ಆಲಮೇಲ | ಸರ್ಕಾರಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜಿಗೆ ದಸಂಸ ಆಗ್ರಹ

Date:

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಿರ್ಮಾಣವಾಗಿರುವ ಪಟ್ಟಣ ಪಂಚಾಯತ್ ಸರ್ಕಾರಿ ವಾಣಿಜ್ಯ ಮಳಿಗೆಗಳನ್ನು ಬಹಿರಂಗವಾಗಿ ಹರಾಜು ಮಾಡುವಂತೆ ಆಗ್ರಹಿಸಿ‌ ದಲಿತ ಸಂಘರ್ಷ ಸಮಿತಿ ಸಿಂದಗಿ ತಾಲೂಕು ಘಟಕದಿಂದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಮನವಿ ಸಲ್ಲಿಸಿದರು.

ಶಿವಕುಮಾರ ಮೇಲಿನಮನಿ ಮನವಿ ಸಲ್ಲಿಸಿ ಮಾತನಾಡಿ, “ವಾಣಿಜ್ಯ ಮಳಿಗೆಗಳನ್ನು ಹರಾಜು ಮಾಡುವ ಬಗ್ಗೆ ಪಟ್ಟಣ ಪಂಚಾಯಿತಿ ಸದಸ್ಯರ ಸಭೆ ಕರೆದು ಎಲ್ಲರ ಒಪ್ಪಿಗೆ ಪಡೆದುಕೊಳ್ಳಬೇಕು. ಕಾನೂನಿನ ರೀತಿ ಸಾರ್ವಜನಿಕ ಮಾಹಿತಿಗಾಗಿ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸುವುದು ಮತ್ತು ಕರಪತ್ರಗಳನ್ನು ಹಂಚುವುದು, ಡಂಗೂರ ಸಾರುವ ಮೂಲಕ ಪ್ರಚಾರ ಮಾಡಿ ಹರಾಜು ಮಾಡಬೇಕು” ಎಂದು ಆಗ್ರಹಿಸಿದರು.

“ಒಟ್ಟು 21 ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಬೇಕಿದ್ದು, ಅವುಗಳಲ್ಲಿ 17 ಕಟ್ಟಡಗಳು ಮಾತ್ರ ನಿರ್ಮಾಣವಾಗಿವೆ. ಕಾಮಗಾರಿ ಪೂರ್ಣಗೊಳಿಸದೆ ಆತುರದಲ್ಲಿ ಹರಾಜು ಮಾಡಲು ಮುಂದಾಗಿದ್ದಾರೆ. ಆಲಮೇಲ ಪಟ್ಟಣ ಪಂಚಾಯಿತಿಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇತಿಹಾಸದ ಪುಟ ಸೇರಿದ ʼಅಂಬೇಡ್ಕರ್ ಗೀತೆʼಗಳು: ಪ್ರಶಂಸೆ ಗಳಿಸಿದ ಟೈಗರ್ ನಾಗ್

“ಕೆಪಿಆರ್ ಸಕ್ಕರೆ ಕಾರ್ಖಾನೆಯಿಂದ ಪ್ರತಿವರ್ಷ 7.45 ಲಕ್ಷ ತೆರಿಗೆ ಹಣ, ಪಟ್ಟಣದ ತರಕಾರಿ ಮಾರುಕಟ್ಟೆಯಿಂದ 5.40 ಲಕ್ಷ ರೂ. ಸೇರಿದಂತೆ ಪಂಚಾಯತಿಗೆ ಬರುವ ಆದಾಯದಲ್ಲಿ ಅವ್ಯವಹಾರ ಮಾಡಲಾಗಿದೆ. ಲೋಕಾಯುಕ್ತರು ಸ್ವಯಂ ಪ್ರೇರಣೆಯಿಂದ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಶಶಿಧರ ನಾಯ್ಕೋಡಿ, ರಾಜು ಮೇತ್ರಿ, ಅನಿಲ ನಾಯ್ಕೋಡಿ, ಶರಣು ಬೇವಿನಗಿಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...