ಅಫಜಲಪುರ | ಕಬ್ಬು ಕಟ್ಟಿಂಗ್‌, ಎಫ್‌ಆರ್‌ಪಿ, ಸಾಗಾಣಿಕೆ ವೆಚ್ಚ ನಿಗದಿಗೆ ರೈತರ ಆಗ್ರಹ: ಅ.23ರಂದು ರಸ್ತೆತಡೆ ಚಳವಳಿ

Date:

ಕಬ್ಬು ಕಟ್ಟಿಂಗ್‌ ವೆಚ್ಚ, ಎಫ್‌ಆರ್‌ಪಿ ಹಾಗೂ ಸಾಗಾಣಿಕೆ ವೆಚ್ಚ ನಿಗದಿಪಡಿಸಿ ಸಕ್ಕರೆ ಕಾರ್ಖಾನೆಗಳು ಪ್ರಾರಂಭಿಸಬೇಕು. ಅಲ್ಲಿಯವರೆಗೆ ಸಕ್ಕರೆ ಕಾರ್ಖಾನೆಗಳು ಚಾಲು ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌) ಅಕ್ಟೋಬರ್‌ 23ರಂದು ಅಫಜಲಪುರ ತಾಲೂಕಿನ ಚೌಡಾಪುರ ಕ್ರಾಸ್ ಬಳಿ ರಸ್ತೆತಡೆ ಚಳವಳಿ ಹಮ್ಮಿಕೊಂಡಿದೆ.

“ಕೇಂದ್ರ ಸರ್ಕಾರದ ಎಫ್‌ಆರ್‌ಪಿ ಪ್ರಕಾರ ಪ್ರತಿ ಟನ್ ಕಬ್ಬಿಗೆ ₹3,500 ನಿಗದಿಪಡಿಸಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸ ಮಾಡುವುದನ್ನು ತಡೆಗಟ್ಟಿ ಮುಖ್ಯ ಗೇಟಿನಲ್ಲಿ ತೂಕದ ಮಾಪನ((ವೆ ಬ್ರಿಜ್) ಹಾಕಿ, ರೈತರು ಎತ್ತಿನ ಬಂಡಿ, ಟ್ಯ್ರಾಕ್ಟರ್‌, ಲಾರಿಗಳಲ್ಲಿ ತರುವ ಕಬ್ಬನ್ನು ರೈತರ ಸಮ್ಮುಖದಲ್ಲಿಯೇ ತೂಕ ಮಾಡಿ ಗಾಡಿಗಳನ್ನು ಕಾರ್ಖಾನೆಗಳ ಒಳಗಡೆ ಕಳುಹಿಳಿಸಬೇಕು” ಎಂದು ಒತ್ತಾಯಿಸಲಿದ್ದಾರೆ.

“ಕಬ್ಬು ಬೆಳೆಗಾರರಿಗೆ ಅನ್ಯಾಯವಾಗುವುದನ್ನು ತಡೆಗಟ್ಟಲು 12, 13 ತಿಂಗಳ ಒಳಗಾಗಿ ಸರಿಯಾದ ಸಮಯಕ್ಕೆ ಕಬ್ಬು ಕಟಾವು ಮಾಡಬೇಕು. ತಡಮಾಡಿ ಕಬ್ಬು ಕಟಾವು ಮಾಡಿದರೆ ಕಬ್ಬು ಬೆಂಡು ಬಂದು ಸಕ್ಕರೆ ಅಂಶ ಕಮ್ಮಿಯಾಗಿ ರೈತರಿಗೆ ಅನ್ಯಾಯವಾಗುತ್ತದೆ. ರೈತರ ಸಮ್ಮುಖದಲ್ಲಿ ಸಕ್ಕರೆ ಇಳುವರಿ ತೆಗೆಯಬೇಕು. ಪ್ರತಿ 15 ದಿನಕ್ಕೊಮ್ಮೆ ಸಕ್ಕರೆ ಇಳುವರಿ ತೆಗೆಯಬೇಕು. ಕಬ್ಬು ಕಾಟಾವು ಮಾಡಿ ತೂಕ ಮಾಡಿದ 14 ದಿನದ ಒಳಗಾಗಿ ರೈತರ ಖಾತೆಗೆ ಹಣ ಪಾವತಿಸಬೇಕು. ಕಬ್ಬಿನ ಉಪ ಉತ್ಪನ್ನಗಳಾದ ಮೋಲಾಸಸ್, ಕಾಕಂಬಿಕ, ಎಥಿನಾಲ್, ಡಿಸ್ಟಲರಿಸ್, ವಿದ್ಯುತ್, ಬಯೋ ಕಾಂಪೋಸ್ಟ್ ಪಶು ಆಹಾರ ಬಗಾಸಸ್ ಸೇರಿದಂತೆ ಇತರೆ ಉತ್ಪನ್ನಗಳ ಲಾಭಾಂಶದಲ್ಲಿ ರೈತರಿಗೆ ಪಾಲು ಕೋಡಬೆಕು” ಎಂದು ಆಗ್ರಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ತಾಪುರ | ರ‍್ಯಾಲಿ ನಡೆಸಲು ತ್ರಿಕೋನ ಸ್ಪರ್ಧೆ: ಆರೆಸ್ಸೆಸ್‌ ಬಳಿಕ ದಲಿತ ಪ್ಯಾಂಥರ್ಸ್, ಭೀಮ್ ಆರ್ಮಿ ಮನವಿ

ರೇಣುಕಾ ಸಕ್ಕರೆ ಕಾರ್ಖಾನೆ, ಕೆಪಿಆರ್ ಚಿಣಮಗೆರಿ ಸಕ್ಕರೆ ಕಾರ್ಖಾನೆ,‌ ಉಗಾರ ಶುಗರ್ಸ್‌ ಸಕ್ಕರೆ ಕಾರ್ಖಾನೆ, NSL ಸನೂರು ಸಕ್ಕರೆ ಕಾರ್ಖಾನೆಗಳು ಹಿಂದಿನ ದಿನದಲ್ಲಿಯೂ ಹೆಚ್ಚುವರಿ ಕಟಿಂಗ್ ವೆಚ್ಚಗಳನ್ನು, ಕಟ್‌ಮಾಡಿದ ಬಾಕಿ ಹಣವನ್ನು ಕಬ್ಬು ಬೆಳೆಗಾರರ ಖಾತೆಗೆ ಹಾಕಬೇಕು. ಅಲ್ಲದೆ ಜಿಲ್ಲಾಧಿಕಾರಿಗಳು, ಫುಡ್ ಡಿಡಿ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತರ ಸಮ್ಮುಖದಲ್ಲಿ ಸಭೆ ಕರೆಯಲು ಜಿಲ್ಲಾಡಳಿತ ಸಭೆ ನಡೆಸಬೇಕು” ಎಂದು KSFF ಕಲಬುರಗಿ ಜಿಲ್ಲಾ ಸಂಚಾಲಕ ಶರಣಬಸಪ್ಪಾ ಮಮಶೆಟ್ಟಿ ಒತ್ತಾಯಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...