ಆಲಮೇಲ | ಭೀಮಾನದಿ ತೀರದಲ್ಲಿ ಪ್ರವಾಹ ಹೆಚ್ಚಳ; ಮೂರು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭ

Date:

ಭೀಮಾನದಿ ತೀರದಲ್ಲಿ ಪ್ರವಾಹ ಹೆಚ್ಚುತ್ತಿದ್ದು, ಎರಡು ದಿನಗಳಿಂದ ತಾರಾಪುರ ಗ್ರಾಮ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಮೂರು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭಿಸಿ ಸಂತ್ರಸ್ತರನ್ನು ಸ್ಥಳಾಂತರ ಮಾಡಲಾಗುತ್ತಿದೆ.

ಹಲವು ದಿನಗಳಿಂದ ನಿರಂತರವಾಗಿ ಭೀಮಾನದಿಯಲ್ಲಿ ಪ್ರವಾಹ ಹೆಚ್ಚುತ್ತಲೇ ಇದ್ದು, ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ನದಿ ತೀರದ ಗ್ರಾಮಗಳಾದ ದೇವಣಗಂವಾ, ತವರಾಖೆಡ, ಬ್ಯಾಡಗಿಹಾಳ, ಕುಮಸಗಿ, ಶೇಂಬವಾಡ, ಕಡ್ಲೆವಾಡ, ಶಿರಸಗಿ ಗ್ರಾಮಕ್ಕೆ ನೀರು ಆವರಸಿದ್ದು, ಕೆಲ ಮನೆಗಳು ಜಲಾವೃತವಾಗಿವೆ.

ಸಂತ್ರಸ್ತ ಕುಟುಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ. ತಾರಾಪುರ, ತಾವರಖೇಡ, ಕುಮಸಗಿ ಮೂರು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ನದಿ ತೀರದ ಜನರು, ಜಮೀನುಗಳಲ್ಲಿ ವಾಸವಾಗಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಅಲಮೆಲ ತಹಶೀಲ್ದಾರ್ ಧನಪಾಲಶೆಟ್ಟಿ ದೇವುರಾ ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕುಮಸಗಿ ಗ್ರಾಮದಲ್ಲಿ ಸಂಚರಿಸಿ, ನದಿ ಪ್ರವಾಹದಿಂದ ಉಂಟಾದ ಸಮಸ್ಯೆಗಳು ಆಲಸಿ, ಸ್ಥಳೀಯ ಗ್ರಾಮ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಲೆಕ್ಕಾಧಿಕಾರಗಳು ಸ್ಥಳದಲ್ಲೇ ಬಿದ್ದುಬಿಟ್ಟು ಯಾವುದೇ ಸಮಸ್ಯೆಯಾಗದಂತೆ ನಿಗಾವಹಿಸಿದ್ದಾರೆ. ಹಾನಿಗೊಳಗಾದ ಮನೆ ಮತ್ತು ಬೆಳೆಗಳು ಸಮೀಕ್ಷೆ ಮಾಡಿ ವರದಿ ನೀಡುವಂತೆ ತಿಳಿಸಿದರು.

ನಡುಗಡ್ಡೆಯಾದ ತಾರಾಪುರ ಆಲಮೇಲ ತಾಲೂಕಿನ ಹಳೆ ತಾರಾಪುರ ಗ್ರಾಮವನ್ನು ಸುತ್ತುವರೆದಿರುವ ಭೀಮನದಿಯ ನೀರು ಗ್ರಾಮವನ್ನು ಸಂಪೂರ್ಣ ನಡುಗಡ್ಡೆಯನ್ನಾಗಿಸಿದೆ. ಹೊಸ ತಾರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ತಾರಾಪುರ ಗ್ರಾಮಕ್ಕೆ ಆಲಮೇಲ ತಹಶೀಲ್ದಾರ್ ಧನಪಾಲ ಶೆಟ್ಟಿ, ಎ ಎಂ ಅತ್ತರ ಕಡಣೀ ಗ್ರಾಮ ಪಂಚಾಯಿತಿ ಪಿಡಿಒ ಶರಣಗೌಡ ಕಡ್ಲೆವಾಡ, ತಾರಾಪುರ ಗ್ರಾಮಸಹಾಯಕ ಮಡಿವಾಳಪ್ಪ ಬಿರಾದಾರ ಭೇಟಿ ನೀಡಿದರು.

