ರಾಜಕೀಯ ಅಭದ್ರತೆಯಿಂದ ವರ್ಗಾವಣೆ ದಂಧೆ ಆರೋಪ ಹರಿಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

Date:

  • ಆರೋಪ ಮಾಡಿದವರು ತಾವು ವರ್ಗಾವಣೆ ಮಾಡಿದ್ದು ದಂಧೆಯಾ?
  • ಬಿಜೆಪಿ ಸರ್ಕಾರದ ಹಗರಣಗಳನ್ನು ನಾವು ತನಿಖೆ ಮಾಡುತ್ತೇವೆ: ಸಿಎಂ

ಅಧಿಕಾರಿಗಳ ವರ್ಗಾವಣೆ ಆಡಳಿತಾತ್ಮಕ ದೃಷ್ಟಿಯಿಂದ ಹೊಸ ಸರ್ಕಾರ ಮಾಡೇ ಮಾಡುತ್ತದೆ. ಅದನ್ನು ದಂಧೆ ಎನ್ನುವುದು ಹಾಸ್ಯಾಸ್ಪದ. ಹಾಗಾದರೆ ಆರೋಪ ಮಾಡಿದವರು ತಾವು ಅಧಿಕಾರಕ್ಕೆ ಬಂದಾಗ ವರ್ಗಾವಣೆ ಮಾಡಿದ್ದು ದಂಧೆಯಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಗುರುವಾರದ ಮಧ್ಯಾಹ್ನದ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುತ್ತ, “ಯಾವ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯದಂತೆ ನಾನು ನಮ್ಮ ಮಂತ್ರಿಮಂಡಲಕ್ಕೆ ಮನವಿ ಮಾಡಿರುವೆ. ಖಂಡತುಂಡವಾಗಿ ಪ್ರತಿಪಕ್ಷದ ನಾಯಕರು ಮಾಡಿರುವ ಆರೋಪವನ್ನು ನಾನು ಅಲ್ಲಗಳೆಯುತ್ತೇನೆ. ಲಂಚ ತಗೊಂಡಿರುವುದು ಯಾರಾದರೂ ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ” ಎಂದು ಸವಾಲು ಹಾಕಿದರು.

“ನನ್ನ ಇಲಾಖೆಯಲ್ಲಿ ಇನ್ನೂ ವರ್ಗಾವಣೆ ಮಾಡಿಲ್ಲ. ಏಕೆಂದರೆ ಬಜೆಟ್‌ ತಯಾರಿಯಲ್ಲಿ ಇದ್ದಿದ್ದರಿಂದ ನಾನು ನಮ್ಮ ಇಲಾಖೆಗಳಲ್ಲಿ ವರ್ಗಾವಣೆ ಆರಂಭಿಸಿಲ್ಲ. ನಮಗೆ ಗೊತ್ತಿಲ್ಲದ ರೀತಿಯಲ್ಲಿ ಭ್ರಷ್ಟಾಚಾರ ಮಾಡಿರಬಹುದು. ನಾನು ಅಲ್ಲಗಳೆಯುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

“ಬೊಮ್ಮಾಯಿ ಮತ್ತು ಕುಮಾರಸ್ವಾಮಿ ಅವರು ಮಾಡಿರುವ ಭ್ರಷ್ಟಾಚಾರದ ಆರೋಪ ಕೇವಲ ಕಪೋಲಕಲ್ಪಿತ. ಏಕೆಂದರೆ, ನಮ್ಮ ಸರ್ಕಾರದ ಮೇಲೆ ಹೇಳಲು ಯಾವುದೇ ವಿಷಯವಿಲ್ಲ ಅವರಿಗೆ. ಕೆಲವರಿಗೆ ರಾಜಕೀಯ ಭಯ ಆರಂಭವಾಗಿದೆ. ರಾಜಕೀಯ ಅಭದ್ರತೆ ಕಾಡುತ್ತಿದೆ. ಹೀಗಾಗಿ ಹತಾಶೆಯಿಂದ ಹೀಗೆ ಕೆಲವು ಆರೋಪ ಮಾಡುತ್ತ, ನಮ್ಮ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ 2013-2018ರವರೆಗಿನ ಭ್ರಷ್ಟಾಚಾರ ಪ್ರಕರಣ ತನಿಖೆ ಮಾಡಲು ಹತ್ತಾರು ಸಲ ಕೋರಿದ್ದೆ. ಮಾಡಲಿಲ್ಲ. ಅದರ ಅರ್ಥ ಅವರ ಬಳಿ ಯಾವುದೇ ದಾಖಲೆ ಸಿಕ್ಕಿಲ್ಲ. ಹೀಗಾಗಿ ತನಿಖೆ ಮಾಡಲಿಲ್ಲ. ಇದರ ಅರ್ಥ ಕೂಡ ನಮ್ಮ ಸರ್ಕಾರ ಭ್ರಷ್ಟಾಚಾರ ರಹಿತ ಸರ್ಕಾರ ಎಂಬುದು ಸಾಬೀತಾಗಿದೆ” ಎಂದರು.

ಬೊಮ್ಮಾಯಿ ಅವರು ಮಧ್ಯ ಎದ್ದು ನಿಂತು, “ಕಾಂಗ್ರೆಸ್‌ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ನಾವು ಲೋಕಾಯುಕ್ತಕ್ಕೆ ವಹಿಸಿದ್ದೇವೆ” ಎಂದರು. ಸಿಎಂ ಪ್ರತಿಕ್ರಿಯಿಸಿ, ಲೋಕಾಯುಕ್ತ ತನಿಖೆ ನಡೆಸಿದರೆ ನಾವು ಬೇಡ ಅನ್ನಲ್ಲ. ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ನಾವು ಆರೋಪ ಮಾಡಿದ್ದೆವು. ಎಸ್‌ಐಟಿ ಮೂಲಕ ತನಿಖೆ ನಡೆಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...