ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚಿಸಲು ಅಗತ್ಯ ಕ್ರಮ: ಸಿಎಂ ಭರವಸೆ

Date:

ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜಯಂತಿಯನ್ನು‌ ಉದ್ಘಾಟಿಸಿ ಮಾತನಾಡಿದರು.

ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷದ ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ ಶಸ್ತ್ರ ಹಿಡಿಯದೆ ಹೋರಾಡಿ ಧರ್ಮ ಸ್ಥಾಪನೆ ಮಾಡಿದ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ಕೂಡ ಮನುಷ್ಯ ಪ್ರೀತಿಯ ಸಮಾನತೆಯ ಸಮಾಜ ಸೃಷ್ಟಿ ಆಗಬೇಕು ಎನ್ನುವುದಾಗಿತ್ತು. ಸ್ವತಂತ್ರ ಭಾರತಕ್ಕೆ ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವೂ ಇದೇ ಆಗಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದ ಧರ್ಮವನ್ಮು ಒಪ್ಪಿಕೊಳ್ಳುವ, ಆಚರಿಸುವ ಸ್ವಾತಂತ್ರ್ಯವನ್ನು ನೀಡಿತು. ಜಾತಿ, ಧರ್ಮ ಆಧಾರಿತ ತಾರತಮ್ಯ ಮತ್ತು ಅಸಮಾನತೆಯನ್ನು ಸಂವಿಧಾನಬಾಹಿರ ಎಂದು ಅಂಬೇಡ್ಕರ್ ಘೋಷಿಸಿದರು ರಂದು ಸಿದ್ದರಾಮಯ್ಯ ಹೇಳಿದರು.

ಈ ಸುದ್ದಿ ಓದಿದ್ದೀರಾ? ಸನಾತನ ವಿವಾದ: ಬಿಜೆಪಿ ಸಚಿವರಿಗೆ ಪ್ರಧಾನಿ ಸೂಚನೆ

ಹೀಗಾಗಿ ಸಂವಿಧಾನವನ್ನು ರಕ್ಷಿಸುವವರ ಕೈಯಲ್ಲಿ ಅಧಿಕಾರ ಇರಬೇಕು. ಸಂವಿಧಾನ ವಿರೋಧಿಗಳ ಕೈಗೆ ದೇಶದ ಅಧಿಕಾರವನ್ನು ನೀಡಿ ಪರಿತಪಿಸಬೇಡಿ ಎಂದು ಕಿವಿಮಾತು ಹೇಳಿದರು.

ಯಾದವ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಮಾತ್ರ ತಾರತಮ್ಯದಿಂದ ಹೊರಗೆ ಬರಬಹುದು. ಶಿಕ್ಷಣದ ಮೂಲಕ ಅಸಮಾನತೆಯನ್ನು ತೊಡೆದು ಹಾಕಬಹುದು. ಯಾದವ ಸಮುದಾಯದ ಯಾರೊಬ್ಬರೂ ಶಾಸಕರಾಗಿ ಗೆಲ್ಲದ ಕಾರಣದಿಂದ ನಾನು ಈ ಸಮುದಾಯಕ್ಕೆ ಸೇರಿದ ನಾಗರಾಜ ಯಾದವರನ್ನು ಕರೆದು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೆ. ಇದೇ ರೀತಿ ಸಮುದಾಯದ ಹಲವು ಮಂದಿಗೆ ನಾನಾ ರೀತಿಯ ರಾಜಕೀಯ ಪ್ರಾತಿನಿಧ್ಯ , ಅವಕಾಶಗಳನ್ನು ನಾನು ಒದಗಿಸಿದ್ದೇನೆ ಎಂದರು.

ಗೊಲ್ಲ, ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಿ ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದೇನೆ. ಕೇಂದ್ರ ಸರ್ಕಾರ ಹಿಡ್ಕೊಂಡು ಕುಳಿತಿದೆ. ರಾಜ್ಯ ಸರ್ಕಾರಕ್ಕೆ ಅಧಿಕಾರ ಇದ್ದಿದ್ದರೆ ಇಷ್ಟೊತ್ತಿಗೆ ನಾನೇ ಮಾಡಿ ಮುಗಿಸುತ್ತಿದ್ದೆ. ಆದರೂ ನಮ್ಮ ಶಿಫಾರಸ್ಸನ್ನು ಜಾರಿ ಮಾಡುವಂತೆ ಕೇಂದ್ರಕ್ಕೆ ಒತ್ತಡ ಹಾಕುತ್ತೇವೆ. ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚಿಸಲು ಕಾನೂನು ತರಲು ಅಗತ್ಯ ಕ್ರಮ ಕೈಮ ಕೈಗೊಂಡು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಯಾದವ ಸಮುದಾಯದ ಒಬ್ಬರನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡಿ ಎನ್ನುವ ಬೇಡಿಕೆ ಇದೆ. ಮುಂದೆ ಅವಕಾಶ ಒದಗಿಸುತ್ತೇನೆ. ನಾನು ಸಾಮಾಜಿಕ ನ್ಯಾಯದಿಂದ ವಂಚಿತರಾದ ಎಲ್ಲ ಜಾತಿ ಸಮುದಾಯಗಳ ಪರವಾಗಿ ನಾನು ಇರುತ್ತೇನೆ‌. ಸಾಮಾಜಿಕ ನ್ಯಾಯದ ಹಿತಾಸಕ್ತಿ ಕಾಪಾಡುತ್ತೇನೆ ಎಂದು ಭರವಸೆ ನೀಡಿದರು.

ಚಿತ್ರದುರ್ಗ ಜಿಲ್ಲೆ ಶ್ರೀಕೃಷ್ಣ ಯಾದವ ಮಹಾಸಂಸ್ಥಾನ ಮಠದ ಯಾದವಾನಂದ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ವಿಧಾನ‌ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...