ದಕ್ಷಿಣ ಕನ್ನಡ | ಜುಲೈ 9 ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

Date:

ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ ಮುಷ್ಕರ ವನ್ನು ಯಶಸ್ವಿಗೊಳಿಸಲು ಎ.ಐ.ಸಿ.ಸಿ.ಟಿ.ಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾರ್ಮಿಕರ ಸಮಾವೇಶ ಇಂದು ಬಿ.ಸಿ.ರೋಡ್ ನ ಡಾ. ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಮಾವೇಶವನ್ನು ಉದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ರಾಜ್ಯ ಅಧ್ಯಕ್ಷರಾದ ಕಾಮ್ರೇಡ್ ಪಿ.ಪಿ ಅಪ್ಪಣ್ಣ ಮಾತನಾಡಿ ಕೇಂದ್ರದ ಬಿ.ಜೆ.ಪಿ ಸರಕಾರದ 11 ವರ್ಷಗಳ ಆಡಳಿತದಲ್ಲಿ ದುಡಿಯುವ ಜನರ ಸಂಕಷ್ಟಗಳು ಮಿತಿಮೀರಿದೆ. ದುಡಿಯುವ ಜನತೆಗೆ ಕನಿಷ್ಠ ಕೂಲಿ ಕೂಡಾ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಪೋರೇಟ್ ಧಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಮೋದಿ ಸರಕಾರ ಕಾರ್ಮಿಕರ ಎಂಟು ಗಂಟೆಗಳ ಕೆಲಸದ ಹಕ್ಕನ್ನು ಕಿತ್ತುಹಾಕಿ ವಾರದಲ್ಲಿ ಎಪ್ಪತ್ತು ಗಂಟೆ ದುಡಿಯುವಂತೆ ಕಾಯ್ದೆಯ ಮೂಲಕ ತಿದ್ದುಪಡಿ ತರುವ ಮೂಲಕ ಕಾರ್ಮಿಕರ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದರು.

1005996014

ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದಿಂದ ಜಾರಿಯಾದ ಕಾರ್ಮಿಕ ಕಾನೂನುಗಳನ್ನು ತೆಗೆದು ಹಾಕಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದ್ದು ಈ ಸಂಹಿತೆಗಳು ಜಾರಿ ಆದರೆ ಕಾರ್ಮಿಕರು ಕಾರ್ಪೊರೇಟ್ ವರ್ಗದ ಗುಲಾಮರಾಗಬೇಕಾಗುತ್ತದೆ ಹಾಗೂ ಕಾರ್ಮಿಕರ ಎಲ್ಲಾ ಹಕ್ಕುಗಳು ಕಸಿಯಲ್ಪಡುತ್ತದೆ ಎಂದರು. ಈ ನಿಟ್ಟಿನಲ್ಲಿ ಜುಲೈ 9 ರಂದು ನಡೆಯುವ ಕಾರ್ಮಿಕರ ಅಖಿಲ ಭಾರತ ಮುಷ್ಕರದಲ್ಲಿ ಎಲ್ಲಾ ಕಾರ್ಮಿಕರು ಪಾಲ್ಗೊಂಡು ಮುಷ್ಕರ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಅಧ್ಯಕ್ಷರಾದ ಕಾ.ರಾಮಣ್ಣ ವಿಟ್ಲ ಮಾತನಾಡಿ ಕಾರ್ಮಿಕ ವರ್ಗ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕೆಂದು ಕರೆ ನೀಡಿದರು. ಎ.ಐ.ಸಿ.ಸಿ.ಯು‌ ಜಿಲ್ಲಾ ಕಾರ್ಯದರ್ಶಿ ಕಾ.ಮೋಹನ್ ಕೆ.ಇ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ಕಾ.ವಿನಯ ನಡುಮೊಗರು, ಅಖಿಲ ಭಾರತ ಕಿಸಾನ್ ಮಹಾಸಭಾದ ಮುಖಂಡರಾದ ಕಾ.ಮಹಮ್ಮದ್ ಇಕ್ಬಾಲ್ ಹಳೆಮನೆ, ಕಾ. ಮಹಾವೀರ್ ಜೈನ್ ಪುತ್ತೂರು, ಕಾ.ಸಂಜೀವ ಬೆಳ್ತಂಗಡಿ. ಸುಲೈಮಾನ್ ಕೆಳಿಂಜ, ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಮುಖಂಡರಾದ ಕಾ.ಭರತ್ ಕುಮಾರ್, ಕಾ .ಸತೀಶ್ ಕುಮಾರ್, ಕಟ್ಟಡ ಕಾರ್ಮಿಕರ ಸಂಘದ ಆನಂದ ಶೆಟ್ಟಿಗಾರ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ಮುಖಂಡರಾದ ಸುಧಾ ರಾವ್ ಬೆಳ್ತಂಗಡಿ ಮುಂತಾದವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...