ಇತಿಹಾಸದ ಪುಟ ಸೇರಿದ ʼಅಂಬೇಡ್ಕರ್ ಗೀತೆʼಗಳು: ಪ್ರಶಂಸೆ ಗಳಿಸಿದ ಟೈಗರ್ ನಾಗ್

Date:

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಹೆಚ್ಚು ಮಹತ್ವ ಪಡೆಯುತ್ತಿರುವ ಈ ಹೊತ್ತಿನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪರಿನಿಬ್ಬಾಣದ 69ನೇ ವರ್ಷದ ನೆನಪಿಗಾಗಿ, ಆಧುನಿಕ ತಂತ್ರಜ್ಞಾನ ಬಳಸಿ 69 ಅಂಬೇಡ್ಕರ್ ಗೀತೆಗಳನ್ನು ನಿರ್ಮಿಸಿರುವ ಪತ್ರಕರ್ತ ಸಾಮಾಜಿಕ ಹೋರಾಟಗಾರ, ಹಾಗೂ ನಟ ನಿರ್ದೇಶಕ ಟೈಗರ್ ನಾಗ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಮೃತ ಹಸ್ತದಿಂದ 69 ಗೀತೆಗಳನ್ನೂ ಏಕಕಾಲದಲ್ಲಿ ಬಿಡುಗಡೆ ಮಾಡಿಸಿ ದಾಖಲೆ ನಿರ್ಮಿಸಿದ್ದಾರೆ.

ವಿಧಾನಸೌಧ ಆವರಣದ ಅಂಬೇಡ್ಕರ್ ಪ್ರತಿಮೆಯ ಮುಂಬಾಗದಲ್ಲಿ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣದ ದಿನದಂದು ನಡೆದ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಜಮೀರ್ ಆಹಮದ್ ಇವರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರು ಟೈಗರ್ ನಾಗ್ ಅವರನ್ನು ಮುಖ್ಯಮಂತ್ರಿಗಳಿಗೆ ಪರಿಚಯಿಸಿದರು. ಮುಖ್ಯಮಂತ್ರಿಗಳು ಟೈಗರ್ ನಾಗ್ ಅವರ ಪ್ರಯತ್ನವನ್ನು ಪ್ರೋತ್ಸಾಹಿಸಿ ಇಂತಹ ಕೆಲಸಗಳಿಗೆ ನಮ್ಮ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ಪ್ರೋತ್ಸಾಹ ನೀಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೈಗರ್ ನಾಗ್ ಅವರು ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದವರು. ರಾಜ್ಯಾದ್ಯಂತ ಹಲವು ಜನಪರ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಪಿಡಿಒಗಳಿಂದ ಐಎಎಸ್ ಅಧಿಕಾರಿಗಳವರೆಗೆ ಲೋಕಾಯುಕ್ತ, ಎಸಿಬಿ, ಸಿಬಿಐ, ಟ್ರ್ಯಾಪ್ ಮಾಡಿಸಿ ಭ್ರಷ್ಟ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದ್ದಾರೆ. ಇವರು ಕರ್ನಾಟಕದ ಸೆನ್ಸರ್ ಆಫೀಸರ್ ವಿರುದ್ಧವೂ ಹೋರಾಟ ಮಾಡಿ ಸಿಬಿಐ ಟ್ರ್ಯಾಪ್ ಮಾಡಿಸಿದ ಪ್ರಕರಣ ದೇಶಾದ್ಯಂತ ಸುದ್ದಿ ಆಯಿತು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಮಹಿಳೆಯರಿಗೆ ಕಾನೂನು ಅರಿವು ಇರಬೇಕು: ರವಿ ಓಲೇಕಾರ

ಅಲ್ಲದೆ, ಇವರು ಅಡವಿ ಎಂಬ ಚಿತ್ರವನ್ನು ನಿರ್ದೇಶನ ನಿರ್ಮಾಣ ಮಾಡಿ, ಈಗ ʼಭೀಮರಾವ್ ಅಂಬೇಡ್ಕರ್ ಕೊನೆಯ ದಿನಗಳುʼ ಎಂಬ ಸಿನಿಮಾ ಮಾಡಲು ತಯಾರಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಯಾರೂ ಮಾಡಿರದ ಪ್ರಯತ್ನಕ್ಕೆ ಟೈಗರ್ ಮುಂದಾಗಿದ್ದಾರೆ. ಡಾ. ಬಿಆರ್ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ 69 ಗೀತೆಗಳನ್ನು ರಚಿಸಿ ಸಂಗೀತ ಸಂಯೋಜನೆ ಮಾಡಿ ಮಾನ್ಯ ಮುಖ್ಯಮಂತ್ರಿಯವರಿಂದ ಬಿಡುಗಡೆ ಮಾಡಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಪಿ. ಮೂರ್ತಿ, ಭೀಮ್ ಆರ್ಮಿ ರಾಜ್ಯ ಅಧ್ಯಕ್ಷ ರಾಜಗೋಪಾಲ್, ಪ್ರಗತಿಪರ ಚಿಂತಕಿ ಮಧು ಹೊಲೆಯಾರ್ ಸೇರಿದಂತೆ ಇನ್ನಿತರ ಪ್ರಗತಿಪರ, ದಲಿತಪರ ಹೋರಾಟಗಾರರು, ಚಿಂತಕರು, ಸಾಹಿತಿಗಳು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...