ಕರ್ನಾಟಕದಲ್ಲಿ ‘ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ’ ಅಸ್ತಿತ್ವಕ್ಕೆ

Date:

ಬೆಂಗಳೂರಿನ ಕಾನ್ಶಿರಾಮ್ ನಗರದ ಅಂಬೇಡ್ಕರ್ ಭವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಕಾನ್ಶಿರಾಮ್ ಸಾಹೇಬರ ಅನುಯಾಯಿಗಳ ಸರ್ವ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ “ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ” ಎಂದು ಅಸ್ತಿತ್ವಕ್ಕೆ ತರಲಾಗಿದೆ ಎಂದು ಘೋಷಣೆ ಮಾಡಲಾಯಿತು.

ಬಹುಜನ ಸಮಾಜ ಚಳುವಳಿಯ ಹಿರಿಯ ನಾಯಕರಾದ ಮಾರಸಂದ್ರ ಮುನಿಯಪ್ಪ ಅವರನ್ನು ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಜೊತೆಗೆ ಬಹುಜನ ಚಳುವಳಿಯ ಹಿರಿಯ ನಾಯಕರಾದ ಎಂ. ಗೋಪಿನಾಥ್ ಅವರನ್ನು ರಾಷ್ಟ್ರೀಯ ಸಂಯೋಜಕರನ್ನಾಗಿ ಮತ್ತು ಆರ್ ಮುನಿಯಪ್ಪ ಅವರನ್ನು ರಾಜ್ಯ ಸಂಯೋಜಕರನ್ನಾಗಿ ಆಯ್ಕೆ ಮಾಡಲಾಯಿತು.

ಅಲ್ಲದೆ, 12 ಜನ ಹಿರಿಯ ನಾಯಕರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿಯೂ, 21 ಜನ ಮುಖಂಡರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ, 17 ಜನ ಮುಖಂಡರನ್ನು ರಾಜ್ಯ ಕಾರ್ಯದರ್ಶಿಗಳನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. 24 ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 10 at 11.33.45 AM 1 edited

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾರಸಂದ್ರ ಮುನಿಯಪ್ಪ ಅವರು ಅಧ್ಯಕ್ಷೀಯ ಭಾಷಣ ಮಾಡಿ, ಹೊಸ ಪಕ್ಷದ ಹುದ್ದೆಯನ್ನು ವಹಿಸಿಕೊಂಡು ಬಾಬಾ ಸಾಹೇಬರ ಮತ್ತು ಕಾನ್ಶಿರಾಮ್ ಜೀ ಅವರ ಕನಸು ನನಸು ಮಾಡಲು ಶ್ರಮಿಸುವುದಾಗಿ ಘೋಷಣೆ ಮಾಡಿದರು.

ಇದನ್ನು ಓದಿದ್ದೀರಾ? ಬೆಂಗಳೂರು ವಿಶ್ವವಿದ್ಯಾನಿಲಯ | ಸಂಗೀತ ನಿರ್ದೇಶಕ ಗುರುಕಿರಣ್‌, ಸಮಾಜ ಸೇವಕ ರಾಜಣ್ಣಗೆ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರಿನ ಬಹುಜನ ಚಳುವಳಿಯ ನಾಯಕರಾದ ಮಾನ್ಯ ಎಮ್ ಸತೀಶ್ ಚಂದ್ರ ಅವರು ಸ್ವಾಗತಿಸಿದರು. ಸಭೆಯನ್ನು ಉದ್ದೇಶಿಸಿ ಎಂ. ಗೋಪಿನಾಥ್,ಆರ್ ಮುನಿಯಪ್ಪ, ವೆಂಕಟಗಿರಿಯಯ್ಯ, ಲೋಕೇಶ್ ಚಂದ್ರ, ಮಣ್ಣೂರ್ ನಾಗರಾಜ್, ಪ್ರೊಫೆಸರ್ ಮೊಹಮ್ಮದ್ ಆಲಿ, ಕೆ.ಬಿ.ವಾಸು, ವೈ.ಸಿ. ಕಾಂಬಳೆ, ಗುರುಮೂರ್ತಿ ಮುಂತಾದವರು ಮಾತನಾಡಿದರು.

ಕನಕಪುರದ ಆಕಾಶ್ ಕಲಾತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಮತ್ತು ಬಾಮ್ಸೆಫ್ ನ ಹಿರಿಯ ಮುಖಂಡರಾದ ಬಿಎಸ್ಎನ್ಎಲ್ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಪೂಜಾರಿ ಚಿಕ್ಕಣ್ಣ ವಂದಿಸಿದರು.

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ
WhatsApp Image 2024 09 10 at 11.33.46 AM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...