ಅಕ್ಕಿ ಬಿಜೆಪಿ ನಾಯಕರ ಅಪ್ಪನ ಮನೆಯದಲ್ಲ: ಸಚಿವ ಆರ್‌ ಬಿ ತಿಮ್ಮಾಪುರ ಕಿಡಿ

Date:

ಡಿ ಕೆ ಶಿವಕುಮಾರ್ – ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ಪತನವಾಗುತ್ತೆ ಎಂದು ಹೇಳಿಕೆ ನೀಡಿರುವ ಆರ್ ಅಶೋಕ ವಿರುದ್ಧ ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪುರ ಲೇವಡಿ ಮಾಡಿದ್ದಾರೆ.

“ಆರ್‌ ಅಶೋಕ ಅವರು ಯಾವಾಗ ಭವಿಷ್ಯ ಹೇಳೋಕೆ ಶುರು ಮಾಡಿದರು? ಎಲ್ಲಿ ತರಬೇತಿ ತಗೊಂಡಿದ್ದಾರೆ? ಯಾರ ಕಡೆ ಭವಿಷ್ಯ ಕಲಿತಿದ್ದಾರೆ ಗೊತ್ತಿಲ್ಲ. ಪಾಪ ಸಿಎಂ ಆಗಲು ಕನಸು ಕಾಣುತ್ತಿದ್ದಾರೆ. ಹತಾಶೆಯ ಪ್ರತೀಕವಾಗಿ ಹೀಗೆಲ್ಲ ಮಾತನಾಡುತ್ತಿದ್ದಾರೆ” ಎಂದು ಬಾಗಲಕೋಟೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

“ಪಕ್ಷದಲ್ಲಿ ಇದ್ದಾಗ ಪೇ ಸಿಎಂ ಅಂತೆಲ್ಲ ಆರೋಪ ಮಾಡಿರುವ ಬಗ್ಗೆ ಗೌಪ್ಯವಾಗಿ ತನಿಖೆ ನಡೆದಿದೆ. ಬಿಜೆಪಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಒಂದೊಂದಾಗಿ ಬಯಲಿಗೆಳೆಯುತ್ತೇವೆ. ಅದರಲ್ಲೇನು ಅನುಮಾನ ಇಟ್ಕೊಬೇಡಿ. ನಾವು ಹೇಳಿದ್ದನ್ನೇ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಕಿ ಅವರ ಅಪ್ಪನ ಮನೆಯದಲ್ಲ

ಕೇಂದ್ರ‌ ಸರ್ಕಾರ ನೀಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ನೀಡಬೇಕು ಎಂಬ ಬಿಜೆಪಿ ನಾಯಕರ ಒತ್ತಾಯದ ವಿಚಾರವಾಗಿ ಪ್ರತಿಕ್ರಿಯಿಸಿ, “ಅಕ್ಕಿ ಬಿಜೆಪಿ ನಾಯಕರ ಅಪ್ಪನ ಮನೆಯದಲ್ಲ. ಅದು ನಮ್ಮ ಆಸ್ತಿ. ನಮಗೂ ಕೊಡಬೇಕು, ಆಹಾರ ಭದ್ರತಾ ಕಾಯಿದೆಯಡಿ ನಾವು ಕೊಟ್ಟೀವಿ, ನೀವು ಕೊಡಬೇಕು” ಎಂದರು.

ಧಮ್ಮು, ತಾಕತ್ತು ತಿಳಿದೇ ಜನ ತಿರಸ್ಕರಿಸಿದ್ದು

ಬೊಮ್ಮಾಯಿ ಅವರ ದಮ್ಮು ತಾಕತ್ತು ತಿಳಿದೇ ಜನರು ಅವರನ್ನು ತಿರಸ್ಕರಿಸಿದ್ದು. ಆ ದಮ್ಮು ತಾಕತ್ತು ಗೊತ್ತಾಗಿಯೇ ಜನತೆ ನಮ್ಮನ್ನ ಅಧಿಕಾರಕ್ಕೆ ತಂದಿರುವುದು ಎಂದು ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...