ಆಲೂರು | ಕುಂದೂರಿಗೆ ಅಂಬೇಡ್ಕರ್‌ ವಸತಿ ಶಾಲೆ ಮಂಜೂರು; ಶಾಸಕ ಸಿಮೆಂಟ್‌ ಮಂಜು ಚಾಲನೆ

Date:

ಆಲೂರು ತಾಲೂಕಿನ ಕುಂದೂರು ಹೋಬಳಿಗೆ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯನ್ನು ಮಂಜೂರು ಮಾಡಿಸಿದ್ದು, ಶಾಲಾ ಕಟ್ಟಡದ ಅಲಭ್ಯತೆಯಿಂದಾಗಿ ಪ್ರಸ್ತುತ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ನಡೆಯುವ ತರಗತಿಗಳಿಗೆ ಶಾಸಕ ಸಿಮೆಂಟ್ ಮಂಜು ಅವರು ಚಾಲನೆ ನೀಡಿ ಉದ್ಘಾಟಿಸಿದರು. ಶೀಘ್ರವಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ನೂತನ ಕಟ್ಟಡದ ನಿರ್ಮಾಣ ಪ್ರಾರಂಭಿಸುವ ಭರವಸೆ ನೀಡಿದರು.

“ಶಿಕ್ಷಣ ಎಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು, ಶಿಕ್ಷಣವೇ ಶಕ್ತಿ ಎಂಬ ದಾರ್ಶನಿಕರ ಮಾತನ್ನು ಉಲ್ಲೇಖಿಸುತ್ತಾ ಜೀವನದಲ್ಲಿ ನಾವು ಪಡೆದ ಶಿಕ್ಷಣವು ಉನ್ನತಿಗೆ ಕಾರಣವಾಗಬೇಕೇ ಹೊರತು ಅವನತಿಗೆ ಮೂಲವಾಗಬಾರದು. ಶಿಕ್ಷಣವು ಕೇವಲ ಉದ್ಯೋಗ ಪಡೆಯಲು ಅಲ್ಲ, ಪ್ರಜ್ಞಾವಂತ, ಸುಶಿಕ್ಷಿತ ನಾಗರೀಕನಾಗಿ ಬದುಕಿ ಬಾಳಲು ಎಂಬುದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಮಾಹಿತಿ ತುಂಬಿಸುವ ಕೆಲಸ ಮಾಡದೇ ಜೀವನದ ಪ್ರತಿ ಹಂತದಲ್ಲಿಯೂ ಸುಖ ದುಃಖಗಳನ್ನು ಸಮಾನವಾಗಿ ಎದುರಿಸುವ ತಾನು ಬದುಕಿ ಪರರನ್ನು ಬಾಳ ಬಿಡುವ ಯೋಗ್ಯ ಪ್ರಜೆಗಳನ್ನು ನಿರ್ಮಾಣ ಮಾಡಲಿ” ಎಂದರು.

ಇದನ್ನೂ ಓದಿ: ಹಾಸನ | ಕಾರ್ಮಿಕರ ಮೇಲಿನ ಶೋಷಣೆ ತೊಲಗಿಸುವುದೇ ಸಿಐಟಿಯುನ ಸಾಂವಿಧಾನಿಕ ಹೋರಾಟ: ರಾಷ್ಟ್ರೀಯ ಅಧ್ಯಕ್ಷೆ ಹೇಮಲತಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಹಾಸನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೌಸರ್ ಅಹಮದ್, ಬಿಇಒ ಕೃಷ್ಣೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ದೂತ್ ಪೀರ್, ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲ ಪ್ರಕಾಶ್, ಸಿಬ್ಬಂದಿಗಳು, ಶಾಲಾಸ್ಥ ಳೀಯ ಮುಖಂಡರಾದ ಪ್ರತಾಪ್, ಶಿಕ್ಷಕ ಮಂಜುನಾಥ್, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...