ಬಸವಣ್ಣನವರನ್ನು ಪೂಜಿಸುವವರೆಲ್ಲರೂ ಲಿಂಗಾಯತರು; ಧರ್ಮದ ಕಾಲಂನಲ್ಲಿ ಲಿಂಗಾಯತ ಬರೆಸಿ: ಬಸವರಾಜ ಬುಳ್ಳ

Date:

ಬಸವಣ್ಣನವರನ್ನು ಪೂಜಿಸುವ ಎಲ್ಲರೂ ಲಿಂಗಾಯತರೇ ಆಗಿದ್ದು, ಇದೇ ತಿಂಗಳಿನಲ್ಲಿ ನಡೆಯಲಿರುವ ಗಣತಿ ಕಾರ್ಯದಲ್ಲಿ ಎಲ್ಲರೂ ಧರ್ಮದ ಕಲಂನ ಇತರೆ ಧರ್ಮ ಎನ್ನುವ ಸ್ಥಳದಲ್ಲಿ ‘ಲಿಂಗಾಯತ’ ಎಂದು ಬರೆಯಿಸಿ, ಜಾತಿ-ಉಪಜಾತಿ ಕಲಂಗಳಲ್ಲಿ ತಮ್ಮ ತಮ್ಮ ಕುಲಕಸುಬಿನ ಜಾತಿಗಳನ್ನು ಬರೆಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಬಸವರಾಜ ಬುಳ್ಳ ತಿಳಿಸಿದ್ದಾರೆ.

ಬುಧವಾರ ಬೆಂಗಳೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಥಮ ಜನಗಣತಿ 1871ರಲ್ಲಿ ನಡೆಯಿತು. ಅಂದು ಬ್ರಿಟಿಷ ಸರಕಾರ ಅಧಿಕಾರದಲ್ಲಿತ್ತು. ಆಗಲೂ ಲಿಂಗಾಯತ ಒಂದು ಧರ್ಮ ಎಂದು ಗುರುತಿಸಿದೆ. ಆದರೆ ಮುಂಬರುವ ದಿನದಲ್ಲಿ ಮೈಸೂರ ರಾಜ್ಯದ ದಿವಾನರು ಲಿಂಗಾಯತ ಧರ್ಮವನ್ನು ಮರೆಮಾಚಿದ್ದಾರೆ ಎಂದರು.

ಈ ಹಿಂದೆ ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭೆ ಸಮಾಜದ ಸಚಿವ, ಶಾಸಕರ ಹಾಗೂ ಗಣ್ಯರ ಸಭೆ ನಡೆಸಿ ಧರ್ಮದ ಕಲಂ ನಲ್ಲಿ ‘ವೀರಶೈವ ಲಿಂಗಾಯತ’ ಅಥವಾ ‘ಲಿಂಗಾಯತ’ ಯಾವುದನ್ನಾದರೂ ಬರೆಸಬಹುದೆಂದು ಒಮ್ಮತದಿಂದ ತೀರ್ಮಾನ ಮಾಡಿದ್ದರು. ಆದರೆ ಇದೀಗ ಮಹಾಸಭಾ ವತಿಯಿಂದ ಹೇಳಿಕೆ ನೀಡಿ, ‘ವೀರಶೈವ ಲಿಂಗಾಯತ’ ಧರ್ಮ ಎಂದು ಬರೆಸಬೇಕೆಂದು ಹೇಳಿದ್ದಾರೆ. ಇದು ಲಿಂಗಾಯತರಿಗೆ ಮಾಡುತ್ತಿರುವ ದ್ರೋಹ ಮತ್ತು ಈ ದ್ವಂದ್ವ ನಿಲುವಿನಿಂದ ಸಮಾಜದಲ್ಲಿ ಗೊಂದಲ ಮೂಡಿಸುತ್ತಿದೆ. ಈ ಗೊಂದಲಕ್ಕೆ ವೀರಶೈವ ಮಹಾಸಭಾ ಕಾರಣವಾಗಿದೆ ಎಂದು ಅವರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧರ್ಮಸ್ಥಳ | ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆ ಪತ್ತೆ: ವ್ಯಾಪಕ ಶೋಧಕ್ಕೆ ಮುಂದಾದ ಎಸ್‌ಐಟಿ

ಲಿಂಗಾಯತರು ಯಾವುದೇ ಗೊಂದಲಕ್ಕೆ ಒಳಗಾಗದೇ, ಸರಕಾರ ನಡೆಸಲಿರುವ ಗಣತಿ ಕಾರ್ಯಕ್ರಮದಲ್ಲಿ ಧರ್ಮದ ಕಾಲಂನಲ್ಲಿ ಇತರೆ ಧರ್ಮವೆನ್ನುವ ಸ್ಥಳದಲ್ಲಿ ‘ಲಿಂಗಾಯತ’ ಎಂದು ಬರೆಸಬೇಕು ಎಂದು ಕರೆ ಬಸವರಾಜ್ ಬುಳ್ಳ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷರಾದ ಮಹದೇವಪ್ಪ, ಸಂಜೀವ್ ಕಡಗದ, ವೀರಭದ್ರಪ್ಪ, ನಿಜಗುಣ ಮೂರ್ತಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...