ಮೈಸೂರು | ಜಿಲ್ಲೆಯ ಇಂದೂಧರ ಹೊನ್ನಾಪುರ, ಹರಿಹರ ಆನಂದ ಸ್ವಾಮಿ ಸೇರಿದಂತೆ 15 ಮಂದಿ ಸಾಧಕರಿಗೆ ‘ ಅಂಬೇಡ್ಕರ್ ಪ್ರಶಸ್ತಿ ‘

Date:

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಮಂದಿ ಸಾಧಕರಿಗೆ 2023 ರಿಂದ 2025 ನೇ ಸಾಲಿನ ಡಾ. ಬಿ. ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರಕಟಿಸಲಾಗಿದೆ. ಅದರಲ್ಲಿ, ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ದಸಂಸ ಹಿರಿಯ ಮುಖಂಡರಾದ ಇಂದೂಧರ ಹೊನ್ನಾಪುರ ಹಾಗೂ ಹರಿಹರ ಆನಂದ ಸ್ವಾಮಿ ಅವರಿಗೆ ಲಭಿಸಿದೆ.

ಅಂಬೇಡ್ಕರ್ ಜಯಂತಿಯಂದು ಕರ್ನಾಟಕ ಸರ್ಕಾರದಿಂದ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದರೆ, 2023 ರಿಂದ ಇದುವರೆಗೆ ಪ್ರಶಸ್ತಿ ಪ್ರಕಟವಾಗಿರಲಿಲ್ಲ. ಈ ಭಾರಿ 2023 ರಿಂದ 2025 ರ ವರೆಗೆ ಏಕಕಾಲದಲ್ಲಿ ಪ್ರಕಟಿಸಲಾಗಿದ್ದು ಏಪ್ರಿಲ್ 14 ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಲ್. ನರಸಿಂಹಮೂರ್ತಿ ಆದೇಶ ಹೊರಡಿಸಿದ್ದಾರೆ.

2023 ನೇ ಸಾಲಿಗೆ ಇಂದೂಧರ ಹೊನ್ನಾಪುರ (ಪತ್ರಿಕೋಧ್ಯಮ ), ಹರಿಹರ ಆನಂದಸ್ವಾಮಿ ( ಸಮಾಜ ಸೇವೆ ), ಸೀತವ್ವ ಜೋಡಟ್ಟಿ ( ದೇವದಾಸಿ ವಿಮೋಚನೆ ), ಕೆ.ಪುಂಡಲಿಕ ರಾವ್ ಶೆಟ್ಟಿ ಬಾ ( ಸಮಾಜ ಸೇವೆ/ ರಾಜಕೀಯ ), ರುದ್ರಪ್ಪ ಹಾನಗವಾಡಿ (ಆಡಳಿತ ) ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024 ನೇ ಸಾಲಿಗೆ ಮುಲ್ಲಾ ಜಮ್ಮ ( ಸಮಾಜ ಸೇವೆ /ರಾಜಕೀಯ ), ಶ್ರೀಧರ ಕಲಿವೀರ (ಹೋರಾಟ ), ರಾಮದೇವ ರಾಕೆ (ಪತ್ರಿಕೋಧ್ಯಮ ), ಲಕ್ಷ್ಮೀಪತಿ ಕೋಲಾರ (ಸಾಹಿತ್ಯ /ಸಂಘಟನೆ ), ವೈ. ಬಿ. ಹಿಮ್ಮಡಿ (ಸಾಹಿತ್ಯ/ಸಮಾಜ ಸೇವೆ) ಆಯ್ಕೆ ಮಾಡಲಾಗಿದೆ.

2025 ನೇ ಸಾಲಿಗೆ ದತ್ತಾತ್ರೇಯ ಇಕ್ಕಳಗಿ (ಪ್ರಕಾಶನ ), ಮಾವಳ್ಳಿ ಶಂಕರ್ (ಹೋರಾಟ ), ಎಫ್. ಹೆಚ್. ಜಕ್ಕಪ್ಪನವರ್ (ಹೋರಾಟ ), ಹೊನ್ನೂರು ಗೌರಮ್ಮ (ಜಾನಪದ ಕಲೆ ), ಈರಪ್ಪ (ದಲಿತ ಹೋರಾಟ ) ಪ್ರಶಸ್ತಿ ಸಂದಿದೆ.

