ಅಮಿತ್ ಶಾ ರಾಜೀನಾಮೆಗೆ ಅಹಿಂದ ಸಂಘಟನೆ ಒತ್ತಾಯ

Date:

ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜನವರಿ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಬೆಂಗಳೂರಿನ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ’ ಪ್ರತಿಭಟನೆ ನಡೆಸಲಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಹಿಂದ ರೈತ ಘಟಕದ ರಾಜ್ಯಾಧ್ಯಕ್ಷ ಎ.ಎಂ. ಲಿಂಗರಾಜು, “ಕಳೆದ 2024 ಡಿಸೆಂಬರ್ 18 ರಂದು ಸಂಸತ್ತಿನಲ್ಲಿ ನಡೆದ ಅಧಿವೇಶನ ಸಂದರ್ಭದಲ್ಲಿ ಭಾರತ ಸಂವಿಧಾನದ ಜನಕ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕ‌ರ್ ಅವರ ಕುರಿತು ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನವಾಗಿ ‘ಅಂಬೇಡ್ಕರ್, ಅಂಬೇಡ್ಕರ್ ಅಂಬೇಡ್ಕರ್’ ಎಂದು ಹೇಳುವುದು ನಿಮಗೆ ವ್ಯಸನ ಆಗಿಬಿಟ್ಟಿದೆ, ಆ ಹೆಸರು ಹೇಳುವುದನ್ನ ಬಿಟ್ಟು ದೇವರ ಹೆಸರು ಹೇಳಿದ್ದರೆ, ನೇರವಾಗಿ ಸ್ವರ್ಗಕ್ಕೆ ದಾರಿ ಪ್ರಾಪ್ತಿಯಾಗುತ್ತಿತ್ತು’ ಎಂದು ಹೇಳಿಕೆ ನೀಡಿ ಡಾ. ಅಂಬೇಡ್ಕರ್ ಅವರನ್ನು ಮೊದಲ ಬಾರಿಗೆ ಸಂಸತ್ತಿನ ಅಧಿವೇಶನದಲ್ಲಿ ಅಪಮಾನಿಸುವ ಮೂಲಕ ಕೋಟ್ಯಾಂತರ ಅಂಬೇಡ್ಕರ್ ಅಭಿಮಾನಿ ಮತ್ತು ಅನುಯಾಯಿಗಳ ಮನಸ್ಸಿಗೆ ಆಘಾತವನ್ನು ಉಂಟು ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಈ ರೀತಿ ಅಂಬೇಡ್ಕ‌ರ್ ಅವರನ್ನು ಅಪಮಾನಿಸುವುದು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಒಂದು ವ್ಯವಸ್ಥಿತ ಸಂಚಿನ ರೀತಿಯಂತೆ ಕಂಡುಬಂದಿದೆ. ಬಾಬಾ ಸಾಹೇಬರು ರಚಿಸಿದ ಸಂವಿಧಾನವನ್ನ ಬದಲಾವಣೆ ಮಾಡುತ್ತೇವೆ. ಸಂವಿಧಾನವನ್ನು ತೆಗೆದುಬಿಡುತ್ತೇವೆ. ಈ ದೇಶದ ಸಂವಿಧಾನ ಸರಿಯಿಲ್ಲ ಸೇರಿದಂತೆ ಹಲವಾರು ಕುಚೋದ್ಯದ ಮಾತುಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಹೇಳಿದ್ದಾರೆ. ಇದನ್ನು ನಾವು ಸುದ್ದಿ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಕಂಡಿದ್ದೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಿಂಡೆನ್ ಬರ್ಗ್ ರಿಸರ್ಚ್ ಸಂಸ್ಥೆಯನ್ನು ಸ್ಥಗಿತಗೊಳಿಸಿದ ಸ್ಥಾಪಕ ನಾಥನ್ ಆಂಡರ್ಸನ್

“ಡಾ.ಬಿ.ಆರ್ ಅಂಬೇಡ್ಕ‌ರ್ ಮತ್ತು ಅವರು ರಚಿಸಿದ ಭಾರತ ಸಂವಿಧಾನವನ್ನ ಹೀಯಾಳಿಸಿ ಅಪಮಾನಿಸುವುದರ ಹಿಂದೆ ದಲಿತ ಸಮುದಾಯಕ್ಕೆ ನೋವು ನೀಡಿ, ಸ್ವಾಭಿಮಾನವನ್ನು ಕೆಣಕುವ ಉದ್ದೇಶ ಇಟ್ಟುಕೊಂಡಿದ್ದಾರೆ. ಭಾರತ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಸತತ 2 ವರ್ಷ 11 ತಿಂಗಳು 18 ದಿವಸಗಳ ಕಾಲ ಏಕಾಂಗಿಯಾಗಿ 9 ರಾಷ್ಟ್ರಗಳನ್ನ ಪರ್ಯಟನೆ ಮಾಡಿ, ದೇಶದ ಪ್ರಜೆಗಳಿಗೆ ಸುಭದ್ರವಾದ ಒಂದು ಸಂವಿಧಾನವನ್ನು ರಚನೆ ಮಾಡಿ ನೀಡಿದ ಮಹಾಪುರುಷ ಡಾ.ಬಿ ಆ‌ರ್ ಅಂಬೇಡ್ಕರ್ ಅವರ ಕುರಿತು ಈ ರೀತಿ ನೀಡಿರುವ ಹೇಳಿಕೆಯನ್ನ ಅಹಿಂದ ಸಂಘಟನೆ ತೀವ್ರವಾಗಿ ಖಂಡಿಸಿದೆ” ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಬೆಂಗಳೂರು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಜೆ ಆರ್, ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆರ್. ಕೇಶವಮೂರ್ತಿ, ಅಹಿಂದ ರಾಜ್ಯ ಸಮಿತಿಯ ಕಾರ್ಯಾಧ್ಯಕ್ಷ ಮಾಲೇಗೌಡ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...