ಕೊಪ್ಪಳ | ಚುನಾವಣಾ ಕರ್ತವ್ಯದ ಜೊತೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಯೂ ಅಗತ್ಯ :ಜಿಲ್ಲಾಧಿಕಾರಿ

Date:

ಚುನಾವಣಾ ಕರ್ತವ್ಯದ ಜೊತೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗೂ ಹೆಚ್ಚಿನ ಗಮನ ಕೊಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ಸೂಚಿಸಿದರು.

ಕೊಪ್ಪಳ ನಗರದ  ಹಲವು ಇಲಾಖೆಗಳ ಅಧಿಕಾರಿಗಳೊಂದಿಗೆ ಮೇ 5ರಂದು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, “ಜೀವಜಲವು ಪ್ರತಿಯೊಬ್ಬರಿಗೂ ಪ್ರತಿದಿನ ಅತವಶ್ಯಕವಾಗಿ ಬೇಕಾಗುತ್ತದೆ. ದಿನ ಬೆಳಗಾದರೆ ನೀರಿನಿಂದಲೇ ಬದುಕು ಆರಂಭವಾಗುತ್ತದೆ. ಬೀದಿ ದೀಪ, ರಸ್ತೆ ಸೌಕರ್ಯ ಎಷ್ಟು ಮುಖ್ಯವೋ, ನೀರು ಸಹ ಸಾರ್ವಜನಿಕರಿಗೆ ಅತ್ಯವಶ್ಯವಾಗಿ ಬೇಕಾಗುತ್ತದೆ” ಎಂದು ತಿಳಿಸಿದರು.

“ಅಧಿಕಾರಿಗಳು ನೀರಿನ ಅವಶ್ಯಕತೆಯನ್ನು ಅರಿತುಕೊಳ್ಳಬೇಕು. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ದೂರು ಹೇಳಿದಾಗ ಕೂಡಲೇ ಕಾರ್ಯಪ್ರವೃತ್ತರಾಗಿ ಸ್ಪಂದನೆ ನೀಡಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೇಸಿಗೆ ಇರುವಾಗಲೇ ಮಳೆ ಬೀಳಲು ಆರಂಭವಾಗಿದೆ. ಮಳೆಯಿಂದ ಜನ-ಜಾನುವಾರುಗಳಿಗೆ ಹಾನಿಯಾದ ಬಗ್ಗೆ ಗೊತ್ತಾದಲ್ಲಿ ನಿಗದಿಪಡಿಸಿದ ಅವಧಿಯೊಳಗೆ ಪರಿಹಾರಕ್ಕೆ ಕ್ರಮ ಜರುಗಿಸಬೇಕು” ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಾನುವಾರುಗಳಿಗೆ ಮೇವಿನ ಮತ್ತು ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

“ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಲವಾರು ಸುತ್ತಿನಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಹಿಂದಿನ ಸಭೆಗಳಲ್ಲಿ ನಿರ್ದೇಶನ ನೀಡಿದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಗ್ರಾಮಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ನರೇಗಾ ಕಾಮಗಾರಿಗಳು ನಿಯಮಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸುವಂತೆ ಆಗ್ರಹ

“ತಾಲೂಕು ಮಟ್ಟದಲ್ಲಿಯೂ ಸಭೆ ನಡೆಸಿ ಚರ್ಚಿಸಿ ಜನತೆಗೆ ಸ್ಪಂದನೆ ನೀಡಬೇಕು ಎಂದು ತಿಳಿಸಿದ್ದು, ವಿದ್ಯುತ್ ಕಡಿತದ ಕಾರಣಕ್ಕೆ ಕುಡಿಯುವ ನೀರು ಸಿಗುತ್ತಿಲ್ಲ ಎನ್ನುವ ದೂರುಗಳು ಬರಕೂಡದು. ವಿದ್ಯುತ್ ತಂತಿ, ಕಂಬಗಳು ದುರಸ್ತಿಯಿದ್ದಲ್ಲಿ ಬೇಗನೆ ಸರಿಪಡಿಸಿ ಕುಡಿವ ನೀರು ಪೂರೈಕೆಗೆ ಸಮರ್ಪಕ ವಿದ್ಯುತ್ ವ್ಯವಸ್ಥೆಯಾಗಬೇಕು” ಎಂದು ಜಿಲ್ಲಾಧಿಕಾರಿಗಳು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಆದ್ಯತೆಯ ಮೇರೆಗೆ ಜಲಜೀವನ್ ಮಿಷನ್ ಮತ್ತು ಡಿಬಿಓಟಿ ದುರಸ್ತಿಗೆ ಒತ್ತು ಕೊಡಬೇಕು. ಜನರಿಗೆ ಸಾಕಷ್ಟು ಅನುಕೂಲಕರವಾದ ಜೆಜೆಎಂ ಮತ್ತು ಡಿಬಿಓಟಿ ಮೂಲಕವೇ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು” ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ರಾಹುಲ್ ರತ್ನಂ ಪಾಂಡೆಯ ಸೇರಿದಂತೆ ನಗರಸಭೆ ಪೌರಾಯುಕ್ತರು, ಹಲವು ಪುರಸಭೆ ಹಾಗೂ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗದ ಅಭಿಯಂತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...