ಚಿಕ್ಕನಾಯಕನಹಳ್ಳಿ | ಮೂಲಭೂತ ಸೌಕರ್ಯ ನೀಡಿ; ತಾಲೂಕು ಕಚೇರಿ ಮೆಟ್ಟಿಲೇರಿದ ಬಿಡಾರದ ಅಲೆಮಾರಿಗಳು

Date:

ಅಲೆಮಾರಿ‌ ಸಮುದಾಯದ ಸಮಸ್ಯೆಗಳ ಕುರಿತು ಚಿಕ್ಕನಾಯಕನಹಳ್ಳಿ ತಾಲೂಕಿನ ಅಲೆಮಾರಿಗಳು ತಾಲೂಕು ಕಚೇರಿಗೆ ಆಗಮಿಸಿ, ತಹಶೀಲ್ದಾರ್ ಕೆ.ಪುರಂದರ್ ಅರವರಿಗೆ ಮನವಿಪತ್ರ ನೀಡಿದರು.

ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗೌಡಗೆರೆ ಸರ್ವೆ ನಂಬರ್ 20P-1’ನಲ್ಲಿ ಹೋಬಳಿಯ ಅಲೆಮಾರಿ ಜನಾಂಗದವರಿಗೆ 34 ನಿವೇಶನಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಆದರೆ, ಮನೆ ನಿರ್ಮಿಸಿಕೊಳ್ಳಲು ಅಲ್ಲಿ ಕೈಗೊಳ್ಳಬೇಕಾದ ಮೂಲಭೂತ ಸೌಕರ್ಯಗಳು ಮಾತ್ರ ನಾಪತ್ತೆಯಾಗಿವೆ. ಅದೇ ಗೌಡಗೆರೆ ಸರ್ವೆ ನಂಬರ್ 20P-1’ನಲ್ಲೇ ಬರುವ 30’ಗುಂಟೆ ಜಮೀನಿನಲ್ಲಿ ಇನ್ನೂ 27 ಅಲೆಮಾರಿ ಕುಟುಂಬಗಳಿಗಾಗಿ ನಿವೇಶನ ಮಾಡಿಕೊಡಲು ಅದರ ಫಾರ್ಮೇಶನ್ ಕೆಲಸಕಾರ್ಯಗಳು ಆಗಬೇಕಿತ್ತು. ಆದರೆ ಇನ್ನೂ ಆ ಕೆಲಸಗಳು ಪ್ರಾರಂಭವೇ ಆಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಂದಿಜೋಗಿ ರಾಜಣ್ಣ ತಿಳಿಸಿದ್ದಾರೆ.

ಚಿಕ್ಕನಾಯಕನಹಳ್ಳಿ1 2

ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಅಲೆಮಾರಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಸ್ಥಗಿತಗೊಂಡಿವೆ. ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್’ಗಳು ಶೀಘ್ರವೇ ಈ ಕೆಲಸಗಳನ್ನು ಕೈಗೆತ್ತಿಕೊಂಡು ವಸತಿ ವಂಚಿತ ಅಲೆಮಾರಿ ಸಮುದಾಯದ ಕುಟುಂಬಗಳು ಮನೆ ಕಟ್ಟಿಕೊಳ್ಳಲು ತ್ವರಿತವಾಗಿ ಅನುವು ಮಾಡಿಕೊಡಬೇಕು ಎಂದು ರಾಜಣ್ಣ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಜುಲೈ ತಿಂಗಳಲ್ಲಿ ಹುಳಿಯಾರಿನಲ್ಲಿ ನಡೆದ ಜಿಲ್ಲಾಧಿಕಾರಿಗಳ ಜನಸ್ಪಂದನ ಕಾರ್ಯಕ್ರಮದ ಸಂದರ್ಭದಲ್ಲಿ, ತುಮಕೂರು ಜಿಲ್ಲೆಯ ಎಡಿಸಿ ಶಿವಾನಂದ ಕರಾಳೆ’ಯವರು ಗೌಡಗೆರೆ ಸರ್ವೆ ನಂಬರ್ 20P-1’ನಲ್ಲಿರುವ ಈ ಅಲೆಮಾರಿ ಬಿಡಾರಕ್ಕೆ ಭೇಟಿಕೊಟ್ಟು ವಾಸ್ತವಸ್ಥಿತಿ ಮನಗಂಡಿದ್ದರು. ಸ್ಥಳದಲ್ಲೇ ತಾಲ್ಲೂಕು ಮಟ್ಟದ ಹಿರಿಕಿರಿಯ ಅಧಿಕಾರಿಗಳಿಗೆ ಶೀಘ್ರವಾಗಿ ಇದರ ಕೆಲಸಕಾರ್ಯಗಳನ್ನು ಪ್ರಾರಂಭಿಸಬೇಕು ಎಂದು ಸೂಚನೆಗಳನ್ನು ನೀಡಿದ್ದರು. ಇದಾಗಿ ಎಡಿಸಿಯವರು ಅಂದು ಅಲೆಮಾರಿ ಬಿಡಾರ’ದ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕೆ ಸಂಬಂಧಪಟ್ಟಂತೆ ಖುದ್ದು ಸ್ಥಳ ಪರಿಶೀಲನೆ ನಡೆಸಿದ ನಂತರ ನೀಡಿದ ಸೂಚನೆಗಳ ಅನುಪಾಲನೆ ಏನಾಯಿತು. ಅವು ಎಲ್ಲಿ ಅನುಷ್ಠಾನಗೊಳ್ಳುತ್ತಿವೆಯೇ ಇಲ್ಲವೇ ಎಂಬ ಸ್ಪಷ್ಟ ಮಾಹಿತಿಯೂ ತಿಳಿಯುತ್ತಿಲ್ಲ. ಆ ಅಲೆಮಾರಿ ಬಿಡಾರ ಮಾತ್ರ ಇಂದಿಗೂ ಯಥಾಸ್ಥಿತಿಯಲ್ಲೇ ಇದೆ. ಅದರ ಪ್ರಗತಿ ಯಾವಾಗ, ಹೇಗೆ, ಎಲ್ಲಿಯವರೆಗೆ ಎಂಬುದನ್ನು ನಾವು ಯಾರನ್ನು ಕೇಳಿ ತಿಳಿಯಬೇಕು ಎಂದು ಹಂದಿಜೋಗಿ ರಾಜಣ್ಣ ಪ್ರಶ್ನಿಸಿದರು.

