ಬೀದರ್‌ | ಕೆಕೆಆರ್‌ಟಿಸಿ ಬಸ್‌ ನಿಲುಗಡೆಗೆ ಅಂಬೇಡ್ಕರ್‌ ಯುವ ಸೇನೆ ಆಗ್ರಹ

Date:

ಬೀದರ್‌ ಜಿಲ್ಲಾ ಕೇಂದ್ರದಿಂದ ಔರಾದ್‌ ತಾಲ್ಲೂಕಿಗೆ ಹೊರಡುವ ಕೆಕೆಆರ್‌ಟಿಸಿ ಬಸ್‌ಗಳನ್ನು ಸಂತಪೂರ ಹಾಗೂ ಜನವಾಡ ಗ್ರಾಮಗಳಲ್ಲಿ ನಿಲುಗಡೆ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್‌ ಯುವ ಸೇನೆ ಜಿಲ್ಲಾ ಘಟಕ ಆಗ್ರಹಿಸಿದೆ.

ಈ ಸಂಬಂಧ ಸೇನೆಯ ಪದಾಧಿಕಾರಿಗಳು ಬುಧವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೆಕರ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼಬೀದರ್‌ದಿಂದ ಔರಾದ್‌ ತಾಲ್ಲೂಕು ಕೇಂದ್ರಕ್ಕೆ ಹೊರಡುವ ಸಾರಿಗೆ ಬಸ್‌ಗಳು ಜನವಾಡ ಹಾಗೂ ಸಂತಪೂರ ಗ್ರಾಮಗಳಲ್ಲಿ ನಿಲುಗಡೆ ಮಾಡುತ್ತಿಲ್ಲ. ಇದರಿಂದ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬಸ್‌ ಪಾಸ್‌ ಇರುವ ವಿದ್ಯಾರ್ಥಿಗಳು ಖಾಸಗಿ ಬಸ್‌ಗಳಿಗೆ ತೆರಳಬೇಕಾದಂತಹ ಸ್ಥಿತಿ ಬಂದಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್-ಔರಾದ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಗ್ರಾಮಗಳಾದ ಜನವಾಡ ಮತ್ತು ಸಂತಪೂರದಿಂದ ದಿನಾಲೂ ನೂರಾರು ಪ್ರಯಾಣಿಕರು, ವಿದ್ಯಾರ್ಥಿಗಳು ಜಿಲ್ಲಾ, ತಾಲ್ಲೂಕು ಕೇಂದ್ರಗಳಿಗೆ ತೆರಳುತ್ತಾರೆ. ಹೀಗಾಗಿ ಕೂಡಲೇ ಕೆಕೆಆರ್‌ಟಿಸಿ ಎಲ್ಲ ಬಸ್‌ಗಳನ್ನು ಸಂತಪೂರ, ಜನವಾಡ ಗ್ರಾಮಗಳಲ್ಲಿ ನಿಲುಗಡೆ ಮಾಡಲು ಆದೇಶಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ |‌ ಸಾಲದ ಹೊರೆ : ಒಂದೇ ದಿನ ಇಬ್ಬರು ರೈತರ ಆತ್ಮಹತ್ಯೆ

ಈ ಸಂದರ್ಭದಲ್ಲಿ ಅಂಬೇಡ್ಕರ್‌ ಯುವ ಸೇನೆ ರಾಜ್ಯಾಧ್ಯಕ್ಷ ರಾಜಕುಮಾರ್‌ ಗುನ್ನಳ್ಳಿ, ಜಿಲ್ಲಾಧ್ಯಕ್ಷ ನಿತೀಶ ಉಪ್ಪೆ, ಉಪಾಧ್ಯಕ್ಷರಾದ ಲಕ್ಷ್ಮಣ ಚಕ್ರವರ್ತಿ, ಕುಮಾರ್‌ ಕಾಂತೆ, ಜಿಲ್ಲಾ ಕಾರ್ಯದರ್ಶಿ ನ್ಯೂಟಲ್‌ ಮಾರ್ಕ್‌, ಔರಾದ್‌ ತಾಲ್ಲೂಕಾಧ್ಯಕ್ಷ ಭೀಮರಾವ್‌ ಭಾವಿಕಟ್ಟಿ, ತಾಲ್ಲೂಕು ಉಪಾಧ್ಯಕ್ಷ ದಿಲೀಪ ಮೇತ್ರೆ ಸೇರಿದಂತೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...