ಸ್ವತಂತ್ರ ಮಾಧ್ಯಮಗಳನ್ನು ಜನ ಕೈ ಹಿಡಿದರೆ ಗೋದಿ ಮೀಡಿಯಾಗಳಿಗೆ ಮುಕ್ತಿ: ಆಲ್ಟ್ ನ್ಯೂಸ್ ಪತ್ರಕರ್ತ ಮೊಹಮ್ಮದ್ ಝುಬೇರ್

Date:

“ನಿಷ್ಪಕ್ಷ, ನಿಖರ ಸುದ್ದಿಗಳಿಗಾಗಿ ದೇಶದಲ್ಲಿ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ಇನ್ನಷ್ಟು ಬಲಗೊಳ್ಳುವ ಅಗತ್ಯವಿದೆ.‌‌ ಒಂದು ವೇಳೆ ಪ್ರಜ್ಞಾವಂತ ನಾಗರಿಕರು, ಸ್ವತಂತ್ರ ಮಾಧ್ಯಮಗಳನ್ನು ಕೈಹಿಡಿದಲ್ಲಿ ಗೋದಿ‌ ಮೀಡಿಯಾಗಳ ಪ್ರಭಾವವನ್ನು ತಗ್ಗಿಸಲು ಸಾಧ್ಯವಿದೆ” ಎಂದು ದೇಶದ ಖ್ಯಾತ ಪತ್ರಕರ್ತ, ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝುಬೇರ್ ಅಭಿಪ್ರಾಯಿಸಿದರು.

ಈದಿನ ಡಾಟ್ ಕಾಮ್ ಡಿಜಿಟಲ್ ಮಾಧ್ಯಮ ಸಂಸ್ಥೆ ಪ್ರಕಟಿಸಿರುವ ‘ನಮ್ಮ ಕರ್ನಾಟಕ ನಡೆದ 50 ಹೆಜ್ಜೆ… ಮುಂದಿನ ದಿಕ್ಕು’ ವಿಶೇಷ ಸಂಚಿಕೆಯನ್ನು ಮಂಗಳೂರು ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜು ಆವರಣದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.

1003013796

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ ಸಾಮಾಜಿಕ ಮಾಧ್ಯಮ ರಂಗದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸರಕಾರವನ್ನು ಟೀಕಿಸುತ್ತಿದ್ದ ಅನೇಕ ಮಾಧ್ಯಮಗಳು ಬದಲಾದ ರಾಜಕೀಯ ವಿದ್ಯಮಾನಗಳ ಬಳಿಕ ಸರಕಾರವನ್ನು ಹೊಗಳಲು ಆರಂಭಿಸಿದವು. ಇದು ಡಿಜಿಟಲ್ ಮಾಧ್ಯಮಗಳ ಮೇಲೆ ಆಗಿರುವ ರಾಜಕೀಯ ಶಕ್ತಿಯ ಪ್ರಭಾವದ ಪರಿಣಾಮವಾಗಿದೆ. ಈ ರೀತಿ ಸರಕಾರಿ ಪ್ರೇರಿತ ಸುಳ್ಳು ಸುದ್ದಿಗಳು ಹರಡುವುದನ್ನು ತಡೆಗಟ್ಟಲು ಹಾಗೂ ನಿಷ್ಪಕ್ಷ, ನಿಖರ ಸುದ್ದಿಗಳಿಗಾಗಿ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ಇನ್ನಷ್ಟು ಬಲಗೊಳ್ಳದ ಅಗತ್ಯವಿದೆ ಎಂದು ಫ್ಯಾಕ್ಟ್ ಚೆಕ್ಕರ್ ಮೊಹಮ್ಮದ್ ಝುಬೇರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003013859

ಇಂದು ಬಹುತೇಕ ಮಾಧ್ಯಮಗಳು ಆಡಳಿತದಲ್ಲಿರುವ ರಾಜಕೀಯ ಪಕ್ಷಗಳ ಪರವಾಗಿ ಆಯ್ದ ಸುದ್ದಿಗಳನ್ನು ಮಾತ್ರ ವರದಿ ಮಾಡುತ್ತಿವೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಿಗೆ ಸಂಬಂಧಿಸಿದ ಸಕಾರಾತ್ಮಕ ಸುದ್ದಿಗಳಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿವೆ. ಬಿಜೆಪಿಯೇತರ ಸರಕಾರವಿರುವ ರಾಜ್ಯಗಳ ಆಡಳಿತಕ್ಕೆ ಸಂಬಂಧಿಸಿ ನಕಾರಾತ್ಮಕ ಸುದ್ದಿಗಳನ್ನು ಹೆಚ್ಚು ಬಿತ್ತರಿಸುತ್ತಿವೆ ಎಂದು ಝುಬೇರ್ ತಿಳಿಸಿದರು.

