SCP/TSP ಅನುದಾನ ಬೇರೆ ಉದ್ದೇಶಗಳಿಗೆ ಬಳಸಿದರೆ ಅಧಿಕಾರಿಗಳ ವಿರುದ್ಧ ಕ್ರಮ: ಹೆಚ್ ಸಿ ಮಹದೇವಪ್ಪ

Date:

  • ಸೆಕ್ಷನ್‌ 7ಡಿ ರದ್ದುಪಡಿಸಿರುವ ಸಂಗತಿ ಅಧಿಕಾರಿಗಳ ಗಮನದಲ್ಲಿರಲಿ
  • ಆರ್‌ಟಿಇ, ಶಿಕ್ಷಣದ ಪ್ರಮಾಣ 9 ರಿಂದ 10 ನೇ ತರಗತಿಗೆ ಏರಿಸಲು ಕ್ರಮ

ದಲಿತರ ಪಾಲಿಗೆ ಒಂದು ರೀತಿಯಲ್ಲಿ ಮಾರಕವಾಗಿದ್ದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್‌ 7ಡಿ ರದ್ದುಪಡಿಸಿರುವ ಸಂಗತಿಯನ್ನು ಎಲ್ಲ ಅಧಿಕಾರಿಗಳೂ ಗಮನದಲ್ಲಿಟ್ಟುಕೊಳ್ಳಬೇಕು. SCP/ TSP ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸದೇ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದ ಏಳಿಗೆಗೆ ಮಾತ್ರ ಬಳಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ SCP/ TSP ಅನುದಾನದ ಹಂಚಿಕೆಯ ಕುರಿತಂತೆ ವಿಕಾಸಸೌಧದಲ್ಲಿ ಜರುಗಿದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಅನುದಾನ ಬಳಕೆ ಕುರಿತು ನಿರ್ದೇಶನ ನೀಡಿದರು.

SCP/TSP ಕಾಯ್ದೆಯ ಉದ್ದೇಶಕ್ಕೆ ಅನುಗುಣವಾಗಿ ಎಲ್ಲ ಇಲಾಖೆಗಳಲ್ಲಿ ಯಾವ ರೀತಿ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರಗತಿಯ ಸ್ಥಿತಿಗತಿ ಏನಾಗಿದೆ ಮತ್ತು ಪ್ರಗತಿಯ ಹಾದಿಯಲ್ಲಿ ಇಲಾಖೆಗಳು ಏನಾದರೂ ಕೊರತೆಗಳನ್ನು ಎದುರಿಸುತ್ತಿವೆಯೇ? ಎಂಬ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಲಜೀವನ್ ಮಿಷನ್‌ನಲ್ಲಿ ಸಾಮಾನ್ಯವಾಗಿ ಕೇಂದ್ರ ಸರ್ಕಾರದ ಶೇ.50 ಹಣ ಮತ್ತು ರಾಜ್ಯ ಸರ್ಕಾರದ ಶೇ.50 ಹಣ ಇದ್ದು, ಈ ಪೈಕಿ ಜಲಜೀವನ್ ಮಿಷನ್‌ನಲ್ಲಿ ರಾಜ್ಯದ ಹಣದ ಪಾಲು ಹೆಚ್ಚಾಗಿದೆ. ಜನವರಿ ವೇಳೆಗೆ ಕೇಂದ್ರದಿಂದ ಅಗತ್ಯ ಅನುದಾನ ಪಡೆಯಬೇಕು. ಇಲ್ಲವಾದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಹಣವನ್ನು ಹಿಂಪಡೆಯಲಾಗುವುದು” ಎಂದು ಸಚಿವರು ತಿಳಿಸಿದರು.

“ಮೂಲ ಸೌಕರ್ಯಗಳಾದ ರಸ್ತೆಗಳ ವಿಷಯದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಅದರ ಗುಣಮಟ್ಟದ ಅವಧಿ 50 ವರ್ಷ ಇರಬೇಕು. ಹಾಗಿದ್ದಾಗ ಮಾತ್ರ ಪದೇ ಪದೇ ರಸ್ತೆಗಳ ಮೇಲೆ ಅನುದಾನ ಬಳಸುವುದು ತಪ್ಪುತ್ತದೆ. ಆ ಅನುದಾನವನ್ನು ಇತರೆ ಕೆಲಸಗಳಿಗೆ ಬಳಸಬಹುದು” ಎಂದು ಸಚಿವರು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್, ಬಿಆರ್‌ಎಸ್‌ ಅವಿಶ್ವಾಸ ನಿರ್ಣಯ ಮಂಡನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಕಡ್ಡಾಯವಾಗಿ 100 ದಿನಗಳ ನರೇಗಾ ಕೆಲಸ ನೀಡಬೇಕು. ಆಗ ಅವರ ಬದುಕಲ್ಲಿ ಒಂದಷ್ಟು ಧನಾತ್ಮಕ ಬದಲಾವಣೆ ತರಬಹುದು ಎಂದು ರಾಜ್ಯದ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಉನ್ನತ ಶಿಕ್ಷಣ ಇಲಾಖೆಯಲ್ಲಿ SCP/TSP ಕಾಯ್ದೆಯಡಿ ಬಳಸದೇ ಇರುವ ಅನುದಾನದ ಬಳಕೆಗೆ ಸೂಕ್ತ ಪ್ರಾಶಸ್ತ್ಯ ನೀಡಬೇಕು ಮತ್ತು ಹಾಸ್ಟೆಲ್ ಕಾಲೇಜುಗಳ ಮೂಲಸೌಕರ್ಯದ ಅಭಿವೃದ್ದಿಗೆ ಒತ್ತು ನೀಡಿ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಬೇಕು” ಎಂದು ಕಟ್ಟುನಿಟ್ಟಾಗಿ ಹೇಳಿದರು.

ಆರ್ ಟಿ ಇ ಶಿಕ್ಷಣ ಕಾಯ್ದೆ

“ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳ ಶಾಲಾ ನೋಂದಣಿ ಪ್ರಮಾಣವು ನೆರೆಯ ರಾಜ್ಯಗಳಿಗಿಂತ ಕಡಿಮೆ ಇದ್ದು, ನೊಂದಣಿಯ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಆರ್ ಟಿ ಇ ಶಿಕ್ಷಣ ಕಾಯ್ದೆ ಅಡಿಯಲ್ಲಿ ಈಗ ಇರುವ 1 ರಿಂದ 8 ನೇ ತರಗತಿ ಶಿಕ್ಷಣದ ಪ್ರಮಾಣವನ್ನು 9 ರಿಂದ 10 ನೇ ತರಗತಿಗೆ ಏರಿಸಲು ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಗಮನಕ್ಕೆ ತರಲಾಯಿತು.

ಕೃಷಿ, ಸಾರಿಗೆ, ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಇನ್ನೂ ಹಲವು ಇಲಾಖೆಗಳಲ್ಲಿ ಆಗುತ್ತಿರುವ ಪ್ರಗತಿಯ ಮಟ್ಟವನ್ನು ಪರಿಶೀಲಿಸಿದ ಸಚಿವರು, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನದ ಹಂಚಿಕೆಯು ಸಮರ್ಪಕವಾಗಿ ಬಳಕೆಯಾಗಬೇಕು. ಇಲ್ಲದೇ ಹೋದಲ್ಲಿ ಆ ಅನುದಾನವನ್ನು ಹಿಂಪಡೆಯಲಾಗುವುದು” ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...