ಉಡುಪಿ | ಪಹಲ್ಗಾಮ್ ಭಯೋತ್ಪಾದನಾ ದಾಳಿಯನ್ನು ಖಂಡಿಸಿ SDPI ವತಿಯಿಂದ ಜಿಲ್ಲೆಯಾದ್ಯಂತ ಕ್ಯಾಂಡಲ್ ಲೈಟ್ ಮಾರ್ಚ್

Date:

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ ಹಾಗೂ ಮೃತರಾದ ಅಮಾಯಕರಿಗೆ ಸಂತಾಪ ಸೂಚಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕ್ಯಾಂಡಲ್ ಲೈಟ್ ಮಾರ್ಚ್ ಅನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಇಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಕಾಪು ಪೇಟೆ, ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕ, ಗಂಗೊಳ್ಳಿ ಹಾಗೂ ಕಂಡ್ಲೂರಿನಲ್ಲಿ ಕ್ಯಾಂಡಲ್ ಲೈಟ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.

1005148148

ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಎಸ್ ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಶಾಹಿದ್ ಆಲಿ ಈ ಭಯೋತ್ಪಾದನಾ ಕೃತ್ಯವನ್ನು ನಾವು ಖಂಡಿಸುತ್ತಿದ್ದೇವೆ ಹಾಗೂ ಈ ಘಟನೆಯ ಸಂಬಂಧಿಸಿ ನಿಷ್ಪಕ್ಷಪಾತ ತನಿಖೆಯಾಗಬೇಕು ಹಾಗೂ ಇದರ ಹಿಂದೆ ಇರುವ ಷಡ್ಯಂತರವನ್ನು ಬಯಲಿಗೆಳೆಯಬೇಕು ಮತ್ತು ಅಪರಾಧಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಹಾಗೂ ಕ್ಷೇತ್ರ ಸಮಿತಿ ನಾಯಕರು ಭಾಗವಹಿಸಿದ್ದರು.

1005148109
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...