ಮೈಸೂರು | ವ್ಯಸನ, ವ್ಯಸನಿಯನ್ನು ಸಮಾಜದಿಂದ ದೂರ ಮಾಡುತ್ತದೆ : ಎಸ್ ಬಸವರಾಜು

Date:

ಮೈಸೂರಿನ ಹೊರ ವರ್ತುಲ ರಸ್ತೆಯಲ್ಲಿರುವ ಮೈಕಾ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗಾಗಿ ಅಯೋಜಿಸಿದ್ದ ವ್ಯಸನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಬಸವಮಾರ್ಗ ಫೌಂಡೇಷನ್ ನ ಎಸ್ ಬಸವರಾಜು ಮಾತನಾಡಿ ವ್ಯಸನ, ವ್ಯಸನಿಯನ್ನು ಸಾಮಾಜಿಕವಾಗಿ ಹಾಗೂ ಕೌಟುಂಬಿಕವಾಗಿ ದೂರ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಮಾದಕ ವ್ಯಸನದಿಂದಾಗುವ ಪರಿಣಾಮಗಳ ಬಗ್ಗೆ ಎಲ್ಲರಿಗೂ ಅರಿವಿದೆ. ಆದರೂ, ಹೆಚ್ಚಿನ ಜನರು ವ್ಯಸನಿಗಳಾ ಗುತ್ತಿದ್ದಾರೆ. ಕ್ಷಣಿಕ ಸುಖಕ್ಕಾಗಿ ಪ್ರಾಣವನ್ನೇ ಬಲಿ ಕೊಡುತ್ತಿದ್ದಾರೆ. ತಾತ್ಕಾಲಿಕ ಉನ್ಮಾದ ನಮ್ಮ ಜೀವನವನ್ನು ಸಂಕಟಕ್ಕೆ ತಳ್ಳುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಾದಕ ವಸ್ತುಗಳು ಮನುಷ್ಯನ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸುತ್ತವೆ. ವ್ಯಸನಿಯನ್ನಾಗಿ ಪರಿವರ್ತಿಸಿ ಕಾನೂನುಬಾಹಿರ ಮಾರ್ಗವನ್ನು ಹಿಡಿಯುವಂತೆ ಮಾಡುತ್ತದೆ. ಇದರಿಂದಾಗಿ, ವ್ಯಕ್ತಿ ಸಮಾಜದಲ್ಲಿ ಅಗೌರವಕ್ಕೆ ಪಾತ್ರನಾಗುತ್ತಾನೆ. ಕೌಟುಂಬಿಕ ಕಲಹ ಹಾಗೂ ತನ್ನ ಆರೋಗ್ಯವನ್ನು ಹಾಳುಮಾಡಿಕೊಳ್ಳುವ ಮೂಲಕ ತನ್ನ ಬದುಕನ್ನ ಅಂತಿಮಗೊಳಿಸಿಕೊಳ್ಳುತ್ತಾನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೀವನದಲ್ಲಿ ಉತ್ತಮ ಆಲೋಚನೆಗಳಿಗೆ ತೆರೆದುಕೊಳ್ಳಬೇಕು. ಒಳ್ಳೆಯ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು. ತನ್ನ ಗುರಿಯತ್ತ ಸಾಗಲು ಪರಿಶ್ರಮಪಡಬೇಕು. ಆಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ. ನಮ್ಮ ಎಲ್ಲ ಶಕ್ತಿಯನ್ನು ಉತ್ತಮ ಕೆಲಸಗಳಿಗೆ ವಿನಿಯೋಗಿಸಿದಾಗ ಸಮಾಜದಲ್ಲಿ ಯಶಸ್ಸನ್ನು ಹೊಂದಲು ಸಾಧ್ಯ ಎಂದು ಕಿವಿಮಾತು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮಂಡ್ಯ | ‘ಸ್ವರಾಜ್ ಉತ್ಸವ’ : ವಿಷಯಾಧಾರಿತ ಸಂವಾದ, ಚರ್ಚೆ, ಪ್ರದರ್ಶನ

ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಸವಮಾರ್ಗ ಫೌಂಡೇಶನ್ ವತಿಯಿಂದ ಸ್ಥಳದಲ್ಲೆ ವಿದ್ಯಾರ್ಥಿಗಳಿಗೆ ವ್ಯಸನ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಉತ್ಸುಕವಾಗಿ ಪಾಲ್ಗೊಂಡ ವಿದ್ಯಾರ್ಥಿಗಳು ಅರ್ಧಗಂಟೆ ಅವಧಿಯಲ್ಲಿ ಪ್ರಬಂಧ ಬರೆದರು. ಅತ್ಯುತ್ತಮವಾಗಿ ಬರೆದ ಪ್ರಬಂಧಗಳಿಗೆ ನಗದು ಬಹುಮಾನ ಘೋಷಣೆ ಮಾಡಲಾಯಿತು.

ವಿಶೇಷ ವಿಡಿಯೋ ವೀಕ್ಷಿಸಿ : https://www.youtube.com/watch?v=A4kqUxXWMIw

ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಶೋಭಿತಾ, ಎಸ್. ದಿಯಾ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...