ಚಾಮರಾಜನಗರ | ತೆಂಗು ಬೆಳೆ ಮೌಲ್ಯವರ್ಧನೆಗೆ ತಜ್ಞರ ಚಿಂತನೆಗಳನ್ನು ಅಳವಡಿಸಿಕೊಳ್ಳಿ : ಶಿಲ್ಪಾ ನಾಗ್

Date:

ಚಾಮರಾಜನಗರದ ಜೆ. ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಮಹಾವಿದ್ಯಾಲಯ ಮೈಸೂರು ಹಾಗೂ ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ಸಹಯೋಗದಲ್ಲಿ ‘ವಿಶ್ವ ತೆಂಗು ದಿನಾಚರಣೆ’ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ “ತೆಂಗು ಬೆಳೆಯಲ್ಲಿ ಪ್ರಮುಖ ಕೀಟ, ರೋಗಬಾಧೆಯ ಸಮಗ್ರ ನಿರ್ವಹಣೆ’ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಆರೋಗ್ಯವರ್ಧಕವಾಗಿರುವ ತೆಂಗು ಬೆಳೆಯ ಮೌಲ್ಯವರ್ಧನೆಗೆ ತಜ್ಞರ ಚಿಂತನೆಗಳನ್ನು ರೈತರು ಅಳವಡಿಸಿಕೊಂಡು ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.

“ತೆಂಗು ಬೆಳೆ ರೈತರಿಗೆ ವರದಾನವಾಗಿದೆ. ಕೃಷಿ ಪ್ರಧಾನವಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಜತೆಯಲ್ಲಿಯೇ ತೆಂಗು ಬೆಳೆಗೂ ಪ್ರಾಮುಖ್ಯತೆ ನೀಡಲಾಗಿದೆ. ಕರ್ನಾಟಕದಲ್ಲಿ 7 ಲಕ್ಷ ಹೆಕ್ಟೇರ್ ನಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ತೆಂಗು ಬೆಳೆಯಲ್ಲಿ ದೇಶ 2ನೇ ಸ್ಥಾನ ಪಡೆದಿದೆ. ತುಮಕೂರು, ಹಾಸನ, ಚಿತ್ರದುರ್ಗ ಸೇರಿದಂತೆ ಚಾಮರಾಜನಗರ ತೆಂಗು ಬೆಳೆಯುವ ಪ್ರಮುಖ ಜಿಲ್ಲೆಗಳಾಗಿವೆ. ಜಿಲ್ಲೆಯಲ್ಲಿ ತೆಂಗು ಬೆಳೆಯ ಸಾಕಷ್ಟು ಉತ್ಪನ್ನಗಳು ಹೆಚ್ಚಾಗಿ ನೆರೆಯ ರಾಜ್ಯಗಳಿಗೆ ರಪ್ತಾಗುತ್ತಿರುವುದರಿಂದ ಆರ್ಥಿಕವಾಗಿ ಬರುವ ಲಾಭ ನೇರವಾಗಿ ನಮ್ಮ ರೈತರಿಗೆ ತಲುಪುತ್ತಿಲ್ಲ. ನಮ್ಮ ಉತ್ಪನ್ನಗಳ ಲಾಭ ನಮಗೆ ದೊರೆಯುವಂತಾಗಬೇಕು” ಎಂದರು.

