ಉಡುಪಿ | ಪಳ್ಳಿ–ಕಣಜಾರು ಬಸ್‌ ಸಂಚಾರ ಪುನರಾರಂಭಕ್ಕೆ ಅಜಿತ್ ಹೆಗ್ಡೆ ಮಾಳ ಆಗ್ರಹ

Date:

ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಕಾರ್ಕಳ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಅವರು ಸರಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಜನರ ಪರವಾಗಿ ಪ್ರಬಲವಾಗಿ ಮಾತನಾಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರೆದರೆ ಧರಣಿ ಕುಳಿತು ಕೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಪಳ್ಳಿ–ಕಣಜಾರು ಮಾರ್ಗದಲ್ಲಿ ಕೆಲವು ತಿಂಗಳ ಹಿಂದೆ ಆರಂಭಗೊಂಡಿದ್ದ ಬಸ್‌ ಸಂಚಾರ ಕೆಲವೇ ದಿನಗಳಲ್ಲಿ ನಿಂತಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ತಕ್ಷಣವೇ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಪುನರಾರಂಭಿಸುವಂತೆ ಆಗ್ರಹಿಸಿದರು. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಅವರ ವೀಡಿಯೋ ವೈರಲ್‌ ಆಗುತ್ತಿದೆ.

ಗ್ರಾಮ ಮಟ್ಟದಲ್ಲಿ ಗ್ಯಾರಂಟಿ ಅದಾಲತ್‌ಗಳನ್ನು ನಡೆಸಿ, ಸರಕಾರದ ಯೋಜನೆಗಳಿಂದ ವಂಚಿತರಾಗಿರುವವರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಕೈಗೊಂಡಿರುವ ಅಜಿತ್ ಹೆಗ್ಡೆ ಮಾಳ ಅವರ ಕಾರ್ಯವೈಖರಿ ಕಾರ್ಕಳ ತಾಲೂಕಿನಲ್ಲಿ ಜನಮನ್ನಣೆ ಪಡೆಯುತ್ತಿದೆ. ಜನರ ಪರವಾಗಿ ನಿಲುಹಿಡಿದು, ಸಮಸ್ಯೆಗಳಿಗೆ ಸ್ಪಂದಿಸುವ ಅವರ ಶೈಲಿ ತಾಲೂಕು ಮಟ್ಟದಲ್ಲಿ ಶ್ಲಾಘನೀಯವೆಂದು ಭಾಗವಹಿಸಿದವರು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...