SCSP/TSP ಅನುದಾನ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಿಗೆ ಹಂಚಿಕೆ: ಎಚ್‌ ಸಿ ಮಹದೇವಪ್ಪ

Date:

  • ಸರ್ಕಾರದ ವಿವಿಧ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನದ ಪ್ರಮಾಣ ಕಡಿತ
  • ಕಾಯ್ದೆಯ ನಿಯಮಾವಳಿ ಮೀರಿಲ್ಲ, ಆಶಯಗಳಿಗೆ ಧಕ್ಕೆ ಮಾಡಿಲ್ಲ: ಸ್ಪಷ್ಟನೆ

ಪ್ರಸಕ್ತ ಸಾಲಿನಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯಡಿಯಲ್ಲಿ 7(ಡಿ) ಅನ್ನು ಈ ಬಾರಿಯ ಆಯವ್ಯಯದಲ್ಲಿ ರದ್ದು ಮಾಡಿದ ಮೇಲೆ ಸರ್ಕಾರದ ವಿವಿಧ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನದ ಪ್ರಮಾಣ ಕಡಿತಗೊಳಿಸಿ, ಅದನ್ನು ಫಲಾನುಭವಿ ಆಧಾರಿತ ಕಾರ್ಯಕ್ರಮಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌ ಸಿ ಮಹದೇವಪ್ಪ ತಿಳಿಸಿದ್ದಾರೆ.

ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ಬಳಸಿಕೊಳ್ಳುತ್ತಿರುವ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ‌ ಸ್ಪಷ್ಟೀಕರಣ ನೀಡಿರುವ ಅವರು, “ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅವರ ಬದುಕಿಗೆ ನೇರ ಪ್ರಯೋಜನ ಆಗುತ್ತಿರುವ ಹಿನ್ನಲೆಯಲ್ಲಿ ನಿಯಮಾವಳಿಗಳ ಅಡಿಯಲ್ಲೇ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯಡಿ ಭಾಗಶಃ ಅನುದಾನವನ್ನು ನೀಡಲಾಗಿದೆ. ಇಲ್ಲಿ ಎಲ್ಲಿಯೂ ಕೂಡಾ ಕಾಯ್ದೆಯ ನಿಯಮಾವಳಿಗಳನ್ನು ಮೀರಿಲ್ಲ ಮತ್ತು ಅದರ ಆಶಯಗಳಿಗೆ ಧಕ್ಕೆ ಆಗುವಂತೆ ನಡೆದುಕೊಂಡಿಲ್ಲ” ಎಂದು ತಿಳಿಸಿದ್ದಾರೆ.

ಅನುದಾನ ಹೆಚ್ಚಳ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2022-23 ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ವಿವಿಧ ಇಲಾಖೆಗಳಿಗೆ ಡೀಮ್ಡ್ ವೆಚ್ಚ ಸೇರಿ ಹಂಚಿಕೆ ಮಾಡಲಾಗಿದ್ದ 7,450.80 ಕೋಟಿಗಳ ಹಣವು 2023-24ನೇ ಸಾಲಿನಲ್ಲಿ ಸುಮಾರು 2,787.33 ಕೋಟಿಗಳಿಗೆ ಇಳಿಕೆಯಾಗಿರುತ್ತದೆ. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯಡಿಯಲ್ಲಿ 2023-24ನೇ ಸಾಲಿನಲ್ಲಿ ಒಟ್ಟಾರೆ 34,294 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಅನುದಾನದ ಪ್ರಮಾಣವು ಶೇ.13 ಅಂದರೆ ಸುಮಾರು 4,031 ಕೋಟಿ ರೂ. ಹೆಚ್ಚಳವಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ |ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ಅಕ್ಷಮ್ಯ: ಭೀಮ್ ಆರ್ಮಿ

“ನಮ್ಮ ಸರ್ಕಾರವು ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಸಮಗ್ರ ಅಭಿವೃದ್ದಿಗೆ ಬದ್ದವಾಗಿದ್ದು, ಇದಕ್ಕೆ ಪೂರಕವಾಗಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆ 2013 ರ ಸೆಕ್ಷನ್ 7(ಡಿ) ಯನ್ನು ಕೈಬಿಡಬೇಕೆಂಬ ಸಮುದಾಯಗಳ ಬೇಡಿಕೆಗೆ ಸ್ಪಂದಿಸಿ 7(ಡಿ) ಅನ್ನು ರದ್ದುಪಡಿಸುವ ಕೆಲಸವನ್ನು ಮಾಡಿದೆ. ಇಷ್ಟೇ ಅಲ್ಲದೇ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ನೀಡುತ್ತಿದ್ದ 50 ಲಕ್ಷ ರೂಪಾಯಿಗಳ ಗುತ್ತಿಗೆ ಮೊತ್ತದ ಪ್ರಮಾಣವನ್ನು 1 ಕೋಟಿ ರೂಪಾಯಿಗಳಿಗೆ ಏರಿಸಿದೆ. ಇದರೊಂದಿಗೆ ಪಿಟಿಸಿಎಲ್ ಕಾಯ್ದೆಗೆ ಇದ್ದ ಕಾಲಮಿತಿಯನ್ನು ರದ್ದುಪಡಿಸುವ ಮೂಲಕ ಚುನಾವಣೆಗೂ ಮುನ್ನವೇ ಭರವಸೆ ನೀಡಲಾದಂತೆ ನಮ್ಮ ಸರ್ಕಾರವು ನಡೆದುಕೊಂಡಿದೆ” ಎಂದು ಹೇಳಿದ್ದಾರೆ.

ಬಿಜೆಪಿಗೆ ನೈತಿಕತೆ ಇಲ್ಲ: ಸಚಿವರ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಹಂಚಿಕೆ ಮಾಡುವ ಉದ್ದೇಶದಿಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆ ಅನುಷ್ಠಾನಕ್ಕೆ ತಂದರು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾಗಿದ್ದ ಹಣವನ್ನು ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ಬೇರೆ ಬೇರೆ ಕಾಮಗಾರಿಗಳಿಗೆ ಬಳಸಿಕೊಂಡಿತ್ತು. ಇಂತಹ ಪಕ್ಷದ ನಾಯಕರು ಈ ದಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ನಮ್ಮ ಸರ್ಕಾರದ ಬಗ್ಗೆ ಟೀಕಿಸುತ್ತಿರುವುದು ವಿಪರ್ಯಾಸ. ನೈತಿಕತೆ ಇಲ್ಲದೇ ಮಾತನಾಡುತ್ತಿರುವ ಇವರ ಮಾತುಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...