ಅಲೆಮಾರಿ ನಗರದಲ್ಲಿ ಈಗಾಗಲೇ ಹಂಚಿಕೆ ಮಾಡಿರುವ ನಿವೇಶನಗಳ ಅಭಿವೃದ್ಧಿ ಎಲ್ಲಿಗೆ ಬಂತು, ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಮಾಡುವ ಬದಲು ಸಮಾಜ ಕಲ್ಯಾಣ ಇಲಾಖೆಯ ಅಲೆಮಾರಿ ಅಭಿವೃದ್ಧಿ ಕೋಶದಿಂದ ಈ ಮನೆಗಳ ನಿರ್ಮಾಣ ಆಗಬೇಕಿತ್ತು. ಆದರೆ, ಆ ಅನುಕೂಲವೂ ಈಗ ತಪ್ಪಿಹೋಗಿದೆ. ಅಲೆಮಾರಿ ಅಭಿವೃದ್ಧಿ ಕೋಶದಲ್ಲಿ ಈ ಹಿಂದೆ ಅಲೆಮಾರಿಗಳ ಮನೆ ನಿರ್ಮಾಣಕ್ಕೆಂದೇ 4 ಲಕ್ಷಗಳವರೆಗೆ ಅನುದಾನವಿತ್ತು. ಆದರೀಗ ಆಶ್ರಯ ಯೋಜನೆ ಅಡಿಯಲ್ಲಿ ಅಲೆಮಾರಿಗಳಿಗೆ ಸಿಗುವುದು 2′ ಲಕ್ಷ ರೂಪಾಯಿ ಮಾತ್ರ. ಈ ಎರಡು ಲಕ್ಷ ರೂಪಾಯಿ’ಯಲ್ಲಿ ಅಲೆಮಾರಿಗಳು ಹೇಗೆ ಮನೆ ಕಟ್ಟಿಕೊಳ್ಳಲು ಸಾಧ್ಯ ಎಂದು ಅವರು ತಮ್ಮ ಸಂಕಟ ತೋಡಿಕೊಂಡರು.

ಚಿಕ್ಕನಾಯಕನಹಳ್ಳಿ2
ತುಮಕೂರು ಜಿಲ್ಲೆಯ ಎಡಿಸಿ ಶಿವಾನಂದ ಕರಾಳೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಅಲೆಮಾರಿಗಳ ಬಿಡಾರದ ಜಾಗಕ್ಕೆ ಭೇಟಿ ಕೊಟ್ಟ ಸಂದರ್ಭ

ಅದೇ ರೀತಿ ಅಲೆಮಾರಿ ಮಕ್ಕಳ ಹಕ್ಕುಗಳ ರಕ್ಷಣೆ, ಶೈಕ್ಷಣಿಕ ಅಭಿವೃದ್ಧಿ, ವ್ಯಸನಮುಕ್ತ ಹಾಗೂ ಸದೃಢವಾದ ಬೆಳವಣಿಗೆಗೆ ಸಂಬಂಧಿಸಿದಂತೆ ಇರುವ ಕಾರ್ಯಸೂಚಿಗಳು ಅಲೆಮಾರಿ ಬಿಡಾರಗಳಲ್ಲಿ ಅನುಷ್ಠಾನಗೊಳ್ಳಬೇಕು. ಆದರೆ ಇವ್ಯಾವು ನಿಯಮಿತವಾಗಿ ಅಲೆಮಾರಿಗಳಿಗೆ ಲಭಿಸುತ್ತಿಲ್ಲ ಎಂದು ಅಲೆಮಾರಿ ರೇಣುಕಮ್ಮ ತಮ್ಮ ಅಳಲು ತೋಡಿಕೊಂಡರು.

