ಸಂವಿಧಾನದ ಮೂಲಕ ಎಲ್ಲ ಭಾರತೀಯರಿಗೆ ಘನತೆ ತಂದುಕೊಟ್ಟದ್ದು ಅಂಬೇಡ್ಕರ್‌ : ಪುರುಷೋತ್ತಮ ಬಿಳಿಮಲೆ

Date:

ವಿಜಯಪುರ : 1943ರಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಹಿಂದೂ ಮಹಾಸಭಾಕ್ಕೆ ಪತ್ರ ಬರೆದು ಎಲ್ಲರಿಗೂ ಅನ್ವಯವಾಗುವ ಧರ್ಮಗ್ರಂಥ ಬರೆಯಲು ಸೂಚಿಸಿದ್ದರು. ಅವರಿಂದ ಇನ್ನೂ ಅದು ಸಾಧ್ಯವಾಗಿಲ್ಲ. ಅವರಿಂದ ಉತ್ತರ ಬಾರದಿದ್ದರೂ ಸಂವಿಧಾನವನ್ನು ರಚಿಸುವ ಮೂಲಕ ಎಲ್ಲ ಭಾರತೀಯರಿಗೆ ಘನತೆ ತಂದುಕೊಟ್ಟ ಕೀರ್ತಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರದ್ದು ಎಂದು ಜೆಎನ್‌ಯುವಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಿಸಿದರು.

ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರಲ್ಲಿ ಇಂದಿನಿಂದ ಆರಂಭಗೊಂಡ ಮೇ ಸಾಹಿತ್ಯ ಮೇಳದ ಎರಡನೇ ಅಧಿವೇಶನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಹುಸಂಸ್ಕೃತಿಯ ಇಡೀ ಭಾರತಕ್ಕೆ ಸಂವಿಧಾನದ ಮೂಲಕ ಸುಂದರವಾದ ವ್ಯಾಕರಣ ಬರೆದವರು ಅಂಬೇಡ್ಕರ್. ಎಲ್ಲರಿಗೂ ಸಮಾನತೆಯನ್ನು ನೀಡಿದ ಗ್ರಂಥವಿದ್ದರೆ ಅದು ಸಂವಿಧಾನ. ಆದರೆ ಇಂದು ಅವರು ಬರೆದಿರುವ ಸಂವಿಧಾನವನ್ನು ಬುಡಮೇಲುಗೊಳಿಸುವ ಪ್ರಯತ್ನ ನಡೆಯುತ್ತಿದೆ. ಭಾರತದ ರಾಷ್ಟ್ರೀಯ ಹೋರಾಟದಲ್ಲಿ ಅನೇಕ ಆಶಯಗಳಿದ್ದವು. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಒಂದು ಆಶಯದಲ್ಲಿ ಗುರುತಿಸಿಕೊಂಡಿದ್ದರೂ ಕುವೆಂಪು ಶಿವರಾಮ ಕಾರಂತರಂತಹ ಒಳಸುಳಿ ಇರುವ ಆಶಯಗಳು ಕೂಡ ಸ್ಥಳೀಯ ಹಾಗೂ ಪ್ರಾದೇಶಿಕವಾಗಿ ಪಾತ್ರ ವಹಿಸಿದ್ದವು ಎಂಬುದನ್ನು ನಾವು ಮರೆಯಬಾರದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಪ್ರತಿಯೊಂದು ಜಾತಿ ಧರ್ಮದ ಜನರ ಪಾತ್ರವಿದೆ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಆದರೆ ಕೆಲವರಿಗೆ ಈಗ ದೇಶಕ್ಕೆ ಸ್ವಾತಂತ್ರ‍್ಯ ಬಂದದ್ದು 2014ರಲ್ಲಿ ಅಂದರೆ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಎಂದು ನಂಬಿದ್ದಾರೆ. ಇವರಿಗೆ ಜಗತ್ತು ಅಂದರೆ ಮೋದಿಯವರು ಹೋದ ದೇಶಗಳು ಮಾತ್ರ. ಇದೊಂದು ರೀತಿಯ ಬೌದ್ಧಿಕ ದಿವಾಳಿತನದ ಸಂಕೇತ. ಇದನ್ನು ರಿಪೇರಿ ಮಾಡಲು ನಾವು ನಿರಂತರವಾಗಿ ಪ್ರಯತ್ನ ಪಡಬೇಕಿದೆ ಎಂದು ಬಿಳಿಮಲೆ ಅಭಿಪ್ರಾಯಿಸಿದರು.

ಬಳಿಕ ಮಾತನಾಡಿದ ಹಿರಿಯ ಪತ್ರಕರ್ತ ಎ ನಾರಾಯಣ ದೇಶದ ಸಂವಿಧಾನವನ್ನು ಅಂಬೇಡ್ಕರ್‌ ಬರೆದ ಒಂದೇ ಕಾರಣಕ್ಕೆ ಇಂದು ಅದು ಈವರೆಗೆ ಉಳಿದುಕೊಂಡಿದೆ. ಒಂದು ವೇಳೆ ಬೇರೆ ಯಾರೇ ಬರೆದಿದ್ದರೂ ಅದು ಇಂದು ನಮ್ಮೆದುರಿಗೆ ಇರುತ್ತಿರಲಿಲ್ಲ. ಅಂಬೇಡ್ಕರ್‌ ಹಿಂದೆ ಒಂದು ಸಮುದಾಯವಿದೆ ಎಂಬ ಅರಿವು ಸಂವಿಧಾನದ ವಿರುದ್ಧವಾಗಿ ಕೆಲಸ ಮಾಡುವವರಿಗೆ ಇದೆ ಎಂದರು.

ಈ ಸುದ್ದಿ ಓದಿದ್ದೀರಾ? ಮೇ ಸಾಹಿತ್ಯ ಮೇಳ | ಭಾರತದಲ್ಲಿ ಮನುವಾದದ ವಿರುದ್ಧ ಶರಣರ ಪರಂಪರೆಯಿದೆ: ಪ್ರಕಾಶ್ ಅಂಬೇಡ್ಕರ್

ನಿರ್ದಿಷ್ಟ ಧರ್ಮವೊಂದು ಅಪಾಯದಲ್ಲಿದೆ ಎಂದು ಕೆಲವರು ಬೊಬ್ಬಿಡುತ್ತಿದ್ದಾರೆ. ಆದರೆ ಅದು ಸುಳ್ಳು ಎಂದು ಎಲ್ಲರಿಗೂ ಗೊತ್ತಿದೆ. ಇದೇ ಸುಳ್ಳಿನ ಮೂಲಕ ಧರ್ಮಾಂಧತೆಯನ್ನು ಹೆಚ್ಚಿಸಲಾಗುತ್ತಿದೆ. ದೇಶದಲ್ಲಿ ಸಂವಿಧಾನ ಎನ್ನುವ ಧರ್ಮಗ್ರಂಥವಿದೆ. ಅದನ್ನು ಉಳಿಸಿದರೆ ಎಲ್ಲ ಧರ್ಮವೂ ಉಳಿಯುತ್ತದೆ ಎಂಬ ವಿಚಾರವನ್ನು ಬಹಿರಂಗವಾಗಿ ಅವರಿಗೆ ತಿಳಿ ಹೇಳಿ ಅರಿವು ಮೂಡಿಸಬೇಕಿದೆ. ಆ ಮೂಲಕ ಅಂಬೇಡ್ಕರ್‌ ಅವರ ಕನಸನ್ನು ನನಸು ಮಾಡಬೇಕಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...