ವಿಜಯಪುರ | ಆಲಮಟ್ಟಿ ಜಲಾಶಯ; ಅಣೆಕಟ್ಟೆ ಎತ್ತರ ಆಗಲೇಬೇಕು: ಶಾಸಕ ಯಶವಂತರಾಯ ಗೌಡ

Date:

ಆಲಮಟ್ಟಿ ಜಲಾಶಯದ ಅಣೆಕಟ್ಟು ಎತ್ತರವನ್ನು ಹೆಚ್ಚಿಸುವ ನಿರ್ಧಾರದಿಂದ ಸರಕಾರ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು. ಆಲಮಟ್ಟಿ ಅಣೆಕಟ್ಟು ಎತ್ತರ ಆಗಲೇಬೇಕು ಎಂದು ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಸರಕಾರವನ್ನು ಒತ್ತಾಯಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಅಣೆಕಟ್ಟು ಎತ್ತರವನ್ನು ಹೆಚ್ಚಳ ಮಾಡುವಂತೆ ರೈತರು ನಡೆಯುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಒಂದು ವರ್ಷದವರೆಗೆ ಜನಪ್ರಿಯ ಯೋಜನೆಗಳು ನಿಂತರೂ ಚಿಂತೆಯಿಲ್ಲ. ಆದರೆ ಅಣೆಕಟ್ಟು ಎತ್ತರ ಹೆಚ್ಚಳ ನಿಲ್ಲಬಾರದು. ಈ ಭಾಗದ ರೈತರ ತ್ಯಾಗಕ್ಕೆ ಬೆಲೆ ಬರಬೇಕಾದರೆ, ಅಣೆಕಟ್ಟು ಎತ್ತರವಾಗಲೇಬೇಕಿದೆ ಎಂದರು.

ಅಣೆಕಟ್ಟು ಎತ್ತರ ಹೆಚ್ಚಳ ನಮ್ಮ ಪಕ್ಷದ ಹಾಗೂ ಸರ್ಕಾರದ ಬದ್ಧತೆ ಸಹ ಹೌದು. ಸರ್ಕಾರ ಈ ಕಾರ್ಯಸಾಧನೆ ಮಾಡಲಿದೆ ಎಂಬ ವಿಶ್ವಾಸವಿದೆ. ರೈತರ ವಿಷಯ ಬಂದಾಗ ಪಕ್ಷಭೇದ ಮರೆತು ಒಂದಾಗುತ್ತೇವೆ. ಸರ್ಕಾರಗಳು ಕೃಷ್ಣ, ಕಾವೇರಿಗೆ ನೀಡಿದ ಆದ್ಯತೆಯನ್ನು ಉಳಿದ ನದಿಗಳಿಗೂ ನೀಡಬೇಕು. ಭೀಮೆಯ ಬಗ್ಗೆ ಗಮನಹರಿಸಲಿ. ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಘೋಷಣೆಯಾಗಬೇಕಿದೆ. ಸರ್ಕಾರ ನಿರೀಕ್ಷಿತ ಪ್ರಮಾಣದಲ್ಲಿ ಕೃಷ್ಣೆಗೆ ಅನುದಾನ ನೀಡಿಲ್ಲ. ಆದರೆ ಇನ್ನೂ ಮೂರು ವರ್ಷಗಳಿವೆ. ಖಂಡಿತವಾಗಿಯೂ ಆದ್ಯತೆಯ ದೊಡ್ಡ ಅನುದಾನ ದೊರಕುವ ನಿರೀಕ್ಷೆ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಈ ವಿಷಯದಲ್ಲಿ ರೈತರಿಗೆ ಅನ್ಯಾಯ ಮಾಡಬಾರದು. ಈ ವಿಷಯದಲ್ಲಿ ಆತಂಕ್ಕೊಳಗಾಗಿರುವ ರೈತರು ಪ್ರತ್ಯೇಕತೆ ಬೇಡಿಕೆ ಇರಿಸಿದ್ದಾರೆ. ನಮ್ಮ ನಾಡು ಕಟ್ಟಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಹೀಗಾಗಿ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಂಡು ಪ್ರತ್ಯೇಕತೆ ಭಾವನೆ ಬೆಳೆಯದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಜವಾಬ್ದಾರಿ ಎಂದರು.

ಇದನ್ನೂ ಓದಿ : ವಿಜಯಪುರ | ಶಾಲೆಗೆ ಹೋಗುವಾಗ ಪುಢಾರಿಗಳ ಕಿರುಕುಳ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ರೈತರ ವಿಷಯದಲ್ಲಿ ರಾಜಕಾರಣ ಮಾಡಿದರೆ ಅದು ಅನ್ನದಾತನಿಗೆ ಮಾಡುವ ಮೋಸ. ಹೀಗಾಗಿ ರೈತರಿಗೆ ಅನ್ಯಾಯವಾದಾಗ ನಮ್ಮದೇ ಸರ್ಕಾರ ಇದ್ದಾಗಲೇ ಟೀಕಿಸಿದ್ದೆ ಎಂದರು.

ಹೊಸ ಜಿಲ್ಲೆಗಳ ರಚನೆ ಸಂದರ್ಭದಲ್ಲಿ ಇಂಡಿಯನ್ನು ಜಿಲ್ಲಾಯನ್ನಾಗಿ ಮಾಡಬೇಕು. ಒಂದು ವೇಳೆ ಕಡೆಗಣಿಸಿದರೆ ಕ್ಷೇತ್ರದ ಜನರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಗ್ಯಾರಂಟಿ ಯೋಜನೆ ಕಡುಬಡವರಿಗೆ ದೊಡ್ಡ ಪ್ರಯೋಜನವಾಗಿದೆ. ಇದು ನಮ್ಮ ಬದ್ದತೆ. ಗ್ಯಾರಂಟಿಗಳು ಅತ್ಯಗತ್ಯ. ಅದರ ಜೊತೆಗೆ ಉಳಿದ ಅಭಿವೃದ್ಧಿ ಯೋಜನೆಗಳಿಗೂ ಆದ್ಯತೆ ನೀಡಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...