ಬಾಗಲಕೋಟೆ | ಹಿಂಗಾರು ಹಂಗಾಮಿನ ನೀರು ಸ್ಥಗಿತ

Date:

ಕೃಷ್ಣಾ ಅಣೆಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲ ಕಾಲುವೆಗಳಿಗೆ ಹಿಂಗಾರು ಹಂಗಾಮಿಗೆ ಏಪ್ರಿಲ್ 10  ಮಧ್ಯರಾತ್ರಿಯಿಂದ ನೀರು ಹರಿಸುವುದು ಸ್ಥಗಿತಗೊಳ್ಳಲಿದೆ.

ನವೆಂಬರ್ 23ರಂದು ಬೆಂಗಳೂರಿನಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ನದಿ ನೀರು ಬಳಕೆಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ(ಐಸಿಸಿ) ಡಿ.12ರಿಂದ ಮಾ.30 ರವರೆಗೆ ವಾರಾಬಂಧಿ ಪದ್ಧತಿಯಲ್ಲಿ ಹಿಂಗಾರು ಹಂಗಾಮಿಗೆ ನೀರು ಹರಿಸಲು ನಿರ್ಧರಿಸಲಾಗಿತ್ತು. ರೈತರ ಬೇಡಿಕೆಯ ಹಿನ್ನಲೆಯಲ್ಲಿ ಅದನ್ನು ಏ.10 ರವರೆಗೆ ವಿಸ್ತರಿಸಲಾಗಿತ್ತು. ಇದೀಗ, ನೀರಿನ ಹರಿವನ್ನು ನಿಲ್ಲಿಸಲಾಗುತ್ತಿದೆ.

“ಆಲಮಟ್ಟಿ ಜಲಾಶಯ ವ್ಯಾಪ್ತಿಯ 169 ಕೆರೆಗಳಿಗೆ ವರ್ಷದಲ್ಲಿ ಎರಡು ಬಾರಿ ನೀರು ಹರಿಸಲಾಗುತ್ತದೆ. ಈಗಾಗಲೇ ಬಹುತೇಕ ಕೆರೆಗಳ ಸಾಮರ್ಥ್ಯದ ಶೇ.50 ರಷ್ಟು ಭರ್ತಿಯಾಗಿವೆ” ಎಂದು ಆಲಮಟ್ಟಿ ನೀರಾವರಿ ವಲಯದ ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆರೆಗಳ ಭರ್ತಿಗೆ ಬೇಡಿಕೆ ಬಂದರೆ ಜಿಲ್ಲಾಧಿಕಾರಿಗಳ ಮೂಲಕ ಪ್ರಾದೇಶಿಕ ಆಯುಕ್ತರಿಗೆ ಅನುಮತಿಗಾಗಿ ಪತ್ರ ಬರೆಯಲಾಗುವುದು. ಕೆರೆಗಳ ಭರ್ತಿಗಾಗಿ 2 ಟಿಎಂಸಿ ಅಡಿಯಷ್ಟು ನೀರು ಕಾಯ್ದಿರಿಸಲಾಗಿದೆ. ಅಗತ್ಯ ಎನಿಸಿದರೆ ಹಾಗೂ ಅನುಮತಿ ದೊರೆತರೆ ಕೆರೆಗಳ ಭರ್ತಿಗಾಗಿ ನೀರು ಹರಿಸುತ್ತೇವೆ” ಎಂದು ಅವರು ತಿಳಿಸಿದರು.

“ಕಲಬುರ್ಗಿ, ಜೇವರ್ಗಿ, ಸಿಂದಗಿ, ಇಂಡಿ, ಲಿಂಗಸೂರು ಸೇರಿದಂತೆ ಸುತ್ತಮುತ್ತ ಪ್ರದೇಶಗಳಿಗೆ ಆಲಮಟ್ಟಿಯಿಂದ ನೀರು ಒದಗಿಸಲಾಗುತ್ತದೆ. ರಾಯಚೂರಿನ ಉಷ್ಣ ವಿದ್ಯುತ್ ಸ್ಥಾವರ, ಗೂಗಲ್ ಬ್ಯಾರೇಜ್‌ಗೂ ಬೇಸಿಗೆಯ ಬಳಕೆಗೆ ನೀರು ಮೀಸಲಿಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಭೂಗಳ್ಳರ ವಿರುದ್ಧ ಆಮ್ ಆದ್ಮಿ ಅಭ್ಯರ್ಥಿ ಶರಣಪ್ಪ ಸಜ್ಜಿಹೊಲ ಆಕ್ರೋಶ

519.60 ಮೀ ಗರಿಷ್ಠ ಎತ್ತರದ ಜಲಾಶಯದಲ್ಲಿ ಸದ್ಯ 509.75 ಮೀ.ವರೆಗೆ ನೀರು ಸಂಗ್ರಹವಿದೆ. ಜಲಾಶಯದಲ್ಲಿ 28.708 ಟಿಎಂಸಿ ಅಡಿ ನೀರು ಸಂಗ್ರಹವಿದ್ದರೂ, 11.088 ಟಿಎಂಸಿ ಅಡಿ ನೀರು ಮಾತ್ರ ಬಳಕೆಗೆ (ಲೈವ್ ಸ್ಟೋರೇಜ್) ಲಭ್ಯವಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 17 ಟಿಎಂಸಿ ಅಡಿಯಷ್ಟು ಕಡಿಮೆ ನೀರು ಸಂಗ್ರಹವಿದೆ.

ಕಾಲುವೆಗಳ ಜಾಲದ ದುರಸ್ತಿ ಹಾಗೂ ನಿರ್ವಹಣೆಯ ಕ್ಲೋಸರ್ ಕಾಮಗಾರಿ ಈ ವರ್ಷ ನಡೆಯುವುದು ಅನುಮಾನ ಎನ್ನಲಾಗಿದೆ. ಸದ್ಯ ಚುನಾವಣೆ ನೀತಿ ಸಂಹಿತೆಯಿದೆ. ಯಾವುದೇ ಟೆಂಡರ್ ಕರೆಯಲು ಆಯೋಗದ ಅನುಮತಿ ಅಗತ್ಯ ಹಾಗೂ ಕ್ಲೋಸರ್ ಕಾಮಗಾರಿಗಾಗಿ ಅನುದಾನವೂ ಸದ್ಯ ಲಭ್ಯವಾಗಿಲ್ಲ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...