ಹುಬ್ಬಳ್ಳಿ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು; ಕೆಲವು ನಿಲ್ದಾಣಗಳಲ್ಲಿ ಹೆಚ್ಚು ಸಮಯ ನಿಲುಗಡೆ ಅವಕಾಶ

Date:

  • ಮಾರ್ಚ್ 22ರಿಂದಲೇ ಹೊಸ ಆದೇಶ ಜಾರಿಗೆ
  • ಪ್ರಯಾಣಿಕರ ಅನುಕೂಲಕ್ಕಾಗಿ ಬದಲಾವಣೆ

ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಇತ್ತೀಚೆಗೆ ಪರಿಚಯಿಸಲಾದ ರೈಲು ಸಂಖ್ಯೆ 07339/07340 ಮತ್ತು 07353/07354ರ ರೈಲು ಗಾಡಿಗಳು ಪ್ರಯಾಣಿಕರ ಅನುಕೂಲಕ್ಕಾಗಿ ಕೆಲವು ನಿಲ್ದಾಣಗಳಲ್ಲಿ ಹೆಚ್ಚುವರಿ ಸಮಯ ನಿಲುಗಡೆಗೆ ಅವಕಾಶ ಒದಗಿಸಲಾಗಿದೆ.

ಮಾರ್ಚ್ 22ರಿಂದ ಜಾರಿಗೆ ಬರುವಂತೆ, ಈ ರೈಲು (07339) ಬೆಳಿಗ್ಗೆ 03:33 ಕ್ಕೆ ಅರಸೀಕೆರೆಗೆ ಆಗಮಿಸುತ್ತದೆ. ಬೆಳಿಗ್ಗೆ 03:36ಕ್ಕೆ ಹೊರಡುತ್ತದೆ. ಅದೇ ರೀತಿ ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಸ್ಪೆಷಲ್ ಎಕ್ಸ್‌ಪ್ರೆಸ್‌ ಮಾರ್ಚ್ 23ರಿಂದ ಮುಂಜಾನೆ 02:07ಕ್ಕೆ ಅರಸೀಕೆರೆಗೆ ಬಂದು 02:10ಕ್ಕೆ ಹೊರಡಲಿದೆ.

ರೈಲು ಸಂಖ್ಯೆ 07353/07354 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಯಶವಂತಪುರ, ತುಮಕೂರು ಮತ್ತು ಅರಸೀಕೆರೆ ನಿಲ್ದಾಣಗಳಲ್ಲಿ ಹೆಚ್ಚು ಸಮಯ ನಿಲುಗಡೆಯನ್ನು ಹೊಂದಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೈಲು (07353) ಯಶವಂತಪುರದಿಂದ ಬೆಳಿಗ್ಗೆ 07.39/07.41ಕ್ಕೆ, ತುಮಕೂರು 08.28/08.30ಕ್ಕೆ ಮತ್ತು ಅರಸೀಕೆರೆ ಬೆಳಿಗ್ಗೆ 09.40/09.43ಕ್ಕೆ ಆಗಮಿಸಿ, ನಿರ್ಗಮಿಸುತ್ತದೆ. ಅದೇ ರೀತಿ ರೈಲು ಸಂಖ್ಯೆ 07354 ಅರಸೀಕೆರೆಯಿಂದ ರಾತ್ರಿ 7.17ಕ್ಕೆ, ತುಮಕೂರು ರಾತ್ರಿ 8.48ಕ್ಕೆ ಹಾಗೂ ಯಶವಂತಪುರದಿಂದ ರಾತ್ರಿ 10.08ಕ್ಕೆ ಹೊರಡಲಿದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...