ಚಿಕ್ಕಮಗಳೂರು | ಎಸ್ಸಿ, ಎಸ್ಟಿ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮ: ಉಪ ವಿಭಾಗಾಧಿಕಾರಿ ದಲ್ಚಿತ್ ಕುಮಾರ್

Date:

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ನಿಯಂತ್ರಣ) ಕಾಯ್ದೆ 1989 ತಿದ್ದುಪಡಿ ನಿಯಮಗಳು 2013ರಂತೆ ನಿಯಮ 17 (ಎ) ಚಿಕ್ಕಮಗಳೂರು ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಚಿಕ್ಕಮಗಳೂರು ನಗರದ ತಾಲೂಕು ಪಂಚಾಯಿತಿ ಡಾ. ಬಿ.ಆರ್. ಅಂಬೇಡ್ಕ‌ರ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಮಾತನಾಡಿದ ಉಪ ವಿಭಾಗಾಧಿಕಾರಿ ದಲ್ಚಿತ್ ಕುಮಾರ್, ಅರ್ಹ ಫಲಾನುಭವಿಗಳಿಗೆ ತಲುಪಿಸುವ ಹೊಣೆ ಆಯಾ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಹಾಗೂ ಯೋಜನೆಗಳ ಕುರಿತ ಮಾಹಿತಿಯನ್ನು ಸಮುದಾಯದ ಜನರಿಗೆ ತಲುಪಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿದರು.

ರುದ್ರಭೂಮಿಗೆ ಸಂಬಂಧಿಸಿದಂತೆ ಸ್ಥಳ ಗುರುತಿಸಿ, ಜಮೀನು ಒದಗಿಸಲು ಹಾಗೂ ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸ್ಥಳ ಗುರುತಿಸಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಟಿತ್ ಕುಮಾರ್ ಸಭೆಯಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕುರುವಂಗಿ ಗ್ರಾಮದ ಸರ್ವೆ ನಂಬ‌ರ್ 42/01 ರಲ್ಲಿ ಸ್ಮಶಾನಕ್ಕೆ ಮೂರು ಎಕರೆ ಜಮೀನು ಮಂಜೂರು ಆಗಿದ್ದು, ಸ್ಥಳ ಪರಿಶೀಲಿಸಲಾಗಿದೆ. ಸದರಿ ಸ್ಥಳದಲ್ಲಿ ಯಾವುದೇ ಒತ್ತುವರಿಯಾಗಿರುವುದು ಕಂಡು ಬಂದಿರುವುದಿಲ್ಲ ಎಂದು ಕೊಪ್ಪ ತಾಲೂಕು ತಹಶೀಲ್ದಾ‌ರ್ ತಿಳಿಸಿದರು.

2024-25ನೇ ಸಾಲಿನಲ್ಲಿ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಹಾನಿಯಾದ ಮನೆಗಳ ಸಂತ್ರಸ್ತರಿಗೆ ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಪರಿಹಾರ ಧನ ಪಾವತಿಸಲು ಕ್ರಮವಹಿಸಲಾಗುತ್ತಿದೆ. ಸಾಗುವಳಿ ಚೀಟಿ ಇಲ್ಲದಿರುವ ಸಂತ್ರಸ್ತರಿಗೂ ಸಹ ಪರಿಹಾರ ಪಾವತಿಗಾಗಿ ಹಾಗೂ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಸಾಗುವಳಿ ಚೀಟಿ ನೀಡುವ ಕುರಿತು ನಿಯಮ ಅನುಸಾರ ಕ್ರಮವಹಿಸಲಾಗುವುದು ಎಂದು ದಲ್ಟಿತ್ ಕುಮಾರ್ ಸಭೆಯಲ್ಲಿ ತಿಳಿಸಿದರು.

ಇದನ್ನೂ ಓದಿದ್ದೀರಾ:http://ರಸ್ತೆ ಇಲ್ಲ, ನೆಟ್‌ವರ್ಕ್ ಇಲ್ಲ; ಮಳೆ ಬಂದ್ರೆ ಹೊರಜಗತ್ತಿನ ಸಂಪರ್ಕವೇ ಇಲ್ಲ! Chikkamagalur | Malenadu | Rainy

ಸಭೆಯಲ್ಲಿ ಕೊಪ್ಪ ತಾಲೂಕು ತಹಶೀಲ್ದಾ‌ರ್ ಲಿಖಿತ, ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವಿಜಯ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೇವಣ್ಣ ಹಾಗೂ ಅನುಸೂಚಿ ಜಾತಿ ಮತ್ತು ಅನುಸೂಚಿ ಬುಡಕಟ್ಟುಗಳ ದೌರ್ಜನ್ಯ ಸಮಿತಿಯ ಸದಸ್ಯರುಗಳಾದ ಹುಣಸೆಮಕ್ಕಿ ಲಕ್ಷ್ಮಣ, ರಾಜ ಶಂಕ‌ರ್, ಕೆ.ಎಂ. ರಾಮಣ್ಣ ಇನ್ನಿತರರು ಉಪಸ್ಥಿತಿಯಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...