ಫೆಬ್ರುವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚ ಮಾಡಲು ಕ್ರಮ: ಮುಖ್ಯಮಂತ್ರಿ ಸೂಚನೆ

Date:

  • ಬಂಡವಾಳ ಮೇಲಣ ವೆಚ್ಚಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 54,374 ಕೋಟಿ ರೂ. ಹಂಚಿಕೆ
  • ಶೀಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸಿ: ಸಿಎಂ

ಪ್ರಸಕ್ತ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರುವರಿ ಒಳಗೆ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಸೋಮವಾರ ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕಳೆದ ವರ್ಷದ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕೆ 46,955 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ 54,374 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಇದು ಸರ್ಕಾರದ ಆಸ್ತಿ ಸೃಜನೆಗೂ ಪೂರಕವಾಗಿರುವುದರಿಂದ ಈ ಅನುದಾನ ಸದ್ಬಳಕೆಯಾಗುವುದನ್ನು ಖಾತರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಹಾಗೂ ಆಯವ್ಯಯ ಅನುಮೋದನೆ ವಿಳಂಬವಾದ ಕಾರಣ ಒಟ್ಟಾರೆ ಪ್ರಗತಿಯಲ್ಲಿ ಹಿನ್ನಡೆಯಾಗಿದೆ. ಆದರೆ ಶೀಘ್ರವೇ ನಿಗದಿತ ಗುರಿಯಂತೆ ವೆಚ್ಚ ಮಾಡಬೇಕು. ಗ್ರಾಮೀಣ ರಸ್ತೆಗಳ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಚಿಸಿದ ಮುಖ್ಯಮಂತ್ರಿಗಳು, ಕೆ.ಕೆ.ಆರ್‌.ಡಿ.ಬಿ ಯಡಿ ಕಳೆದ ವರ್ಷದ 2,000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ 3,000 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಆದ್ದರಿಂದ ಶೀಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಜಲ ಸಂಪನ್ಮೂಲ ಇಲಾಖೆಯಲ್ಲಿ 1 ಲಕ್ಷ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುಮೋದಿತ ಕಾಮಗಾರಿಗಳ ಪೈಕಿ ಸುಮಾರು 12,000 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಇವುಗಳನ್ನು ಪರಿಶೀಲಿಸಿ, ಕೈಬಿಡುವ ಕುರಿತು ನೀರಾವರಿ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲು ಸೂಚಿಸಿದರು.

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 1400 ಕೋಟಿ ಲಭ್ಯವಿದೆ. ಅಗತ್ಯ ಔಷಧ ಮತ್ತು ಉಪಕರಣಗಳ ಖರೀದಿಗೆ ಬಳಕೆ ಮಾಡಿಕೊಳ್ಳಲು ಸೂಚಿಸಲಾಯಿತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣದ ಮಾದರಿಯನ್ನು ಇಂಡಿಯನ್‌ ಪಬ್ಲಿಕ್‌ ಹೆಲ್ತ್‌ ಸ್ಟಾಂಡರ್ಡ್‌ ಗಳ ಅನ್ವಯ ನಿಗದಿ ಪಡಿಸುವ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ದಿನೇಶ್‌ ಗುಂಡೂರಾವ್‌, ಎನ್ ಎಸ್ ಬೋಸರಾಜು, ಡಿ. ಸುಧಾಕರ್‌, ರಹೀಂ ಖಾನ್‌, ಬೈರತಿ ಸುರೇಶ್‌, ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ರಾಜೀವ್‌ ಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್‌, ಡಾ. ಎಂ.ಟಿ. ರೇಜು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...