ಕಾಳಜಿ ಕೇಂದ್ರಗಳನ್ನು ದೇವಣಗಾಂವ ಮತ್ತು ಕುಮಸಗಿ ಗ್ರಾಮಗಲ್ಲು ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕಂದಾಯ ಅಧಿಕಾರಿಗಳು ತಿಳಿಸಿದರು.

ತಾವರಖೇಡ ಗ್ರಾಮದಲ್ಲಿ ಸುಮಾರ 5 ರಿಂದ 6 ಮನೆಗಳಿಗೆ ನೀರು ನುಗ್ಗಿರುವುದರಿಂದ ಕೆಲವು ಜನರು ಅಲ್ಲಿಂದ ಬೇರೆ ಕಡೆ ಸ್ಥಳಾಂತರಗೊಂಡಿದ್ದಾರೆ. ಹಳೆಬ್ಯಾಡಗಿಹಾಳ ಗ್ರಾಮದಲ್ಲಿ ನೀರು ನುಗ್ಗಿದೆ. ದೇವಣಗಾಂವ ಗ್ರಾಮದ ಹನುಮಾನ ದೇವಸ್ಥಾನ ಆವರಣವನ್ನು ನೀರು ಸುತ್ತುವರೆದಿದ್ದು ಜನವಸತಿ ಸಮೀಪ ನೀರು ಆವರಿಸುತ್ತದೆ. ಕುಮಸಗಿ ಗ್ರಾಮದಲ್ಲಿ ಸುಮಾರು ನೀರು ನುಗ್ಗಿದೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಜನರು ಅನಕ್ಷರತೆಯಿಂದ ಹೊರಬಂದು ಶಿಕ್ಷಣ ಕಲಿಯಬೇಕಿದೆ: ಗಿರೀಶಗೌಡ ಪಾಟೀಲ್

“ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್‌ನಿಂದ ಗುರುವಾರ 28 ಗೇಟ್‌ಗಳನ್ನು ತೆರೆದು, 3.55 ಲಕ್ಷ ಕ್ಯೂಸೆಕ್ ಹೊರ ಬಿಡಲಾಗಿದೆ. ಸೀನಾ ನದಿಯಿಂದ 2.15ಲಕ್ಷ ಕ್ಯೂಸೆಕ್, ಉಜನಿ ಮತ್ತು ವೀರ ಜಲಾಶಯಗಳಿಂದ 80 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಅಲ್ಲದೆ, ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾನದಿ ಪಾತ್ರದಲ್ಲಿ ಬೀಳುತ್ತಿರುವ ಮಳೆಯಿಂದ ಸುಮಾರು 60 ಸಾವಿರ ಕ್ಯೂಸೆಕ್ ಒಟ್ಟು 3.55 ಲಕ್ಷ ಕ್ಯೂಸೆಕ್‌ ನೀರು ಸೊನ್ನ ಬ್ಯಾರೇಜ್‌ನಲ್ಲಿ ಹರಿಯುತ್ತಿದೆ. ಪ್ರವಾಹ ಸೃಷ್ಟಿಮಾಡಿರುವ ಸೀನಾ ನದಿ ಪಾತ್ರದಲ್ಲಿ ಸ್ವಲ್ಪಮಟ್ಟಿಗೆ ಮಳೆ ಕಡಿಮೆಯಾಗಿರುವುದರಿಂದ ನಾಳೆ ಮತ್ತು ನಾಡಿದ್ದು ಪ್ರವಾಹದಲ್ಲಿ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ” ಎಂದು ಅಜ್ಜಲಪುರ ಕೆಎನ್‌ಎನ್‌ಎಲ್‌ಎ ಕಾರ್ಯನಿರ್ವಾಹಕ ಎಂಜಿನಿಯರ್ ಸಂತೋಷ್ ಕುಮಾ‌ರ್ ಸಜ್ಜನ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...