ತಾಲೂಕಿನ ಇನ್ನಿತರೆ ಅಲೆಮಾರಿ ಜನಾಂಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತದ ಕಾರ್ಯಕ್ರಮಗಳ ಅನುಷ್ಠಾನ ಹೇಗಾಗುತ್ತಿದೆ ಎಂಬುದನ್ನು ತಾಲೂಕು ದಂಡಾಧಿಕಾರಿಗಳಿಂದ ಮಾಹಿತಿ ಪಡೆಯುವ ಹಾಗೂ ತಮ್ಮ ಸಂಕಷ್ಟಗಳನ್ನು ಅವರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ತಾಲೂಕಿನ ಅಲೆಮಾರಿಗಳು ತಹಶೀಲ್ದಾರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದರು.

ಈಗಾಗಲೇ 77-78’ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಿಗೆ ಬಂದಿರುವ ವಂಚಿತ ಸಮುದಾಯಗಳಾದ ನಮಗೆ, ಕನಿಷ್ಠ ಹಕ್ಕು ಮತ್ತು ಮೂಲಭೂತ ಸೌಕರ್ಯಗಳನ್ನು ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಒದಗಿಸಿಕೊಡಬೇಕು. ಬದುಕನ್ನೇ ನಿತ್ಯದ ಸಂಘರ್ಷದಂತೆ ಬಾಳುತ್ತಿರುವ ನಾವುಗಳು, ಅನಿವಾರ್ಯವಾಗಿ ಹೋರಾಟದ ದಾರಿಗಳನ್ನೇ ಆಯ್ದುಕೊಳ್ಳಬೇಕಾಗುತ್ತದೆ ಎಂದು ಹಂದಿಜೋಗಿ ರಾಜಣ್ಣ ಹೇಳಿದರು.

bidara

ಈಗಾಗಲೇ ತಾಲೂಕು ಪಂಚಾಯತ್ ಇಲಾಖೆ, ಅಲೆಮಾರಿ ನಿವೇಶನ ಮತ್ತು ಮನೆ ನಿರ್ಮಾಣ ಕೆಲಸಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ತ್ವರಿತ ಕಾಮಗಾರಿಗಳನ್ನು ಪ್ರಾರಂಭಿಸಲಿದೆ. ಅಲೆಮಾರಿಗಳ ಕಷ್ಟಗಳ ಬಗ್ಗೆ ಬಹಳಷ್ಟು ತಿಳಿದಿರುವ ನನಗೆ ಅವರ ಅಭಿವೃದ್ಧಿ ಕೆಲಸಗಳು ಬೇಗನೆ ಅನುಷ್ಠಾನಗೊಳ್ಳುವ ಭರವಸೆಯಿದೆ ಎಂದು ತಹಶೀಲ್ದಾರ್ ಕೆ ಪುರಂದರ್ ತಿಳಿಸಿದರು.

“ನಾವು ಈಗಾಗಲೇ ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯತಿಯ ಗೌಡಗೆರೆ ಸರ್ವೆ ನಂಬರ್ 20P-1’ರ ಅಲೆಮಾರಿ ನಿವೇಶನಗಳಿರುವ ಪ್ರದೇಶಕ್ಕೆ ಭೇಟಿ ಕೊಟ್ಟು ಸ್ಥಳ ಪರಿಶೀಲನೆ ನಡೆಸಿದ್ದೇವೆ. ಈಗಾಗಲೇ ಅಲ್ಲಿ ಮಂಜೂರಾಗಿರುವ ಜಾಗದ ಫಾರ್ಮೇಶನ್, ನಿವೇಶನ ಅಭಿವೃದ್ಧಿ ಮತ್ತು ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾರಂಭಿಸುವ ಎಲ್ಲ ಪೂರ್ವ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ” ಎಂದು ತಾ.ಪಂ.ಇಒ ದೊಡ್ಡಸಿದ್ಧಯ್ಯ ತಿಳಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಹೊನ್ನಲಕ್ಷಮ್ಮ, ಕಮಲಮ್ಮ, ರೇಖಾ, ಜ್ಯೋತಿ, ದುರ್ಗಪ್ಪ, ವೆಂಕಟೇಶ್, ಪರಮೇಶ್, ಶಾಂತರಾಜ್, ಜಗದೀಶ ಸೇರಿದಂತೆ ಹಲವಾರು ಮಂದಿ ಅಲೆಮಾರಿಗಳು ಹಾಜರಿದ್ದರು.

ವರದಿ, ಸಂಚಲನ, ಚಿಕ್ಕನಾಯಕನ ಸೀಮೆಯಿಂದ

bidara3
bidara2
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...