ಬೀದರ್‌ |‌ ಸಾಮರಸ್ಯ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಡಿಪಾಯ : ಜಗದೀಶ್ವರ ಬಿರಾದರ್

Date:

ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ವಿರಚಿತ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಾಮಾಜಿಕ ಚಿಂತಕ ಜಗದೀಶ್ವರ ಬಿರಾದಾರ್ ಹೇಳಿದರು.

ಔರಾದ ಪಟ್ಟಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ಹಾಗೂ ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯಿಂದ ಶುಕ್ರವಾರ ಸಂಜೆ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ, ಉಪನ್ಯಾಸ ಹಾಗೂ ಸಾಧಕರ ಸಮ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

“ಡಾ.ಬಿ.ಆರ್.ಅಂಬೇಡ್ಕರ್‌ ಅವರ ದೂರದೃಷ್ಟಿಯ ಫಲವಾಗಿ ರಚಿತವಾದ ಸಂವಿಧಾನ ರಾಷ್ಟ್ರದ ಕಾನೂನಿಗೆ ಅಡಿಪಾಯವಾಗಿದೆ, ದೇಶದ ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಪ್ರಜೆಗಳಿಗೆ ಸಂವಿಧಾನದಡಿ ನೀಡಿರುವ ಹಕ್ಕುಗಳನ್ನು ಪಡೆಯಲು ತೋರುವ ಆಸಕ್ತಿ, ಕರ್ತವ್ಯ ನಿರ್ವಹಣೆಗೂ ನೀಡಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಬಾ ಸಾಹೇಬರು ಜಗತ್ತು ಕಂಡ ಶ್ರೇಷ್ಠ ಚಿಂತಕರು. ಅಸ್ಪೃಶ್ಯತೆ, ಅಸಮಾನತೆ, ಅವೈಜ್ಞಾನಿಕ ಸಂಪ್ರದಾಯಗಳು ಕಿತ್ತೊಗೆದು ಬಡವರ, ದಿನ, ದಲಿತ, ನಿರ್ಗತಿಕ, ಶೋಷಿತರ ಧ್ವನಿಯಾಗಿದ್ದಾರೆ. ಅಂಬೇಡ್ಕರ್ ಆಶಯದಂತೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕಾಗಿದೆ. ಜಾತಿ, ಮತ, ಧರ್ಮ ಬೇಧ, ಭಾವ ಇಲ್ಲದೆ ಎಲ್ಲ ವರ್ಗದವರಿಗೂ ಸಮಾನ ಹಕ್ಕು ನೀಡಿ ವಿಶ್ವಕ್ಕೆ ಮಾದರಿಯಾದ ವ್ಯಕ್ತಿತ್ವ ಅಂಬೇಡ್ಕರ್ ಅವರದ್ದಾಗಿದೆ, ಅವರ ಚಿಂತನೆಗಳು ಎಂದೆಂದಿಗೂ ಸಮಾಜಕ್ಕೆ ಆದರ್ಶವಾಗಿವೆ” ಎಂದು ನುಡಿದರು.

ನೌಕರರ ಸಂಘದ ಅಧ್ಯಕ್ಷ ರಾಜಕುಮಾರ ಡೊಂಗರೆ ಮಾತನಾಡಿ, “ಶೋಷಿತ, ದಮನಿತರ ಏಳಿಗೆಗಾಗಿ ಅಂಬೇಡ್ಕರ್ ತತ್ವಗಳ ಅಳವಡಿಕೆ ಅಗತ್ಯವಾಗಿದೆ. ವಿದ್ಯಾರ್ಥಿಗಳು ಅಂಬೇಡ್ಕರ್ ಚಿಂತನೆ ಹಾಗೂ ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಪಡೆದು, ಕರ್ತವ್ಯಗಳನ್ನು ಸಹ ಪರಿಣಾಮಕಾರಿಯಾಗಿ ನಿರ್ವಹಿಸಿ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು” ಎಂದು ಹೇಳಿದರು.

ಔರಾದ ತಹಸೀಲ್ದಾರ್ ನಾಗಯ್ಯ ಹಿರೇಮಠ ಕಾರ್ಯಕ್ರಮ ಉದ್ಘಾಟಿಸಿದರು. ಭಂತೆ ಬೋಧಿರತ್ನ ಅವರು ಸಾನಿಧ್ಯ ವಹಿಸಿದರು. ಇದೇ ಸಂದರ್ಭದಲ್ಲಿ ಪಿಯುಸಿಯಲ್ಲಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಕಾರ್ಯಕ್ರಮದಲ್ಲಿ ತಾಪಂ ಇಒ ವೆಂಕಟ ಶಿಂಧೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅನೀಲಕುಮಾರ್ ಮೆಲ್ದೊಡ್ಡಿ, ಡಾ. ಮನ್ಮತ್ ಡೋಳೆ, ವೀರಶೆಟ್ಟಿ ರಾಠೋಡ್, ರವೀಂದ್ರ ಮೇತ್ರೆ, ಪಿಎಸ್ಐ ಉಪೇಂದ್ರ ಕುಮಾರ್, ನರಸಿಂಗ ಕೊಂಡೆ, ಆನಂದ ಕಾಂಬಳೆ, ಸೂರ್ಯಕಾಂತ ಸಿಂಗೆ, ಪಂಡರಿ ಆಡೆ, ವಿಶ್ವನಾಥ ಬಿರಾದಾರ್, ತುಳಸಿರಾಮ ಬೇಂದ್ರೆ, ಮಹಾದೇವ ಚಿಟಗೀರೆ, ಬಿಎಂ ಅಮರವಾಡಿ, ಪ್ರಕಾಶ ಭಂಗಾರೆ, ಸುನೀಲ ಮಿತ್ರಾ, ಆದರ್ಶ ನಾಗೂರೆ, ಸೈದಪ್ಪ, ಧನರಾಜ ಮಾನೆ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...