ಜಾತಿ ವ್ಯವಸ್ಥೆ ಪ್ರತಿಪಾದಿಸುವಂತೆ ಹೇಳಿಕೆ: ಸಂಸದ ಗೋವಿಂದ ಕಾರಜೋಳ ವಿರುದ್ಧ ಕ್ರಮಕ್ಕೆ ಎಐಎಸ್‌ಎ ಆಗ್ರಹ

Date:

ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಿಜೆಪಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡುತ್ತಾ, “ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವೀಡಿಯೋಗಳನ್ನು ನಾನು ನೋಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪೊರಕೆ ನೀಡುವುದು ಅಪರಾಧ ಎಂಬಂತೆ ಕಾಣಲಾಗುತ್ತಿದೆ. ಇದರಿಂದ ಸ್ವಚ್ಛತೆಯ ಕೆಲಸ ಕೀಳು ಎಂಬ ಭಾವನೆ ಮೂಡಿದೆ. ಜಪಾನ್ ನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶೌಚಾಲಯ ‌ಸ್ವಚ್ಚಗೊಳಿಸುತ್ತಾರೆ” ಎಂಬುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಓರ್ವ ಜನಪ್ರತಿನಿಧಿಯಾಗಿರುವ ಗೋವಿಂದ ಕಾರಜೋಳರ‌ ಈ ಕೀಳುಮಟ್ಟದ ಹೇಳಿಕೆಯನ್ನು ಖಂಡಿಸುವುದಾಗಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ(AISA) ತಿಳಿಸಿದೆ.

ಗುಣಮಟ್ಟದ ಶಿಕ್ಷಣ ಪಡೆಯುವುದು ವಿದ್ಯಾರ್ಥಿಗಳ ಹಕ್ಕಾಗಿದ್ದು, ಇತ್ತೀಚಿನ ದಿನಗಳಲ್ಲಿ ಶಾಲೆಯಿಂದ ಹೊರಗುಳಿಯುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಸರಕಾರಿ ಶಾಲೆಗಳು ಮುಚ್ಚಲ್ಪಡುತ್ತಿದೆ. ಇದರಿಂದಾಗ ದಲಿತ, ಬಡ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ಜವಾಬ್ದಾರಿಯುತ ಜನಪ್ರತಿನಿಧಿಗಳು ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಬೇಕಾಗುವ ಕ್ರಮಗಳ ಬಗ್ಗೆ ಮಾತನಾಡುವ ಬದಲು ಶೌಚಾಲಯ ಸ್ವಚ್ಚಮಾಡಲು ವಿದ್ಯಾರ್ಥಿಗಳನ್ನು ತೊಡಗಿಸುವಂತೆ ಹೇಳಿಕೆ ನೀಡುವುದರಿಂದ ದಲಿತ ಬಡ ವಿದ್ಯಾರ್ಥಿಗಳೇ ಇದರಿಂದ ತೊಂದರೆಗೆ ಒಳಗಾಗಿ ಶಿಕ್ಷಣದಿಂದ ವಂಚಿತರಾಗಬೇಕಾಗುತ್ತದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವುದನ್ನು ಈಗಾಗಲೇ ನಿಷೇಧಿಸಿ ಆದೇಶ ಮಾಡಲಾಗಿದೆ ಹಾಗೂ ಮಕ್ಕಳನ್ನು ಇಂತಹ ಕೆಲಸಗಳಲ್ಲಿ ತೊಡಗಿಸುವುದು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009ರ ಸೆಕ್ಷನ್ 17ರ ಉಲ್ಲಂಘನೆಯಾಗುತ್ತದೆ. ಗೋವಿಂದ ಕಾರಜೋಳರ ಈ ಹೇಳಿಕೆ ಅವರು ‌ಮತ್ತು ಅವರ ಪಕ್ಷ ಯಾವ ಸಿದ್ದಾಂತವನ್ನು ಪ್ರತಿಪಾದಿಸುತ್ತದೆ‌ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಐಸಾ ತಿಳಿಸಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಹನಿಟ್ರ್ಯಾಪ್ ಪ್ರಕರಣ: ದಲಿತ ಸೇನೆಯ ರಾಜ್ಯಾಧ್ಯಕ್ಷ ಯಳಸಂಗಿ ಸೇರಿ 6 ಮಂದಿ ಪೊಲೀಸರಿಗೆ ಶರಣು

ಕಳೆದ ಬಿ.ಜೆ.ಪಿ‌ ಸರಕಾರದ ಅವಧಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(NEP) ಜಾರಿಗೆ ತಂದಿದ್ದು, ಇದರಲ್ಲಿ ಜಾತಿ ಮತ್ತು ವೃತ್ತಿ ಆಧಾರಿತ ಕುಲ ಕಸುಬನ್ನು ಸಮರ್ಥಿಸಲಾಗಿದೆ. ಪೋಷಕರು ಒಂದು ವೃತ್ತಿಯನ್ನು‌ ಮಾಡುತ್ತಿದ್ದರೆ ಅವರ‌ ಮಕ್ಕಳು ಕೂಡಾ ಅದೇ ವೃತ್ತಿಯನ್ನು ಮಾಡಬೇಕು ಎನ್ನುವ ನೀತಿ ಇದಾಗಿದೆ. ಈ ರೀತಿಯಲ್ಲಿ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಮೂಲಕ ಮನುವಾದಿ ಆಳ್ವಿಕೆಗೆ ಪೂರಕವಾಗುವ ಹೇಳಿಕೆ ಇದಾಗಿದ್ದು, ಸಾಂವಿಧಾನಿಕ ವ್ಯವಸ್ಥೆಯ ಅಡಿಯಲ್ಲಿ ಜನಪ್ರತಿನಿಧಿಯಾಗಿ ಆಯ್ಕೆಯಾಗಿರುವ ವ್ಯಕ್ತಿಯು ಇಂತಹ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಸಂಸದ ಗೋವಿಂದ ಕಾರಜೋಳ ರವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (AISA) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...