ಮಹಾರಾಷ್ಟ್ರದ ಕ್ಯಾತೆಯ ನಡುವೆಯೂ ಆಲಮಟ್ಟಿ ನವೀಕರಣಕ್ಕೆ ಸಿದ್ಧ: ಶಾಸಕ ಯಶವಂತರಾಯಗೌಡ

Date:

ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524 ಮೀಟರ್‌ ವರೆಗೆ ಏರಿಸಿ ನವೀಕರಿಸಲು ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆಯುತ್ತಿರುವುದು ಸರಿಯಲ್ಲ. ಅಣೆಕಟ್ಟೆ ಎತ್ತರ ಏರಿಸಲು ಯಾವುದೇ ತ್ಯಾಗಕ್ಕೂ ಸಿದ್ದ. ಈ ಕುರಿತು ವಿಜಯಪುರದಲ್ಲಿ ರಾಜ್ಯ ಮಟ್ಟದ ಸಭೆ ನಡೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಲಾಗುವುದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆಡಳಿತಸೌಧ ಸಭಾ ಭವನದಲ್ಲಿ ನಡೆದ 2025-26ನೇ ಸಾಲಿನ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ಆಲಮಟ್ಟಿ ಜಲಾಶಯ ಎತ್ತರಿಸಲು ಅಗತ್ಯ ಇರುವ ಅನುದಾನಕ್ಕಾಗಿ ಬಾಂಡ್ ಮೂಲಕ ಹಣ ಸಂಗ್ರಹಿಸಿ, ಇಲ್ಲವೇ ನಮ್ಮ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆ ಮಾಡಿಸಲಿ. ಬಚಾವತ್ ಐ ತೀರ್ಪಿನ ಪ್ರಕಾರ ಅಣೆಕಟ್ಟೆ ಎತ್ತರ 524 ಮೀಟರ್ ಮಾಡಬೇಕು. ಮತ್ತು ನಮ್ಮ ಪಾಲಿನ 130 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಬೇಕಾಗಿದೆ. ಬ್ರಿಜೇಶ್ ಕುಮಾರ್ ತೀರ್ಪಿನ ಪ್ರಕಾರ ಬಿ ಸ್ಕೀಮ್‌ನ ಯೋಜನೆಗಳಿಗೆ ಕಾನೂನು ಬದ್ಧವಾಗಿ ನೀರು ಪಡೆಯಬೇಕಾದರೆ ಎತ್ತರ 524 ಮೀಟರ್ ಆಗಲೇಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯನಗರ | ಆಡಂಬರವಿಲ್ಲದೆ ಸಂವಿಧಾನ ಸಾಕ್ಷಿಯಾಗಿ ಅಂತರ್ಜಾತಿ ವಿವಾಹವಾದ ನವದಂಪತಿ

“ಇಂಡಿ ತಾಲೂಕಿನಲ್ಲಿ ಹಾದುಹೋಗಿರುವ ಗುತ್ತಿ ಬಸವಣ್ಣ, ಚಿಮ್ಮಲಗಿ, ಮುಳವಾಡ ಏತ ನೀರಾವರಿ, ಇಂಡಿ ಬ್ರಾಂಚ್ ಕಾಲುವೆ ಮತ್ತು ರೇವಣಸಿದ್ದೇಶ್ವರ ಕಾಲುವೆಯಲ್ಲಿ ನೀರು ಹರಿಯುತ್ತಿಲ್ಲ. ಹೀಗಾಗಿ ಆಲಮಟ್ಟಿ ಅಣೆಕಟ್ಟಿನ್ನು ಎತ್ತರಿಸುವುದು ಅನಿವಾರ್ಯ. ತಾಲೂಕಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲು ಮತ್ತು ಅದಕ್ಕೆ ಬೇಕಾಗುವ ಹಣ ನೀಡಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ತಹಶೀಲ್ದಾರ್ ಬಿ ಎಸ್ ಕಡಕಬಾವಿ, ಇಒ ನಂದೀಪ ರಾಠೋಡ, ಕೃಷಿ ಇಲಾಖೆ ಅಧಿಕಾರಿ ಚಂದ್ರಕಾಂತ ಪವಾರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ಹೆಸ್ಕಾಂನ ಎಸ್‌ ಎಸ್ ಬಿರಾದಾರ, ಸಂಜಯ ಖಡಗೇಕರ, ಡಿ ಎಸ್ ಪಿ ಜಗದೀಶ ಎಚ್, ನಾಮ ನಿರ್ದೇಶಿತ ಸದಸ್ಯರಾದ ಬಿ ಕೆ ಪಾಟೀಲ, ಗುರನಗೌಡ ಪಾಟೀಲ, ದೀಪಾಲಿ ಸ್ ಕುಲಕರ್ಣಿ, ಜೆ ಎಂ ಕರಜಗಿ, ಇಲಿಯಾಸ್ ತು ಬೋರಾಮಣಿ, ಪ್ರಶಾಂತ ಕಾಳೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...