“ತೆಂಗಿನ ಮರ ಕಲ್ಪವೃಕ್ಷವಾಗಿದೆ. ಯಾವುದೇ ಪೂಜೆ-ಪುನಸ್ಕಾರ, ಅಡುಗೆ-ಆಹಾರ ತಯಾರಿಕೆ ಸೇರಿದಂತೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೆಂಗು ಪ್ರಧಾನ ಸ್ಥಾನ ಪಡೆದಿದೆ ಎಂದರೆ ತಪ್ಪಾಗಲಾರದು. ತೆಂಗಿನ ಪ್ರತಿಯೊಂದು ಅಂಗವು ಬಹುಪಯೋಗಿಯಾಗಿದೆ. ಎಳನೀರು ನೈಸರ್ಗಿಕವಾಗಿ ಆರೋಗ್ಯ ವರ್ಧನೆ ಹೆಚ್ಚಿಸಲಿದೆ. ಇತ್ತೀಚೆಗೆ ಎಳನೀರಿನಿಂದ ತಯಾರಿಸಲಾಗುವ ಕೋಲ್ಡ್ ಪ್ರೆಸ್ಟ್ ಆಯಿಲ್‍ಗೆ ಸಾಕಷ್ಟು ಬೇಡಿಕೆಯಿದೆ. ಎ.ಪಿ.ಎಂ.ಸಿಯಲ್ಲಿ ಎಳನೀರು ಮಾರುಕಟ್ಟೆ ತೆರೆಯುವ ಚಿಂತನೆ ಇದೆ. ಅಡುಗೆಯಲ್ಲಿ ತೆಂಗಿನೆಣ್ಣೆ ಬಳಕೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಸರ್ಕಾರವು ತೆಂಗು ಬೆಳೆಯುವ ರೈತರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿ ರಿಯಾಯಿತಿ ದರದಲ್ಲಿ ಸಾಲ-ಸಹಾಯಧನ ಸೌಲಭ್ಯ ನೀಡುತ್ತಿದ್ದು, ಯೋಜನೆಗಳ ಅರಿವು, ಮಾಹಿತಿ ರೈತರಿಗೆ ತಲುಪಬೇಕಿದೆ. ಇದಕ್ಕಾಗಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ರೈತರ ಮಾಹಿತಿಗಾಗಿ ನಿಯೋಜಿಸಲಾಗಿರುವ ಕೃಷಿ ಸಖಿ ಹಾಗೂ ಪಶು ಸಖಿಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇತ್ತೀಚೆಗೆ ತೆಂಗು ಬೆಳೆಗೆ ಹೊಸ ಹೊಸ ರೋಗಭಾಧೆಗಳು ಕಾಡುತ್ತಿವೆ. ಕಪ್ಪುತಲೆ ಹುಳು ರೋಗದ ಕುರಿತು ಸಮೀಕ್ಷೆ ನಡೆಸಲು ಸರ್ಕಾರ ನಿರ್ದೇಶನ ನೀಡಿದೆ. ಒಟ್ಟಿನಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ತಜ್ಞರ ಮಾರ್ಗದರ್ಶನ ರೈತರಿಗೆ ಅವಶ್ಯವಾಗಿದೆ ಎಂದು ತಿಳಿಸಿದರು.

ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರಾದ ಎ. ಎಂ. ಮಹೇಶ್ ಪ್ರಭು ಅವರು ಮಾತನಾಡಿ “ವಿಶ್ವ ತೆಂಗು ದಿನಾಚರಣೆಯನ್ನು ಇಂದು ವಿಶ್ವಾದಾದ್ಯಂತ ಆಚರಿಸಲಾಗುತ್ತಿದ್ದು, ಚಾಮರಾಜನಗರವು ಸಹ ತೆಂಗು ಬೆಳೆಯುವ ಪ್ರಮುಖ ಜಿಲ್ಲೆಯಾಗಿದೆ. ಬಹುವಾರ್ಷಿಕ ಬೆಳೆಯಾಗಿರುವ ತೆಂಗು ರೈತರಿಗೆ ತಲಾತಲಾಂತರದ ವರೆಗೆ ಆದಾಯ ತರಲಿದೆ. ತೆಂಗಿನಿಂದ 130 ಬಗೆಯ ಉತ್ಪನ್ನಗಳನ್ನು ತಯಾರಿಸಬಹುದಾಗಿದೆ. ಸಹಕಾರಿ ಸಂಸ್ಥೆಗಳ ಮೂಲಕ ತೆಂಗು ಮಾರಾಟಕ್ಕೆ ಮೌಲ್ಯವರ್ಧನೆ ದೊರಕಿಸಿ ಸುಸ್ಥಿರ ಅಭಿವೃದ್ಧಿಗೆ ಯೋಜಿಸಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಜೆಪಿಗರೇ ಧರ್ಮದ ಹೆಸರಿನಲ್ಲಿ ಕೀಳುಮಟ್ಟದ ರಾಜಕೀಯ ಮಾಡಬೇಡಿ : ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ರೈತ ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಮಹೇಶ್ ಕುಮಾರ್ ಹಾಗೂ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣೆ ಘಟಕದ ನಿರ್ದೇಶಕ ಪುಟ್ಟರಸು, ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ರೋಗಶಾಸ್ತ್ರಜ್ಞ ಪಂಪನಗೌಡ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...