ಏ. 14 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುರಸ್ಕೃತರಿಗೆ ಪ್ರಶಸ್ತಿ ಪ್ರಧಾನ ಮಾಡುವರು. ಪ್ರಶಸ್ತಿಯು 5 ಲಕ್ಷ ನಗದು,ಪ್ರಶಸ್ತಿ, ಫಲಕ ಒಳಗೊಂಡಿರುತ್ತದೆ.

ಇಂದೂಧರ ಹೊನ್ನಾಪುರ ಅವರು ದಸಂಸ ಹಿರಿಯ ಮುಖಂಡರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸಿದವರು. ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಪುಟ್ಟಣ್ಣ ಕಣಗಾಲ್ ಸಮೀಪದ ಹೊನ್ನಾಪುರ ಗ್ರಾಮದವರು. ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷರಾಗಿ ನೂರಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೈಕ್ಷಣಿಕ ಸೇವೆ ನೀಡುತ್ತಿದ್ದಾರೆ. ಮೈಸೂರಿನ ಪತ್ರಿಕೋಧ್ಯಮ ಪದವಿಧರರಾಗಿ, ವಿದ್ಯಾರ್ಥಿ ದಿಸೆಯಲ್ಲಿ ‘ಪಂಚಮ ‘ ಪತ್ರಿಕೆ ಪ್ರಕಟಿಸಿದ್ದರು. ದಲಿತ ಚಳುವಳಿಯಲ್ಲಿ ಸಕ್ರಿಯರಾಗಿ ನಾಡಿನಾದ್ಯಂತ ದಸಂಸ ಕಟ್ಟಿದವರಲ್ಲಿ ಒಬ್ಬರಾಗಿದ್ದಾರೆ.

ಪಿರಿಯಾಪಟ್ಟಣದಲ್ಲಿ ನಡೆದ 16ನೇ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ (2018) ಅಧ್ಯಕ್ಷರಾಗಿದ್ದರು. ಇದುವರೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಖಾದ್ರಿ ಶಾಮಣ್ಣ ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ ಸಂದಿವೆ.’ ಬಂಡಾಯ’ಕವನ ಸಂಕಲನ ಹಾಗೂ ‘ಹೊಸದಿಕ್ಕು’ ಆಯ್ದ ಲೇಖನಗಳ ಸಂಕಲನ ಪ್ರಕಟಗೊಂಡಿದೆ.

ದಸಂಸ ಹಿರಿಯ ಮುಖಂಡರಾದ ಹರಿಹರ ಆನಂದ ಸ್ವಾಮಿ 14/01/1952 ರಲ್ಲಿ ಕೆ ಆರ್ ನಗರ ತಾಲ್ಲೂಕು ಬ್ಯಾಡರಹಳ್ಳಿಯಲ್ಲಿ ಜನಿಸಿದವರು. ತಂದೆ ನರಸಿಂಹಯ್ಯ ಅವರ ಮಾರ್ಗದರ್ಶನದಲ್ಲಿ ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿ ಎಸ್ಸಿ ಪದವಿ ಶಿಕ್ಷಣ ಪಡೆದು 1976 ರಲ್ಲಿ ದಸಂಸ ಜಿಲ್ಲಾ ಸಂಚಾಲಕರಾಗಿ ಸಮಾಜ ಸೇವೆ ಪ್ರಾರಂಭಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪತ್ರಿಕೆ ಸಮಾಜದ ಪ್ರತಿಬಿಂಬ : ಡಾ. ಕೂಡ್ಲಿ ಗುರುರಾಜ

ಬಸವಲಿಂಗಪ್ಪ ಅವರ ಬೂಸಾ ಚಳುವಳಿಯಿಂದ ಪ್ರೇರಿತರಾಗಿ ಅಂದಿನಿಂದ ಇದುವರೆಗೆ ದಸಂಸ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಹುಣಸೂರು ತಾಲ್ಲೂಕು, ರತ್ನಾಪುರಿ ಗ್ರಾಮದವರಗಿದ್ದು ಜಿಲ್ಲೆಯಲ್ಲಿ ದಸಂಸ ಹಿರಿಯ ಮುಖಂಡರಾಗಿ ಜನಪರ ಹೊರಟಗಳನ್ನ ಮುನ್ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...