ರಾಯಚೂರು | ಕವಿತಾಳ ಪಿ.ಎಸ್.ಐ ಅಮಾನತುಗೊಳಿಸದಿದ್ದರೆ ಸತ್ಯಾಗ್ರಹ : ಗಂಗಪ್ಪ ಎಚ್ಚರಿಕೆ

Date:

ಸಿರವಾರ ತಾಲ್ಲೂಕು ಕವಿತಾಳ ಪಿ.ಎಸ್.ಐ ವೆಂಕಟೇಶ ಅವರು ಅಸ್ಪೃಶ್ಯರ ದೂರುಗಳನ್ನು ದಾಖಲು ಮಾಡಿಕೊಳ್ಳಲು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ ಗಂಗಪ್ಪ ತೋರಣದಿನ್ನಿ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 15 ದಿನದೊಳಗೆ ಕವಿತಾಳ ಪಿಎಸ್‌ಐ ವೆಂಕಟೇಶ್‌ ಅವರನ್ನು ಅಮಾನತು ಮಾಡಬೇಕು. ಇಲ್ಲವಾದಲ್ಲಿ ಡಿಸೆಂಬರ್ 10 ರಂದು ಎಸ್.ಪಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ನವೆಂಬರ್ 15 ರಂದು ತೋರಣದಿನ್ನಿ ಕ್ರಾಸ್ ನಲ್ಲಿ ಶ್ರೀ ಯಲ್ಲಮ್ಮ ದೇವಿ ಜಾತ್ರೆಯ ವೇಳೆ ನಾಯಕ ಮತ್ತು ಮಾದಿಗ ಸಮುದಾಯದವರ ನಡುವೆ ನಡೆದ ಗಲಾಟೆಯಲ್ಲಿ ಮಾದಿಗ ಸಮುದಾಯದ ಯುವಕ ಮಾವುತ್ಸಂಗ್ ನಲಿನ್ ಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆ ದಾಖಲಾಗಿದ್ದರು. ಆದರೂ ಸಹ ಯಾರೊಬ್ಬ ಪೊಲೀಸರು ಅಲ್ಲಿಗೆ ತೆರಳಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆಗೊಳಗಾದ ಯುವಕ ದೂರು ದಾಖಲಿಸಲು ಠಾಣೆಗೆ ಬಂದರೂ ದೂರು ದಾಖಲಿಸದೆ ರಾಜೀ ಸಂಧಾನಕ್ಕೆ ಮುಂದಾಗಿದ್ದಾರೆ. ಮೇಲಾಧಿಕಾರಿಗಳ ಗಮನಕ್ಕೆ ತಂದಾಗ ಎರಡು-ಮೂರು ದಿನಗಳ ನಂತರ ದೂರು ದಾಖಲಿಸಿಕೊಳ್ಳಲಾಗಿದೆ.

ಮಾದಿಗ ಜನಾಂಗದವರು ಮೇಲೆ ಸುಳ್ಳು ಪ್ರಕರಣವನ್ನು ಕೂಡಲೇ ದಾಖಲಿಸಲಾಗಿದೆ. ಅದು ಅಲ್ಲದೆ ದೂರಿನಲ್ಲಿ ಪ್ರಸ್ತಾಪಿಸಿದ ವ್ಯಕ್ತಿಗಳಲ್ಲಿ ಕೆಲವರು ಸುಕ್ಷೇತ್ರ ಹುಲಿಗಿ ಹಾಗೂ ಮಸ್ಕಿಯಲ್ಲಿದ್ದರು. ಪ್ರತ್ಯಕ್ಷ ಸಾಕ್ಷಿಗಳೆಂದು ಹೆಸರಿಸಿದವರಿಗೂ ದೂರಿನ ಬಗ್ಗೆ ಮಾಹಿತಿ ಇಲ್ಲ. ಹೀಗೆ ದಲಿತರು ಮತ್ತು ಮೇಲ್ವರ್ಗದವರ ನಡುವೆ ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದಾರೆ. ಆದ್ದರಿಂದ ಪಿಎಸ್‌ಐ ವೆಂಕಟೇಶ್ ಅವರನ್ನು 15 ದಿನಗಳೊಳಗೆ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ರಾಯಚೂರು | ಮಹಾರಾಷ್ಟ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲು ಇವಿಎಂ ದುರ್ಬಳಕೆ: ವಸಂತ ಕುಮಾರ್

ಸುದ್ದಿಗೋಷ್ಠಿಯಲ್ಲಿ ಮಾವುತ್ಸುಂಗ ನಲಿನ್ ಕುಮಾರ್, ಜೋಸೆಫ್‌, ಕರಿಯಪ್ಪ ತೋರಣದಿನ್ನಿ, ಮೌನೇಶ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...