ಉಡುಪಿ‌ | ಸೆ – 30ರ ವರಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ – ಡಿಸಿ

Date:

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಜೂನ್ 15 ರಿಂದ ಸೆಪ್ಟಂಬರ್ 30 ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...