ಸುಧಾಮೂರ್ತಿ ಅವರ ಆಸ್ತಿ ಜಗದಗಲ—ತಿಳಿವಳಿಕೆ ಚಮಚದಗಲ: ನಟ ಚೇತನ್‌ ಅಹಿಂಸಾ ಟೀಕೆ

Date:

  • ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದ ಬಿಲ್ಡಪ್‌ನಿಂದ ಗೌರವಿಸಲ್ಪಟ್ಟ ವ್ಯಕ್ತಿ
  • ಸಸ್ಯಾಹಾರ-ಮಾಂಸಾಹಾರದ ಅಡುಗೆಗೆ ಒಂದೇ ಚಮಚ ಹೇಳಿಕೆಗೆ ಟೀಕೆ

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ಸಸ್ಯಾಹಾರ ಹಾಗೂ ಮಾಂಸಾಹಾರದ ಅಡುಗೆಗೆ ಒಂದೇ ಚಮಚ ಬಳಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದನ್ನು ನಟ ಚೇತನ್‌ ಅಹಿಂಸಾ ಅವರು ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಸುಧಾಮೂರ್ತಿಯವರು ನಮ್ಮ ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ” ಎಂದು ಟೀಕೆ ಮಾಡಿದ್ದಾರೆ.

ಮುಂದುವರಿದು, “ಅವರು ತನ್ನ ಸೀಮಿತ, ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಾರೆ. ಸುಧಾಮೂರ್ತಿಯವರು ಹೆಚ್ಚು ಮಾತನಾಡಬೇಕು; ಅವರ ಆಸ್ತಿ ಜಗದಗಲ —ತಿಳಿವಳಿಕೆ ಚಮಚದಗಲ!” ಎಂದು ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಚೇತನ್‌ ಅಹಿಂಸಾ

ಏನಿದು ಪ್ರಕರಣ?

ಸುಧಾಮೂರ್ತಿ ಅವರು ಇತ್ತೀಚೆಗೆ ‘ಖಾನೆ ಮೇ ಕ್ಯಾ ಹೈ’ ಯೂಟ್ಯೂಬ್ ಚಾನೆಲ್‌ನ ‘ಖಾನೆ ಮೇ ಕೌನ್ ಹೇ’ ಎಂಬ ಸಂಚಿಕೆಯಲ್ಲಿ ಕಾಣಿಸಿಕೊಂಡಿದ್ದರು. ಆ ವೇಳೆ ತಮ್ಮ ಆಹಾರ ಕ್ರಮದ ರೀತಿ, ನೀತಿಗಳ ಬಗ್ಗೆ ಮಾತನಾಡಿದ್ದರು.

“ಹೋಟೆಲ್‌ಗಳಲ್ಲಿ ಸಸ್ಯಾಹಾರ-ಮಾಂಸಾಹಾರ ಭಕ್ಷ್ಯಗಳಿಗೆ ಒಂದೇ ಚಮಚ ಬಳಸುವ ಬಗ್ಗೆ ನನ್ನ ಮನಸ್ಸಿಗೆ ತುಂಬಾ ಆತಂಕವಾಗುತ್ತದೆ. ನಾನೊಬ್ಬಳು ಶುದ್ಧ ಸಸ್ಯಾಹಾರಿ. ಮೊಟ್ಟೆ ಸಹಿತ ಯಾವುದೇ ಮಾಂಸಾಹಾರ ಮತ್ತು ಬೆಳ್ಳುಳ್ಳಿಯನ್ನು ಸೇವಿಸುವುದಿಲ್ಲ. ವಿದೇಶಕ್ಕೆ ಹೋದರೂ ಕೂಡ ಸಸ್ಯಾಹಾರಿ ರೆಸ್ಟೋರೆಂಟ್‌ಗಳನ್ನೇ ಹುಡುಕುತ್ತೇನೆ. ಮನೆ ಊಟವನ್ನು ಹೆಚ್ಚಾಗಿ ಇಷ್ಟಪಡುವೆ. ಪ್ರಯಾಣ ಮಾಡುವಾಗ ಮನೆಯಲ್ಲೇ ತಯಾರಿಸಿದ ಆಹಾರ ಕೊಂಡೊಯ್ಯುತ್ತೇನೆ” ಎಂದು ಹೇಳಿದ್ದರು.

ಸುಧಾಮೂರ್ತಿ ಅವರ ಈ ಹೇಳಿಕೆ ಮಾಧ್ಯಮಗಳಲ್ಲಿ ಪ್ರಕಟವಾಗಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಚಾರವಾಗಿ ನಟ ಚೇತನ್‌ ಅಹಿಂಸಾ ಅವರು ನೇರವಾಗಿ ಸುಧಾಮೂರ್ತಿ ಅವರನ್ನು ಟ್ವೀಟ್‌ ಮೂಲಕ ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...