧನೆ: 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ

Date:

ರಾಷ್ಟ್ರೀಯ ಜೀವನೋಪಾಯ ಅಭಿಯಾನ (NRLM & NULM) ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ನೀಡಿ ಬೆಂಗಳೂರು ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಲಲಿತ ಅಶೋಕ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಮೂರು‌ ದಿನಗಳ ಬೆಂಗಳೂರು ಕೌಶಲ್ಯ ಶೃಂಗಸಭೆ-2025ಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣ ಪ್ರಕಾಶ್ ಆರ್ ಪಾಟೀಲ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿರುವ ವಿವಿಧ ಅಂಗ ಸಂಸ್ಥೆಗಳಿಗೆ ನೀಡುವ ಕೌಶಲ್ಯ ಶೃಂಗ ಸಭೆ 2025ರ ಪ್ರಶಸ್ತಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಾವಿಕೆರೆ ಗ್ರಾಮ ಪಂಚಾಯತಿಯ ಸ್ಫೂರ್ತಿ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಹಿರಿಹೊನ್ನಪ್ಪ ವಿಕಾಸ ಮಹಿಳಾ ಸ್ವ ಸಹಾಯ ಸಂಘ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೋಳ್ತಮಜಲಿನ ಆಶೀರ್ವಾದ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ಶ್ರೀ ಸಿದ್ದಿವಿನಾಯಕ ಮಹಿಳಾ ಸ್ವ-ಸಹಾಯ ಸಂಘ, ಕಲಬುರಗಿಯ ಅಳಂದ ತಾಲೂಕಿನ ಗುಂಜ ಬಬಲಾದ ಗ್ರಾ ಪಂಚಾಯತಿ ಗಂಗಾ ಪರಮೇಶ್ವರಿ ಒಕ್ಕೂಟದ ಚೆನ್ನಮ್ಮ ಸ್ವ ಸಹಾಯ ಸಂಘ, ಚಿತ್ರದುರ್ಗ ಜಿಲ್ಲೆಯ ಹಿರಯೂರು ತಾಲೂಕಿನ ವಿವಿಪುರ ಗ್ರಾಮ ಪಂಚಾಯತಿಯ‌ ಝಾನ್ಸಿ‌ರಾಣಿ‌ ಮಹಿಳಾ ಒಕ್ಕೂಟದ ಶ್ರೀರಾಮ ಆತ್ಮ ಮಹಿಳಾ ಆಹಾರ‌ ಭದ್ರತಾ ಗುಂಪು, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಡವಿ ಗ್ರಾಮ ಪಂಚಾಯತಿಯ ಶ್ರೀ ರಾಮಲಿಂಗೇಶ್ವರಿ ಸಂಜೀವಿನಿ‌ ಮಹಿಳಾ ಒಕ್ಕೂಟದ ತಾಯಮ್ಮದೇವಿ ಸ್ವ-ಸಹಾಯ ಗುಂಪು, ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆಯ ಶ್ರೀದುರ್ಗಾ ಪ್ರದೇಶ ಮಟ್ಟದ ಒಕ್ಕೂಟದ ದಿವ್ಯಜ್ಯೋತಿ ನಿರಂತರ ಉಳಿತಾಯ ಗುಂಪು, ಬೆಂಗಳೂರು ನಗರ‌ ಜಿಲ್ಲೆಯ ಪಶ್ಚಿಮ‌ ನಗರ ಪಾಲಿಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸರೋಜಿನಿ‌ ನಾಯ್ಡು ಪ್ರದೇಶ ಮಟ್ಟದ ಒಕ್ಕೂಟದ ಅನ್ನಪೂರ್ಣೇಶ್ವರಿ ಮಹಿಳಾ ಸ್ವ-ಸಹಾಯ ಸಂಘ, ರಾಯಚೂರು‌ ಜಿಲ್ಲೆಯ ರಾಯಚೂರು ಮಹಾನಗರ ಪಾಲಿಕೆಯ ಗಣೇಶ ಪ್ರದೇಶ ಮಟ್ಟದ ಒಕ್ಕೂಟದ ಅಕ್ಕ ಮಹಾದೇವಿ ಮಹಿಳಾ ಸ್ವ-ಸಹಾಯ ಸಂಘ ಅತ್ಯುತ್ತಮ‌ ಮಹಿಳಾ ಸ್ವ ಸ-ಸಹಾಯ ಸಂಘ ಪ್ರಶಸ್ತಿಗೆ ಭಾಜನರಾದ ಸಂಘಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದ ‘ಮಹಾ ಮತಗಳ್ಳತನ’ ಮತ್ತು ಚುನಾವಣಾ ಆಯೋಗವೆಂಬ ಮೋದಿ ‘ಪಂಜರದ ಗಿಳಿ’

ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ‌ ಶಿವಕಾಂತಮ್ಮ ನಾಯಕ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಡಾ. ಇ.ವಿ ರಮಣರೆಡ್ಡಿ ಕೆಎಸ್ ಡಿಎ ಅಧ್ಯಕ್ಷರಾದ ಶ್ರೀನಿವಾಸ್ ಎಂ, ಅಪರ ಅಭಿಯಾನ‌ ನಿರ್ದೇಶಕರು, ಸಂಜೀವಿನಿ- ಕೆಎಸ್ ಆರ್ ಎಲ್ ಪಿಎಸ್ ಹಾಗೂ‌ ಸಮಾರಂಭದಲ್ಲಿ ವಿವಿಧ ಇಲಾಖೆಗಳ ಗಣ್ಯರು ಉಪಸ್ಥಿತರಿದ್ದರು.

WhatsApp Image 2025 11 06 at 8.29.34 PM 3
WhatsApp Image 2025 11 06 at 8.29.34 PM 2
WhatsApp Image 2025 11 06 at 8.29.34 PM 1
WhatsApp Image 2025 11 06 at 8.29.33 PM 1
WhatsApp Image 2025 11 06 at 8.29.33 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...