ಕಲಬುರಗಿ | ಅಕ್ಷರ ದಾಸೋಹ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Date:

ಬಿಸಿಯೂಟ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಅಕ್ಷರ ದಾಸೋಹ (ಬಿಸಿಯೂಟ) ನೌಕರರ ಸಂಘ ಹಾಗೂ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಗತ್ ವೃತ್ತದಿಂದ ವಿಧಾನಸೌಧ ಮಾರ್ಗವಾಗಿ ಡಿಡಿಪಿಐ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.

ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಮಾತನಾಡಿ, ʼಹಲವಾರು ವರ್ಷಗಳಿಂದ ಅಕ್ಷರ ದಾಸೋಹ ನೌಕರರು ಕನಿಷ್ಠ ಸಂಬಳದಲ್ಲಿ ದುಡಿಯುತ್ತಿದ್ದಾರೆ. ಸಂಬಳ ಹೆಚ್ಚಳಕ್ಕಾಗಿ ಕಳೆದ 22 ವರ್ಷಗಳಿಂದ ಹೋರಾಟ ನಡೆಸಿದರೂ ಯಾವುದೇ ಸರ್ಕಾರಗಳು ಸ್ಪಂದಿಸುತ್ತಿಲ್ಲ. ಇದರಿಂದ ನೌಕರರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತ್ರತ್ವದ ಸರಕಾರ ಬಿಸಿಯೂಟ ನೌಕರರಿಗೆ 1 ಸಾವಿರ ರೂ. ಸಂಬಳ ಹೆಚ್ಚಿಸಲು ಒಪ್ಪಿಕೊಂಡಿತ್ತು. ಆದರೆ, ಇಲ್ಲಿಯವರೆಗೆ ಅದೂ ಜಾರಿಗೆ ಬಂದಿಲ್ಲ. ಬೇರೆ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಕನಿಷ್ಠ ವೇತನ ನಿಗದಿಪಡಿಸಲಾಗಿದೆ. ಬಿಸಿಯೂಟ ನೌಕರರು 6 ರಿಂದ 7 ಗಂಟೆ ದುಡಿಯುತ್ತಿದ್ದರೂ ಕನಿಷ್ಠ ವೇತನ ನೀಡದೇ ಅನ್ಯಾಯ ಎಸಗಲಾಗುತ್ತಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಾನ ಕೆಲಸಕ್ಕೆ ಸಮಾನ ವೇತನ ಸಿಗಬೇಕು. ಬಿಸಿಯೂಟ ನೌಕರರಿಗೆ ಕಾಯಂಮಾತಿ ನೀಡಬೇಕು. ನಿವೃತ್ತಿ ಹೊಂದಿದ ನೌಕರರಿಗೆ 2 ಲಕ್ಷದವರೆಗೆ ಪಿಂಚಣಿ ಕೊಡಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿ ನೌಕರರಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು. ಮಾಜಿ ಸಿಎಂ ಬಸವರಾಜ ಬೊಮ್ಮಯಿ ಅವರು ಭರವಸೆ ನೀಡಿದಂತೆ ಒಂದು ಸಾವಿರ ಸಂಬಳ ಹೆಚ್ಚಿಸಬೇಕು. ಬೇಸಿಗೆ, ದಸರಾ ರಜೆಗಳಲ್ಲಿ ವೇತನ ಕಡ್ಡಾಯವಾಗಿ ನೀಡಬೇಕು. ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಬಿಸಿಯೂಟ ನೌಕರರಿಗೆ ದಿನಭತ್ಯೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಸಾಲದ ಕೊರತೆ, ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

ಪ್ರತಿಭಟನೆಯಲ್ಲಿ ದಸಂಸ ಮುಖಂಡರಾದ ಮರೆಪ್ಪ ಮೇತ್ರೆ, ಉದಯಕುಮಾರ ಸಾಗರ, ಮುಕ್ತಾಸಿ ಚಂದಾ,
ಮಹಾದೇವಿ ನಿಂಬಾಳ, ರಮೇಶ ಕವಡೆ, ಸಂತೋಷ ತೆಗನೂರ, ಸುನೀತಾ ಎಂ. ಕುಂಬಾರ, ಜಯಕುಮಾರ ನೂಲಕರ್, ಸುವರ್ಣಾ ಕಾಂಪೂರಹಳ್ಳಿ, ಸಂಪತಕುಮಾರಿ ಆರ್, ಶಿವಶರಣಪ್ಪ ಕುರನಳ್ಳಿ, ಸಿದ್ದಮ್ಮ ಎಡಗಿ ಸೇರಿದಂತೆ ಬಿಸಿಯೂಟ ನೌಕರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...