1003013924

ಮುಖ್ಯವಾಹಿನಿಯ ಮಾಧ್ಯಮಗಳು ಮತ್ತು ನಿರೂಪಕರು ಬಿಜೆಪಿಯ ಪರವಾಗಿ ಕಾರ್ಯ ನಿರ್ವಹಿಸುತ್ತಾರೆ. ಸಾರ್ವಜನಿಕ ಸಮಸ್ಯೆಗಳನ್ನು ಮುಚ್ಚಿ ಹಾಕಲು ಮತ್ತು ಸರಕಾರದ ಹಿತಾಸಕ್ತಿಗಳನ್ನು ಕಾಪಾಡಲು ಕೆಲವು ಮಾಧ್ಯಮಗಳು ವಿಷಯಾಂತರಕ್ಕೆ ಹೆಚ್ಚು ಒತ್ತು ನೀಡುತ್ತಿವೆ. ಪಶ್ಚಿಮ ಬಂಗಾಳದ ವೈದ್ಯಕೀಯ ಕಾಲೇಜು ಆಸ್ಪತ್ರೆಯೊಂದರಲ್ಲಿ ನಡೆದ ಘಟನೆಯನ್ನು ನಿದರ್ಶನವಾಗಿ ಉಲ್ಲೇಖಿಸಿದ ಮುಹಮ್ಮದ್ ಝುಬೇರ್, ತೃಣಮೂಲ ಕಾಂಗ್ರೆಸ್ ಮತ್ತು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಗುರಿಯಾಗಿಸಿಕೊಂಡು ಆ ಕೃತ್ಯವನ್ನು ರಾಜಕೀಯಗೊಳಿಸುವ ಉದ್ದೇಶದಿಂದ ತಪ್ಪುಮಾಹಿತಿಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಯಿತು ಎಂದರು.

1003013808

ಈದಿನ ನ್ಯೂಸ್ ಆ‌್ಯಪ್ ‌ಅನ್ನು ಕರ್ನಾಟಕ ಥಿಯೋಲಜಿಕಲ್ ಕಾಲೇಜಿನ ಪ್ರಾಂಶುಪಾಲ ರೆ. ಡಾ.ಎಚ್.ಎಂ.ವಾಟ್ಸನ್ ಬಿಡುಗಡೆಗೊಳಿಸಿ ಮಾತನಾಡಿದರು.

1003013953

ಈದಿನ ಸಮುದಾಯ ವಿಭಾಗದ ಮುಖ್ಯಸ್ಥ ಡಾ. ವಾಸು ಎಚ್.ವಿ.ಅಧ್ಯಕ್ಷತೆ ವಹಿಸಿ, ಮಾತನಾಡಿದರು.

1003013856

ವೇದಿಕೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎಂ.ದೇವದಾಸ್, ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್, ಅನುಪಮ ಮಹಿಳಾ ಮಾಸಿಕದ ಸಂಪಾದಕಿ ಶಹನಾಝ್ ಎಂ., ಡೀಡ್ಸ್ ಸಂಸ್ಥೆಯ ಸಮಾಜ ಸೇವಕಿ ಜೆಸಿಂತಾ ಪಿರೇರಾ ಉಪಸ್ಥಿತರಿದ್ದರು.

1003013934

ಈದಿನ ಡಾಟ್ ಕಾಮ್‌ನ ಗವರ್ನಿಂಗ್ ಕೌನ್ಸಿಲ್ ಸದಸ್ಯ ಡೆನ್ನಿಸ್ ಡಿಸಿಲ್ವಾ ಸ್ವಾಗತಿಸಿದರು. ಹಣಕಾಸು ವಿಭಾಗದ ಮುಖ್ಯಸ್ಥ ಉಮರ್ ಯು.ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು.

ಗವರ್ನಿಂಗ್ ಕೌನ್ಸಿಲ್ ಸದಸ್ಯ ಲಕ್ಷ್ಮಣ್ ಕುಂದರ್ ವಂದಿಸಿದರು. ಪವಿತ್ರಾ ಜಿ.ಎಂ. ಕಾರ್ಯಕ್ರಮ ನಿರೂಪಿಸಿದರು.

1003013931
1003013742
1003013781
1003013802
1003013790
1003013903
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...